AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ರೊಮ್ಯಾಂಟಿಕ್​ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್​ ಬೆಸ್ಟ್​’ ಎಂದ ರಶ್ಮಿಕಾ; ಟ್ರೋಲ್ ಶುರು

Bollywood Vs South Film Industry: ಹಿಂದಿ ಮಂದಿಯನ್ನು ಓಲೈಸುವ ಭರದಲ್ಲಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು ರಶ್ಮಿಕಾ ಮಂದಣ್ಣ ಜರಿದಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

Rashmika Mandanna: ‘ರೊಮ್ಯಾಂಟಿಕ್​ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್​ ಬೆಸ್ಟ್​’ ಎಂದ ರಶ್ಮಿಕಾ; ಟ್ರೋಲ್ ಶುರು
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Dec 28, 2022 | 9:09 PM

Share

ಕನ್ನಡದ ಪ್ರೇಕ್ಷಕರಿಗೆ ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ಕಂಡರೆ ಅಷ್ಟಕ್ಕಷ್ಟೇ ಎಂಬುದಕ್ಕೆ ಸೋಶಿಯಲ್​ ಮೀಡಿಯಾ ಕಮೆಂಟ್​ಗಳೇ ಸಾಕ್ಷಿ. ಅದರ ಜೊತೆಯಲ್ಲಿ ಈಗ ಅವರು ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು ಕೆಣಕುವಂತಹ ಹೇಳಿಕೆ ನೀಡಿದ್ದಾರೆ. ಬಾಲಿವುಡ್​ (Bollywood) ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆಯುತ್ತಿರುವ ರಶ್ಮಿಕಾ ಮಂದಣ್ಣ ಅವರು ಹಿಂದಿ ಮಂದಿಯನ್ನು ಓಲೈಸುವ ಭರದಲ್ಲಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು (South Film Industry) ಜರಿದಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ‘ರೊಮ್ಯಾಂಟಿಕ್​ ಸಾಂಗ್ಸ್​ ವಿಚಾರದಲ್ಲಿ ಹಿಂದಿ ಚಿತ್ರರಂಗವೇ ಬೆಸ್ಟ್​’ ಎಂದು ರಶ್ಮಿಕಾ ಹೇಳಿದ್ದಾರೆ. ಇದನ್ನು ಇಟ್ಟುಕೊಂಡು ಅವರನ್ನು ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲು ಆರಂಭಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ‘ಮಿಷನ್​ ಮಜ್ನು’. ಆದರೆ ಕಾರಣಾಂತರಗಳಿಂದ ಅದರ ಬಿಡುಗಡೆ ತಡವಾಯಿತು. ಅದಕ್ಕೂ ಮುನ್ನ ‘ಗುಡ್​ ಬೈ’ ರಿಲೀಸ್​ ಆಯಿತು. ಈಗ ‘ಮಿಷನ್​ ಮಜ್ನು’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. 2023ರ ಜನವರಿ 20ರಂದು ಈ ಚಿತ್ರ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಅದರ ಪ್ರಮೋಷನ್​ ಸಲುವಾಗಿ ಮೊದಲ ಸಾಂಗ್​ ರಿಲೀಸ್​ ಮಾಡಲಾಗಿದೆ.

‘ಮಿಷನ್​ ಮಜ್ನು’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ರೊಮ್ಯಾಂಟಿಕ್​ ಸಾಂಗ್​ಗಳ ಬಗ್ಗೆ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ‘ದಕ್ಷಿಣ ಭಾರತದಲ್ಲಿ ಮಾಸ್​ ಮಸಾಲಾ, ಐಟಂ ಸಾಂಗ್​ಗಳು ಇರುತ್ತವೆ. ಆದರೆ ರೊಮ್ಯಾಂಟಿಕ್​ ಸಾಂಗ್​ ವಿಚಾರದಲ್ಲಿ ಬಾಲಿವುಡ್​ ಬೆಸ್ಟ್​. ಬಾಲಿವುಡ್​ನಲ್ಲಿ ನನ್ನ ಮೊದಲ ರೊಮ್ಯಾಂಟಿಕ್​ ಹಾಡು ಬರುತ್ತಿದೆ. ನೀವೆಲ್ಲ ಕೇಳಬೇಕು ಅಂತ ನಾನು ಸಖತ್​ ಎಗ್ಸೈಟ್​ ಆಗಿದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

ಕನ್ನಡದಲ್ಲಿಯೇ ಬೇಕಾದಷ್ಟು ರೊಮ್ಯಾಂಟಿಕ್​ ಹಾಡುಗಳಿವೆ. ದಕ್ಷಿಣ ಭಾರತದಲ್ಲಿ ಇಳೆಯರಾಜ, ಹಂಸಲೇಖ, ರಾಜನ್​-ನಾಗೇಂದ್ರ ಅವರಂತಹ ಮಹಾನ್​ ಸಂಗೀತ ನಿರ್ದೇಶಕರು ಎಲ್ಲ ಕಾಲಕ್ಕೂ ಸಲ್ಲುವಂತಹ ರೊಮ್ಯಾಂಟಿಕ್​ ಹಾಡುಗಳನ್ನು ನೀಡಿದ್ದಾರೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಮಂದಿಯೇ ಬೆಸ್ಟ್​ ಎಂದು ಹೇಳಿರುವುದು ಸೌತ್​ ಸಿನಿಮಾಪ್ರೇಮಿಗಳ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ:Varisu: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’

ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಗುಡ್​ ಬೈ’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಈಗ ‘ಮಿಷನ್​ ಮಜ್ನು’ ಕೂಡ ಕಾನ್ಫಿಡೆನ್ಸ್​ ಇಲ್ಲದೇ ಒಟಿಟಿ ದಾರಿ ಹಿಡಿದಿದೆ. ಈ ಸಿನಿಮಾ ಸದ್ದು ಮಾಡಿದರೆ ಮಾತ್ರ ಅವರಿಗೆ ಹಿಂದಿಯಲ್ಲಿ ಹೆಚ್ಚಿನ ಅವಕಾಶಗಳು ಬರಲಿವೆ. ಇಲ್ಲವಾದರೆ ಅವರ ಬಾಲಿವುಡ್​ ಪಯಣ ಕಷ್ಟವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:09 pm, Wed, 28 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್