ಮರಾಠಿ ಭಾಷೆ ಕಲಿತ ನಟಿ ರಶ್ಮಿಕಾ ಮಂದಣ್ಣ; ಕಾರಣ ಏನು ಗೊತ್ತಾ?

ಕೊಡಗಿನ ಸುಂದರಿ ರಶ್ಮಿಕಾ ಮಂದಣ್ಣ ಅವರು ಭಾಷೆಗಳ ಗಡಿ ಮೀರಿ ಬೆಳೆಯುತ್ತಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಪಾತ್ರಕ್ಕೆ ತಕ್ಕಂತೆ ಭಾಷೆಗಳನ್ನು ಅವರು ಕಲಿಯುತ್ತಿದ್ದಾರೆ. ಮರಾಠಿ ಭಾಷೆ ಕಲಿಯಲು ರಶ್ಮಿಕಾ ಮಂದಣ್ಣ ಅವರು 4 ವಾರಗಳ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಅವರ ಜೊತೆ ವಿಕ್ಕಿ ಕೌಶಲ್​ ಅವರು ಕೂಡ ಮರಾಠಿ ಕಲಿಕೆಯಲ್ಲಿ ನಿರತರಾಗಿದ್ದಾರೆ.

ಮರಾಠಿ ಭಾಷೆ ಕಲಿತ ನಟಿ ರಶ್ಮಿಕಾ ಮಂದಣ್ಣ; ಕಾರಣ ಏನು ಗೊತ್ತಾ?
ರಶ್ಮಿಕಾ ಮಂದಣ್ಣ
Follow us
|

Updated on: Aug 06, 2024 | 7:40 PM

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹತ್ತಾರು ಅವಕಾಶಗಳು ಸಿಗುತ್ತಿವೆ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಬಾಲಿವುಡ್​ನಲ್ಲಿ ರಶ್ಮಿಕಾ ಅವರು ಸಖತ್​ ಶೈನ್​ ಆಗುತ್ತಿದ್ದಾರೆ. ಈಗ ಅವರು ವಿಕ್ಕಿ ಕೌಶಲ್​ ಜೊತೆ ‘ಚವ್ವ’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಸಲುವಾಗಿ ಮರಾಠಿ ಕಲಿತಿದ್ದಾರೆ ಎಂದು ಸುದ್ದಿಯಾಗಿದೆ. ಇದು ಹಿಂದಿ ಸಿನಿಮಾ. ಹಾಗಿದ್ದರೂ ಕೂಡ ಪಾತ್ರಕ್ಕಾಗಿ ಮರಾಠಿ ಕಲಿಯುವುದು ಅಗತ್ಯವಾಗಿದೆ.

ಛತ್ರಪತಿ ಸಂಭಾಜಿ ಮಹಾರಾಜ್​ ಅವರ ಜೀವನದ ಕಥೆಯನ್ನು ಆಧರಿಸಿ ‘ಚವ್ವ’ ಸಿನಿಮಾ ಮೂಡಿಬರುತ್ತಿದೆ. ಶಿವಾಜಿಯ ಪುತ್ರನಾದ ಸಂಭಾಜಿ ಓರ್ವ ಮರಾಠಿ ವೀರ. ಸಂಭಾಜಿ ಪತ್ನಿ ಎಸುಬಾಯಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರು ನಿಭಾಯಿಸಲಿದ್ದಾರೆ. ಈ ಚಿತ್ರದ ಹಲವು ಸಂಭಾಷಣೆಗಳು ಮರಾಠಿ ಭಾಷೆಯಲ್ಲಿ ಇರಲಿವೆ. ಹಾಗಾಗಿ ಕಲಾವಿದರು ಮರಾಠಿ ಕಲಿಯುತ್ತಿದ್ದಾರೆ.

‘ಚವ್ವ’ ಸಿನಿಮಾದಲ್ಲಿನ ಪಾತ್ರಕ್ಕೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಧ್ವನಿ ನೀಡಲಿದ್ದಾರೆ. ಹಾಗಾಗಿ ಅವರು ಮರಾಠಿ ಭಾಷೆಯ ಸಂಭಾಷಣೆಗಳನ್ನು ಸರಿಯಾಗಿ ಉಚ್ಛರಿಸಬೇಕು. ಆದ್ದರಿಂದ 4 ವಾರಗಳ ಕಾಲ ಅವರು ವಿಶೇಷ ತರಬೇತಿ ಪಡೆದುಕೊಂಡು ಮರಾಠಿ ಕಲಿತಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಈ ಸಿನಿಮಾಗೆ ಲಕ್ಷ್ಮಣ್​ ಉಟೇಕರ್​ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ವಯನಾಡ್​ ಭೂಕುಸಿತ: 10 ಲಕ್ಷ ರೂಪಾಯಿ ದೇಣಿಗೆ ನೀಡಿದ ರಶ್ಮಿಕಾ ಮಂದಣ್ಣ

ಸೌತ್​ ಸಿನಿಮಾ ಇಂಡಸ್ಟ್ರಿಯಲ್ಲಿ ಸೂಪರ್​ ಸ್ಟಾರ್​ ಆದ ರಶ್ಮಿಕಾ ಮಂದಣ್ಣ ಅವರನ್ನು ಬಾಲಿವುಡ್​ ಕೂಡ ಕೈ ಬೀಸಿ ಕರೆಯಿತು. ‘ಅನಿಮಲ್​’ ಸಿನಿಮಾದಿಂದ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ಹಾಗಾಗಿ ಹಿಂದಿ ಸಿನಿಮಾ ಮಂದಿಗೆ ರಶ್ಮಿಕಾ ಫೇವರಿಟ್​ ಆಗಿದ್ದಾರೆ. ‘ಚವ್ವ’ ಚಿತ್ರದಲ್ಲಿ ವಿಕ್ಕಿ ಕೌಶಲ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಲಿದ್ದಾರೆ.

ಇತ್ತೀಚೆಗೆ ‘ಬ್ಯಾಡ್​ ನ್ಯೂಸ್​’ ಸಿನಿಮಾದ ‘ತೋಬಾ ತೋಬಾ..’ ಹಾಡಿನಿಂದ ವಿಕ್ಕಿ ಕೌಶಲ್​ ಸೆನ್ಸೇಷನ್​ ಸೃಷ್ಟಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ ಮೊದಲು ಒಂದು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಕ್ಕಿ ಕೌಶಲ್​ ಅವರು ತೆರೆ ಹಂಚಿಕೊಂಡಿದ್ದರು. ಆ ಜಾಹೀರಾತು ವಿವಾದ ಸೃಷ್ಟಿ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು