AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್​ ಕಂಡು ಹೌಹಾರಿದ ವರುಣ್​ ಧವನ್​; ವೈರಲ್​ ಆಗಿದೆ ಈ ವಿಡಿಯೋ

ವಿಡಿಯೋ ಅಪ್​ಲೋಡ್​ ಮಾಡಿ ಒಂದು ಗಂಟೆ ಕಳೆಯುವುದರೊಳಗೆ 10 ಲಕ್ಷಕ್ಕೂ ಅಧಿಕ ಜನರು ಇದನ್ನು ಲೈಕ್​ ಮಾಡಿದ್ದಾರೆ. ವರುಣ್​ ಧವನ್​ಗೆ ರಶ್ಮಿಕಾ ಮಂದಣ್ಣ ಟೀಸ್​ ಮಾಡಿರುವುದು ಗಮನ ಸೆಳೆಯುತ್ತಿದೆ.

​ರಶ್ಮಿಕಾ ಮಂದಣ್ಣ ಕೊಟ್ಟ ಚಮಕ್​ ಕಂಡು ಹೌಹಾರಿದ ವರುಣ್​ ಧವನ್​; ವೈರಲ್​ ಆಗಿದೆ ಈ ವಿಡಿಯೋ
ರಶ್ಮಿಕಾ ಮಂದಣ್ಣ, ವರುಣ್ ಧವನ್
Follow us
TV9 Web
| Updated By: ಮದನ್​ ಕುಮಾರ್​

Updated on: Mar 10, 2022 | 3:13 PM

ಪ್ರತಿ ದಿನ ಹತ್ತು ಹಲವು ಕಾರಣಗಳಿಂದಾಗಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸುದ್ದಿ ಆಗುತ್ತಿದ್ದಾರೆ. ಅದರಲ್ಲೂ ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಆ ಸಿನಿಮಾ ತೆಲುಗಿನಲ್ಲಿ ತಯಾರಾಗಿದ್ದರೂ ಹಿಂದಿಗೆ ಡಬ್​ ಆಗಿ ಉತ್ತರ ಭಾರತದಲ್ಲಿ ಭರ್ಜರಿ ಪ್ರದರ್ಶನ ಕಂಡಿತು. 100 ಕೋಟಿಗೂ ಹೆಚ್ಚು ಆದಾಯವನ್ನು ಹಿಂದಿ ವರ್ಷನ್​ನಿಂದ ಗಳಿಸಿತು. ‘ಪುಷ್ಪ’ ಗೆಲುವಿನ ಬಳಿಕ ಬಾಲಿವುಡ್​ನಿಂದ ರಶ್ಮಿಕಾ ಮಂದಣ್ಣ ಅವರಿಗೆ ಒಳ್ಳೊಳ್ಳೆಯ ಆಫರ್​ಗಳು ಬರುತ್ತಿವೆ. ಈಗಾಗಲೇ ಅವರು ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಅಮಿತಾಭ್​ ಬಚ್ಚನ್​ ಮುಂತಾದ ಸ್ಟಾರ್​ ಕಲಾವಿದರ ಜೊತೆ ನಟಿಸುವ ಚಾನ್ಸ್​ ಗಿಟ್ಟಿಸಿದ್ದಾರೆ. ಅವರ ಮೊದಲ ಬಾಲಿವುಡ್ (Bollywood)​ ಸಿನಿಮಾ ‘ಮಿಷನ್​ ಮಜ್ನು’ ಬಿಡುಗಡೆ ಆಗುವುದಕ್ಕೂ ಮುನ್ನವೇ ಹಿಂದಿ ಪ್ರೇಕ್ಷಕರ ವಲಯದಲ್ಲಿ ರಶ್ಮಿಕಾ ಫುಲ್​ ಫೇಮಸ್​ ಆಗಿದ್ದಾರೆ. ಅಷ್ಟೇ ಅಲ್ಲ, ಬಾಲಿವುಡ್​ ಸೆಲೆಬ್ರಿಟಿಗಳ ಜೊತೆಗೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಈಗ ಅವರು ಖ್ಯಾತ ನಟ ವರುಣ್​ ಧವನ್​ (Varun Dhawan) ಜೊತೆ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ವರುಣ್​ಗೆ ರಶ್ಮಿಕಾ ಚಮಕ್​ ನೀಡಿದ್ದಾರೆ.

