AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನೀಡಿದ್ದ 50 ದಿನದ ಕಾಲ್​ಶೀಟ್​ ಅಂತ್ಯ; ಮುಂದಿನ ಗುರಿ ‘ಪುಷ್ಪ 2’

Animal Movie: ‘ಅನಿಮಲ್​’ ಸಿನಿಮಾದ ಶೂಟಿಂಗ್​ ಮುಗಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಕೊಂಚ ಎಮೋಷನಲ್​ ಆಗಿದ್ದಾರೆ. ಹಾಗಾಗಿ ಅವರು ತಮ್ಮ ಫೀಲಿಂಗ್ಸ್​ ಹಂಚಿಕೊಂಡಿದ್ದಾರೆ.

Rashmika Mandanna: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನೀಡಿದ್ದ 50 ದಿನದ ಕಾಲ್​ಶೀಟ್​ ಅಂತ್ಯ; ಮುಂದಿನ ಗುರಿ ‘ಪುಷ್ಪ 2’
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jun 21, 2023 | 7:00 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಎಲ್ಲ ಭಾಷೆಯ ಸ್ಟಾರ್​ ನಟರ ಜೊತೆ ಅಭಿನಯಿಸುವ ಅವಕಾಶ ಅವರಿಗೆ ಸಿಗುತ್ತಿದೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರ ಹವಾ ಜೋರಾಗಿದೆ. ರಣಬೀರ್​ ಕಪೂರ್​ (Ranbir Kapoor) ಜೊತೆ ಅವರು ನಟಿಸಿದ ‘ಅನಿಮಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆಗಸ್ಟ್​ 11ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈ ಸಿನಿಮಾ ಮೇಲೆ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಂದಹಾಗೆ, ರಶ್ಮಿಕಾ ಅವರು ಈ ಚಿತ್ರಕ್ಕೆ ನೀಡಿದ್ದು ಬರೋಬ್ಬರಿ 50 ದಿನಗಳ ಕಾಲ್​ಶೀಟ್​. ಅದು ಈಗ ಮುಕ್ತಾಯವಾಗಿದೆ. ಜೂನ್​ 19ರ ರಾತ್ರಿ ಅವರು ‘ಅನಿಮಲ್​’ (Animal Movie) ಸಿನಿಮಾದಲ್ಲಿನ ತಮ್ಮ ಪಾತ್ರದ ಚಿತ್ರೀಕರಣವನ್ನು ಮುಗಿಸಿಕೊಟ್ಟಿದ್ದಾರೆ. ಇನ್ನೇನಿದ್ದರೂ ಅವರ ಗಮನವೆಲ್ಲ ‘ಪುಷ್ಪ 2’ ಸಿನಿಮಾದ ಮೇಲೆ ಇರಲಿದೆ.

‘ಅನಿಮಲ್​’ ಸಿನಿಮಾದ ಶೂಟಿಂಗ್​ ಮುಗಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಕೊಂಚ ಎಮೋಷನಲ್​ ಆಗಿದ್ದಾರೆ. ಹಾಗಾಗಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಫೀಲಿಂಗ್ಸ್​ ಹಂಚಿಕೊಂಡಿದ್ದಾರೆ. ಇಡೀ ಸಿನಿಮಾ ತಂಡವನ್ನು ಅವರು ಕೊಂಡಾಡಿದ್ದಾರೆ. ಅದರಲ್ಲೂ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ಹಾಗೂ ನಾಯಕ ನಟ ರಣಬೀರ್​ ಕಪೂರ್​ ಬಗ್ಗೆ ಹೆಚ್ಚು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಅವರಿಗೆ ಈ ಸಿನಿಮಾ ಸಿಕ್ಕಿದ್ದು ಸಡನ್​ ಆಗಿ. ತುಂಬ ಖುಷಿಯಿಂದಲೇ ಅವರು ಈ ಪ್ರಾಜೆಕ್ಟ್​ ಒಪ್ಪಿಕೊಂಡಿದ್ದರು. ಈಗ ಶೂಟಿಂಗ್​ ಮುಗಿದಿದ್ದಕ್ಕೆ ಇಡೀ ತಂಡದ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ತನ್ನದೇ ಮ್ಯಾನೇಜರ್​ನಿಂದ ಮೋಸಕ್ಕೊಳಗಾದ ರಶ್ಮಿಕಾ ಮಂದಣ್ಣ? 80 ಲಕ್ಷ ರೂಪಾಯಿ ನಷ್ಟ

ಇತ್ತೀಚೆಗಷ್ಟೇ ‘ಅನಿಮಲ್​’ ಸಿನಿಮಾದ ಪ್ರೀ-ಟೀಸರ್​ ವಿಡಿಯೋ ಬಿಡುಗಡೆ ಆಗಿತ್ತು. ಅದರಲ್ಲಿ ರಣಬೀರ್​ ಕಪೂರ್ ಅವರ ಮುಖ ಸರಿಯಾಗಿ ಕಾಣಿಸಿಲ್ಲ. ಆದರೂ ಕೂಡ ಆ್ಯಕ್ಷನ್​ ಅಬ್ಬರ ಜೋರಾಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ಅವರ ಪಾತ್ರ ಹೇಗಿರಲಿದೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ‘ಅರ್ಜುನ್​ ರೆಡ್ಡಿ’ ಮತ್ತು ‘ಕಬೀರ್​ ಸಿಂಗ್​’ ಸಿನಿಮಾದ ಬಳಿಕ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Rashmika Mandanna: ಸಂತೋಷದ ಜೀವನಕ್ಕಾಗಿ ಅಭಿಮಾನಿಗಳಿಗೆ ಹೊಸ ಮಂತ್ರ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

‘ಅನಿಮಲ್​’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಮಾತ್ರವಲ್ಲದೇ ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದ ಫೇಮಸ್​ ಕಲಾವಿದರು ಕೂಡ ನಟಿಸಿದ್ದಾರೆ. ಈ ಸಿನಿಮಾದ ಮೇಕಿಂಗ್​ ಗುಣಮಟ್ಟ ಗಮನ ಸೆಳೆಯುತ್ತಿದೆ. ಮೊದಲೇ ಹೇಳಿದಂತೆ, ಪ್ರೀ-ಟೀಸರ್​ ವಿಡಿಯೋದಲ್ಲಿ ರಣಬೀರ್​ ಕಪೂರ್​ ಅವರ ಮುಖ ಪೂರ್ತಿಯಾಗಿ ಕಾಣಿಸಿಲ್ಲ. ಟೀಸರ್​ನಲ್ಲಿ ಅವರನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಟೀಸರ್​ ರಿಲೀಸ್​ ಡೇಟ್​ ಬಗ್ಗೆ ಶೀಘ್ರದಲ್ಲೇ ಮಾಹಿತಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!