Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಸಂಜಯ್​ ಲೀಲಾ ಬನ್ಸಾಲಿ ಆಫೀಸ್​ನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಶೀಘ್ರದಲ್ಲೇ ಸಿಗಲಿದೆ ಬಿಗ್​ ನ್ಯೂಸ್​

Rashmika Mandanna | Sanjay Leela Bhansali: ಸಂಜಯ್​ ಲೀಲಾ ಬನ್ಸಾಲಿ ಅವರ ಗರಡಿಯಲ್ಲಿ ಪಳಗಿದ ಕಲಾವಿದರಿಗೆ ಚಿತ್ರರಂಗದಲ್ಲಿ ವಿಶೇಷ ಮನ್ನಣೆ ಸಿಗುತ್ತದೆ. ಈಗ ಅವರನ್ನು ರಶ್ಮಿಕಾ ಮಂದಣ್ಣ ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ.

Rashmika Mandanna: ಸಂಜಯ್​ ಲೀಲಾ ಬನ್ಸಾಲಿ ಆಫೀಸ್​ನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಶೀಘ್ರದಲ್ಲೇ ಸಿಗಲಿದೆ ಬಿಗ್​ ನ್ಯೂಸ್​
ರಶ್ಮಿಕಾ ಮಂದಣ್ಣ, ಸಂಜಯ್ ಲೀಲಾ ಬನ್ಸಾಲಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 29, 2022 | 3:10 PM

ನಟಿ ರಶ್ಮಿಕಾ ಮಂದಣ್ಣ ಅವರನ್ನು ಒಂದು ವರ್ಗದ ಜನರು ಟ್ರೋಲ್​ ಮಾಡುತ್ತಲೇ ಇದ್ದಾರೆ. ಆದರೆ ಯಾರು ಎಷ್ಟೇ ಟ್ರೋಲ್​ ಮಾಡಿದರೂ ರಶ್ಮಿಕಾ ಮಂದಣ್ಣ (Rashmika Mandanna) ಅವರ ಬೆಳವಣಿಗೆಗೆ ಅದರಿಂದ ತೊಂದರೆ ಆಗಿಲ್ಲ. ಒಂದಕ್ಕಿಂತ ಮತ್ತೊಂದು ದೊಡ್ಡ ಸಿನಿಮಾಗಳ ಅವಕಾಶಗಳು ಅವರಿಗೆ ಒಲಿದು ಬರುತ್ತಲೇ ಇವೆ. ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಬೆಳೆದಿರುವ ಅವರು ಈಗ ಬಾಲಿವುಡ್ (Bollywood)​ ಅಂಗಳದಲ್ಲೂ ತಮ್ಮ ನೆಲೆಯನ್ನು ಭದ್ರ ಪಡಿಸಿಕೊಳ್ಳುತ್ತಿದ್ದಾರೆ. ಅಚ್ಚರಿ ಏನೆಂದರೆ ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali) ಅವರ ಜೊತೆ ರಶ್ಮಿಕಾ ಮಂದಣ್ಣ ಸಿನಿಮಾ ಮಾಡುವ ಸಾಧ್ಯತೆ ದಟ್ಟವಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಅವರು ಬನ್ಸಾಲಿ ಕಚೇರಿಗೆ ಭೇಟಿ ನೀಡಿದ ಫೋಟೋಗಳು ವೈರಲ್​ ಆಗಿವೆ. ಈ ಬಗ್ಗೆ ಶೀಘ್ರದಲ್ಲೇ ದೊಡ್ಡ ಸುದ್ದಿ​ ಹೊರಬರಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಸಂಜಯ್​ ಲೀಲಾ ಬನ್ಸಾಲಿ ಅವರು ಸೋಲಿಲ್ಲದ ಸರದಾರನಂತೆ ತಮ್ಮ ಛಾಪು ಮೂಡಿಸಿದ್ದಾರೆ. ‘ಬಾಜಿರಾವ್​ ಮಸ್ತಾನಿ’, ‘ಪದ್ಮಾವತ್​’, ‘ಗಂಗೂಭಾಯಿ ಕಾಠಿಯಾವಾಡಿ’ ಮುಂತಾದ ಸಿನಿಮಾಗಳ ಮೂಲಕ ಅವರು ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಅಂಥ ಡೈರೆಕ್ಟರ್​ ಜೊತೆ ಸಿನಿಮಾ ಮಾಡುವ ಅವಕಾಶ ಸಿಕ್ಕರೆ ರಶ್ಮಿಕಾ ಮಂದಣ್ಣ ಅವರ ಅದೃಷ್ಟದ ಬಾಗಿಲು ತೆರೆದಂತೆಯೇ ಸರಿ.

