AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?

Rashmika Mandanna: ಹಿಂದಿಯ ಹಲವು ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಆ ಮೂಲಕ ಅವರು ಬಾಲಿವುಡ್​ ಮಂದಿಗೆ ಹೆಚ್ಚು ಹತ್ತಿರ ಆಗುತ್ತಿದ್ದಾರೆ.

‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
ರಶ್ಮಿಕಾ ಮಂದಣ್ಣ, ಕರಣ್​ ಜೋಹರ್
TV9 Web
| Edited By: |

Updated on: May 29, 2022 | 3:32 PM

Share

ಕರಣ್​ ಜೋಹರ್ (Karan Johar) ಅವರು ಬಾಲಿವುಡ್​ನ ಪ್ರಭಾವಿ ವ್ಯಕ್ತಿ. ಅನೇಕರಿಗೆ ಅವರೇ ಗಾಡ್​ ಫಾದರ್​. ಸ್ಟಾರ್​ ಕಿಡ್​ಗಳನ್ನು ಲಾಂಚ್​ ಮಾಡುವಲ್ಲಿ ಕರಣ್​ ಜೋಹರ್ ಫೇಮಸ್​. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿರುವ ಅವರು ಹಲವರಿಗೆ ಅವಕಾಶ ನೀಡುತ್ತಾರೆ. ನಿರ್ದೇಶಕನಾಗಿ, ನಿರೂಪಕನಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು 50ನೇ ವರ್ಷಕ್ಕೆ ಕಾಲಿಟ್ಟರು. ಕರಣ್​ ಜೋಹರ್​ ಬರ್ತ್​ಡೇ (Karan Johar Birthday) ಪಾರ್ಟಿ ಎಂದರೆ ಬಿ-ಟೌನ್​ ಸೆಲೆಬ್ರಿಟಿಗಳ ಪಾಲಿಗೆ ಏನೋ ಒಂಥರಾ ಕ್ರೇಜ್​. ಪ್ರತಿ ವರ್ಷ ಅವರು ಭರ್ಜರಿಯಾಗಿ ಔಟಣ ಕೂಟ ಏರ್ಪಡಿಸುತ್ತಾರೆ. ಅದರಲ್ಲಿ ಅನೇಕ ಮಂದಿ ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಈ ಬಾರಿ ನಟಿ ರಶ್ಮಿಕಾ ಮಂದಣ್ಣ ಅವರಿಗೂ ಈ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ ಕರಣ್​ ಜೋಹರ್​ ಒಂದು ಕಂಡೀಷನ್​ ಹಾಕಿದ್ದರು ಎನ್ನಲಾಗಿದೆ. ಏನದು? ಯಾವುದೇ ಬಾಡಿಗಾರ್ಡ್ಸ್​ ಇಲ್ಲದೇ ಈ ಪಾರ್ಟಿಗೆ ಬರಬೇಕು. ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಮಾತ್ರವಲ್ಲದೇ ಬಾಲಿವುಡ್​ನ ಎಲ್ಲ ಸೆಲೆಬ್ರಿಟಿಗಳಿಗೂ ಕರಣ್​ ಜೋಹರ್​ ಈ ಕಂಡೀಷನ್​ ಹಾಕಿದ್ದರು ಎಂದು ‘ಪಿಂಕ್​ ವಿಲ್ಲಾ’ ವೆಬ್​ಸೈಟ್​ ವರದಿ ಮಾಡಿದೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಹೊರಗಡೆ ಹೋಗುವಾಗ ಬಾಡಿಗಾರ್ಡ್ಸ್​ ಇಟ್ಟುಕೊಳ್ಳುತ್ತಾರೆ. ಜನಜಂಗುಳಿ ಪ್ರದೇಶಗಳಲ್ಲಿ ಅಭಿಮಾನಿಗಳು ಮುಗಿಬೀಳುತ್ತಾರೆ ಎಂಬ ಕಾರಣಕ್ಕೆ ಬಾಡಿಗಾರ್ಡ್ಸ್​ ಇಲ್ಲದೇ ಯಾರೂ ಕೂಡ ವಿಶೇಷ ಸಮಾರಂಭಗಳಿಗೆ ತೆರಳುವುದಿಲ್ಲ. ಆದರೆ ಈ ಬಾರಿ ಕರಣ್​ ಜೋಹರ್​ ಅವರು ಎಲ್ಲರಲ್ಲೂ ಒಂದು ಮನವಿ ಮಾಡಿಕೊಂಡಿದ್ದರು. ಬಾಡಿಗಾರ್ಡ್ಸ್​ ಇಲ್ಲದೇ ಬಂದರೆ ವಾತಾವರಣ ಚೆನ್ನಾಗಿ ಇರುತ್ತದೆ ಎಂಬುದು ಅವರ ಅಭಿಪ್ರಾಯ. ಅವರ ಮನವಿಗೆ ಎಲ್ಲರೂ ಸ್ಪಂದಿಸಿದರು ಎನ್ನಲಾಗಿದೆ. ರಶ್ಮಿಕಾ ಮಂದಣ್ಣ, ಸಲ್ಮಾನ್​ ಖಾನ್​, ಶಾರುಖ್​ ಖಾನ್​ ಮುಂತಾದವರು ಕೂಡ ಅಂಗರಕ್ಷಕರನ್ನು ತಮ್ಮೊಂದಿಗೆ ಕರೆತರದೇ ಪಾರ್ಟಿಯಲ್ಲಿ ಪಾಲ್ಗೊಂಡರು ಎಂದು ವರದಿ ಪ್ರಕಟ ಆಗಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ಇದನ್ನೂ ಓದಿ
Image
Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​
Image
ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಂದ ಸಿಕ್ತು ಮಿಲಿಯನ್​ ಲೈಕ್ಸ್​
Image
ತೃಪ್ತಿ ಆಗುವಂತೆ ಬೆವರು ಹರಿಸಿ ವರ್ಕೌಟ್​ ಮಾಡಿದ ಬಳಿಕ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನಿಂದಲೂ ಅವರಿಗೆ ಹಲವು ಅವಕಾಶಗಳು ಹರಿದು ಬರುತ್ತಿವೆ. ‘ಮಿಷನ್​ ಮಜ್ನು’, ‘ಗುಡ್​ಬೈ’ ಚಿತ್ರಗಳಲ್ಲಿ ನಟಿಸುವ ಮೂಲಕ ಅವರು ಬಾಲಿವುಡ್​ ಮಂದಿಗೆ ಹೆಚ್ಚು ಹತ್ತಿರ ಆಗುತ್ತಿದ್ದಾರೆ. ಹಾಗಾಗಿ ಅವರಿಗೆ ಕರಣ್​ ಜೋಹರ್​ ಬರ್ತ್​ಡೇ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಇತ್ತ ದಕ್ಷಿಣ ಭಾರತದಲ್ಲೂ ರಶ್ಮಿಕಾ ತುಂಬ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪುಷ್ಪ 2’ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?