AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಅ.7ಕ್ಕೆ ‘ಗುಡ್​ಬೈ’ ರಿಲೀಸ್​; ಗಮನ ಸೆಳೆದ ರಶ್ಮಿಕಾ ಮಂದಣ್ಣ-ಅಮಿತಾಭ್​ ಬಚ್ಚನ್​ ಪೋಸ್ಟರ್​

Goodbye Release Date: ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಲು ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ‘ಗುಡ್​ಬೈ’ ಚಿತ್ರದ ರಿಲೀಸ್​ ದಿನಾಂಕವನ್ನು ಅವರು ಖುಷಿಖುಷಿಯಿಂದ ತಿಳಿಸಿದ್ದಾರೆ.

Rashmika Mandanna: ಅ.7ಕ್ಕೆ ‘ಗುಡ್​ಬೈ’ ರಿಲೀಸ್​; ಗಮನ ಸೆಳೆದ ರಶ್ಮಿಕಾ ಮಂದಣ್ಣ-ಅಮಿತಾಭ್​ ಬಚ್ಚನ್​ ಪೋಸ್ಟರ್​
ಅಮಿತಾಭ್ ಬಚ್ಚನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Sep 03, 2022 | 10:10 PM

Share

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಒಂದಕ್ಕಿಂತ ಮತ್ತೊಂದು ಸೂಪರ್​ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರನ್ನು ಬಾಲಿವುಡ್​ ಕೈ ಬೀಸಿ ಕರೆಯಿತು. ಅಲ್ಲಿಯೂ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ​ದೊಡ್ಡ ದೊಡ್ಡ ಸ್ಟಾರ್​ ನಟರ ಜೊತೆ ಅಭಿನಯಿಸುವ ಅವಕಾಶ ಅವರಿಗೆ ಸಿಗುತ್ತಿದೆ. ಅದರಲ್ಲೂ ಅಮಿತಾಭ್​ ಬಚ್ಚನ್​ (Amitabh Bachchan) ಜೊತೆ ತೆರೆ ಹಂಚಿಕೊಳ್ಳುವುದು ಎಂದರೆ ತಮಾಷೆಯ ಮಾತಲ್ಲ. ರಶ್ಮಿಕಾ ಮಂದಣ್ಣ ಅವರಿಗೆ ‘ಗುಡ್​ಬೈ’ (Goodbye) ಚಿತ್ರದಲ್ಲಿ ಅಂಥ ಚಾನ್ಸ್​ ಸಿಕ್ಕಿತು. ಈಗ ಆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್​ 7ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈ ವಿಚಾರ ತಿಳಿಸಲು ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ.

‘ಗುಡ್​ಬೈ’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಅಪ್ಪ-ಮಗಳ ಪಾತ್ರದಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರರಂಗದ ದಿಗ್ಗಜ ನಟನ ಜೊತೆ ತೆರೆ ಹಂಚಿಕೊಂಡಿರುವುದು ರಶ್ಮಿಕಾ ಪಾಲಿನ ಹೆಚ್ಚುಗಾರಿಕೆ. ಈ ಚಿತ್ರಕ್ಕೆ ಜನರು ಯಾವ ರೀತಿ ರೆಸ್ಪಾನ್ಸ್​ ನೀಡುತ್ತಾರೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗುತ್ತಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಲು ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ‘ಗುಡ್​ ಬೈ’ ಚಿತ್ರದ ರಿಲೀಸ್​ ದಿನಾಂಕವನ್ನು ಅವರು ಖುಷಿಖುಷಿಯಿಂದ ತಿಳಿಸಿದ್ದಾರೆ. ‘ಅಪ್ಪ ಮತ್ತು ನಾನು ನಿಮ್ಮ ಕುಟುಂಬವನ್ನು ಭೇಟಿ ಆಗಲು ಅಕ್ಟೋಬರ್​ 7ರಂದು ಬರುತ್ತಿದ್ದೇವೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಅದರ ಜೊತೆ ಅವರು ಹಂಚಿಕೊಂಡಿರುವ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಅಮಿತಾಭ್​ ಬಚ್ಚನ್​ ಗಾಳಿಪಟ ಹಾರಿಸುತ್ತಿದ್ದಾರೆ. ಅವರ ಹಿಂದೆ ನಿಂತು ರಶ್ಮಿಕಾ ಮಂದಣ್ಣ ಅವರು ನಗು ಬೀರುತ್ತಿದ್ದಾರೆ. ತಂದೆ-ಮಗಳ ನಡುವಿನ ಕಥೆಯೇ ಈ ಸಿನಿಮಾದ ಹೈಲೈಟ್​ ಎಂಬುದನ್ನು ಈ ಪೋಸ್ಟರ್​ ಒತ್ತಿ ಹೇಳುತ್ತಿದೆ. ಅಮಿತಾಭ್​ ಬಚ್ಚನ್​ ಅವರು ವಯಸ್ಸಿಗೆ ತಕ್ಕಂತಹ ಪಾತ್ರಗಳಿಗೆ ಜೀವ ತುಂಬುತ್ತಾ ಇಂದಿಗೂ ಚಾರ್ಮ್​ ಉಳಿಸಿಕೊಂಡಿದ್ದಾರೆ. ಪ್ರತಿ ಸಿನಿಮಾದಲ್ಲೂ ಅವರು ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುತ್ತಾರೆ.

‘ಪುಷ್ಪ’ ಚಿತ್ರದ ಹಿಂದಿ ವರ್ಷನ್​ ಹಿಟ್​ ಆದ ಬಳಿಕ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್​ನಲ್ಲಿ ಆಫರ್​ ಹೆಚ್ಚಿದವು. ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಆ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ರಣಬೀರ್​ ಕಪೂರ್​ ಜೊತೆ ‘ಅನಿಮಲ್’ ಚಿತ್ರದಲ್ಲಿ ರಶ್ಮಿಕಾ ತೆರೆಹಂಚಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:10 pm, Sat, 3 September 22

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