ಸಂಜಯ್​ ಲೀಲಾ ಬನ್ಸಾಲಿ ಅವರ ಗರಡಿಯಲ್ಲಿ ಪಳಗಿದ ಕಲಾವಿದರಿಗೆ ಚಿತ್ರರಂಗದಲ್ಲಿ ವಿಶೇಷ ಮನ್ನಣೆ ಸಿಗುತ್ತದೆ. ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ ಮುಂತಾದ ಕಲಾವಿದರಿಗೆ ಬನ್ಸಾಲಿ ಅವರು ಗುರು ಸ್ಥಾನದಲ್ಲಿದ್ದಾರೆ. ಈಗ ಅವರನ್ನು ರಶ್ಮಿಕಾ ಮಂದಣ್ಣ ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Rashmika Mandanna: ‘ರೊಮ್ಯಾಂಟಿಕ್​ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್​ ಬೆಸ್ಟ್​’ ಎಂದ ರಶ್ಮಿಕಾ; ಟ್ರೋಲ್ ಶುರು

ರಶ್ಮಿಕಾ ಮಂದಣ್ಣ ನಟಿಸಿದ ಬಾಲಿವುಡ್​ನ ‘ಗುಡ್​ ಬೈ’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಈಗ ಅವರ ಎರಡನೇ ಸಿನಿಮಾ ‘ಮಿಷನ್​ ಮಜ್ನು’ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. 2023ರ ಜನವರಿ 20ರಂದು ಈ ಚಿತ್ರ ನೆಟ್​ಫ್ಲಿಕ್ಸ್​ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ಇದರಲ್ಲಿ ಸಿದ್ದಾರ್ಥ್​ ಮಲ್ಹೋತ್ರ ಅವರಿಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

‘ಮಿಷನ್​ ಮಜ್ನು’ ಚಿತ್ರದ ಮೊದಲ ಸಾಂಗ್​ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ‘ದಕ್ಷಿಣ ಭಾರತಕ್ಕೆ ಹೋಲಿಸಿದರೆ ರೊಮ್ಯಾಂಟಿಕ್​ ಹಾಡುಗಳಲ್ಲಿ ಹಿಂದಿ ಚಿತ್ರರಂಗವೇ ಬೆಸ್ಟ್​’ ಎಂದು ರಶ್ಮಿಕಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಸೌತ್​ ಸಿನಿಮಾಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಜಯನಗರ ವೈಭವವನ್ನು ಹಾಡಿನ ಮೂಲಕ ಕೊಂಡಾಡಿದ ರಮೇಶ್ ಅರವಿಂದ್
ವಿಜಯನಗರ ವೈಭವವನ್ನು ಹಾಡಿನ ಮೂಲಕ ಕೊಂಡಾಡಿದ ರಮೇಶ್ ಅರವಿಂದ್
ಮುಂದಿನ ವರ್ಷ ಮತ್ತಷ್ಟು ಅದ್ದೂರಿಯಾಗಿ ಹಂಪಿ ಉತ್ಸವ ಅಚರಣೆ: ಜಮೀರ್ ಅಹ್ಮದ್
ಮುಂದಿನ ವರ್ಷ ಮತ್ತಷ್ಟು ಅದ್ದೂರಿಯಾಗಿ ಹಂಪಿ ಉತ್ಸವ ಅಚರಣೆ: ಜಮೀರ್ ಅಹ್ಮದ್
ಜಹಾನ್​-ಎ-ಖುಸ್ರೋ ಸೂಫಿ ಸಂಗೀತ ಉತ್ಸವದ ಝಲಕ್ ಹಂಚಿಕೊಂಡ ಮೋದಿ
ಜಹಾನ್​-ಎ-ಖುಸ್ರೋ ಸೂಫಿ ಸಂಗೀತ ಉತ್ಸವದ ಝಲಕ್ ಹಂಚಿಕೊಂಡ ಮೋದಿ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?