ದಳಪತಿ ವಿಜಯ್​ ಮತ್ತು ಪೂಜಾ ಹೆಗ್ಡೆ ನಟನೆಯ ‘ಬೀಸ್ಟ್​’ ಸಿನಿಮಾದ ‘ಅರೇಬಿಕ್​ ಕುತು..’ ಹಾಡು ಸಿಕ್ಕಾಪಟ್ಟೆ ಫೇಮಸ್​ ಆಗಿದೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಹಾಡಿಗೆ ರೀಲ್ಸ್​ ಮಾಡುತ್ತಿದ್ದಾರೆ. ಆ ಸಾಲಿಗೆ ರಶ್ಮಿಕಾ ಮಂದಣ್ಣ ಮತ್ತು ವರುಣ್​ ಧವನ್​ ಕೂಡ ಸೇರಿಕೊಂಡಿದ್ದಾರೆ. ಸಮುದ್ರ ತೀರದಲ್ಲಿ ಇಬ್ಬರೂ ಜೋಡಿಯಾಗಿ ಡ್ಯಾನ್ಸ್​ ಮಾಡಿದ್ದಾರೆ. ಆ ವಿಡಿಯೋವನ್ನು ರಶ್ಮಿಕಾ ಮಂದಣ್ಣ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ಅಪ್​ಲೋಡ್​ ಮಾಡಿ ಒಂದು ಗಂಟೆ ಕಳೆಯುವುದರೊಳಗೆ 10 ಲಕ್ಷಕ್ಕೂ ಅಧಿಕ ಜನರು ಇದನ್ನು ಲೈಕ್​ ಮಾಡಿದ್ದಾರೆ. ಅದರಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ಏನೆಂದರೆ ವರುಣ್​ ಧವನ್​ಗೆ ರಶ್ಮಿಕಾ ಮಂದಣ್ಣ ಟೀಸ್​ ಮಾಡಿದ್ದಾರೆ. ಡ್ಯಾನ್ಸ್​ ಮುಗಿಸಿದ ಬಳಿಕ ವರುಣ್​ ಅವರ ಮೊಣಕಾಲಿನ ಬಳಿಗೆ ಸಡನ್​ ಆಗಿ ಕೈ ತೆಗೆದುಕೊಂಡು ಹೋಗಿ ಚಮಕ್​ ನೀಡಿದ್ದಾರೆ ರಶ್ಮಿಕಾ. ಆ ಕ್ಷಣ ವರುಣ್​ ಧವನ್​ ಹೌಹಾರಿದ್ದಾರೆ.

View this post on Instagram

A post shared by VarunDhawan (@varundvn)

ಅಷ್ಟಕ್ಕೂ ವರುಣ್​ ಧವನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಇಬ್ಬರು ಜೋಡಿಯಾಗಿ ನಟಿಸುವ ಯಾವುದೇ ಹೊಸ ಸಿನಿಮಾ ಬಗ್ಗೆಯೂ ಈವರೆಗೆ ಅಧಿಕೃತ ಘೋಷಣೆ ಆಗಿಲ್ಲ. ಇವರಿಬ್ಬರು ಯಾವುದೋ ಜಾಹೀರಾತಿನಲ್ಲಿ ಒಟ್ಟಿಗೆ ಅಭಿನಯಿಸುತ್ತಿರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ರಶ್ಮಿಕಾ ನಟನೆಯ ಮೊದಲ ಬಾಲಿವುಡ್​ ಚಿತ್ರ ‘ಮಿಷನ್​ ಮಜ್ನು’ ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಂಡಿದೆ. ಜೂನ್​ 10ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

ಇನ್ನು, ‘ಬೀಸ್ಟ್​’ ಸಿನಿಮಾದ ‘ಅರೇಬಿಕ್​ ಕುತು..’ ಹಾಡಿನ ಬಗ್ಗೆ ಹೇಳುವುದಾದರೆ ಯೂಟ್ಯೂಬ್​ನಲ್ಲಿ ಈ ಗೀತೆಯನ್ನು 150 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಮಾಡಲಾಗಿದೆ. ಈ ಹಾಡಿನಲ್ಲಿ ದಳಪತಿ ವಿಜಯ್​ ಹಾಗೂ ಪೂಜಾ ಹೆಗ್ಡೆ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಸದ್ಯಕ್ಕೆ ಬಿಡುಗಡೆ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಈ ಗೀತೆಗೆ ಅನಿರುದ್ಧ್ ರವಿಚಂದರ್​ ಸಂಗೀತ ನೀಡಿದ್ದಾರೆ. ಶಿವಕಾರ್ತಿಕೇಯನ್​ ಲಿರಿಕ್ಸ್​ ಬರೆದು ಮಿಂಚುತ್ತಿದ್ದಾರೆ. ಜಾನಿ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ಶೂಟಿಂಗ್​ ವೇಳೆ ತೆರೆ ಹಿಂದೆ ರಶ್ಮಿಕಾ ಮಂದಣ್ಣ ಮಾಡುವ ತರ್ಲೆ-ತಮಾಷೆಗೆ ಈ ವಿಡಿಯೋ ಸಾಕ್ಷಿ

‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್