AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಥ ಗಂಡಸರನ್ನು ನಂಬೋಕೆ ಭಯ ಆಗತ್ತೆ’: ರಶ್ಮಿಕಾ ಮಂದಣ್ಣ ಶಾಕಿಂಗ್​ ಹೇಳಿಕೆ

ಕನ್ನಡ ಚಿತ್ರರಂಗದಿಂದ ಸಿನಿ ಜರ್ನಿ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಸ್ಟಾರ್​ ನಟರಿಗೆ ಜೋಡಿಯಾಗಿ ಅವರು ನಟಿಸುತ್ತಿದ್ದಾರೆ. ಗಂಡಸರ ಬಗ್ಗೆ ಅವರು ಹಂಚಿಕೊಂಡ ಅಭಿಪ್ರಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅಭಿಮಾನಿಯೊಬ್ಬರ ಪೋಸ್ಟ್​ಗೆ ರಶ್ಮಿಕಾ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಅಂಥ ಗಂಡಸರನ್ನು ನಂಬೋಕೆ ಭಯ ಆಗತ್ತೆ’: ರಶ್ಮಿಕಾ ಮಂದಣ್ಣ ಶಾಕಿಂಗ್​ ಹೇಳಿಕೆ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jun 13, 2024 | 6:51 PM

Share

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಅನಿಮಲ್​’ (Animal) ಸಿನಿಮಾದಿಂದ ಸಿಕ್ಕ ಖ್ಯಾತಿ ಸಣ್ಣದೇನಲ್ಲ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿತು. ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಭದ್ರವಾಗಿ ನೆಲೆ ಕಂಡುಕೊಳ್ಳಲು ಈ ಸಿನಿಮಾ ಸಹಕಾರಿ ಆಯಿತು. ಆದರೆ ಒಂದು ವರ್ಗದ ಜನರು ‘ಅನಿಮಲ್​’ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದಾರೆ. ರಣಬೀರ್​ ಕಪೂರ್​ (Ranbir Kapoor) ಮಾಡಿದ ರಣ್​ವಿಜಯ್​ ಸಿಂಗ್​ ಎಂಬ ಪಾತ್ರಕ್ಕೆ ತುಂಬ ಟೀಕೆ ವ್ಯಕ್ತವಾಯಿತು. ಅದೇ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಚರ್ಚೆ ಆರಂಭ ಆಗಿದೆ. ಅದಕ್ಕೆ ರಶ್ಮಿಕಾ ಮಂದಣ್ಣ ಕೂಡ ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಅನಿಮಲ್​’ ಸಿನಿಮಾದ ಕಥೆಯಲ್ಲಿ ರಣ್​ವಿಜಯ್​ ಸಿಂಗ್​ ಹಾಗೂ ಗೀತಾಂಜಲಿ ಪ್ರೀತಿಸಿ ಮದುವೆ ಆಗಿರುತ್ತಾರೆ. ಎಂದಿಗೂ ನಿನಗೆ ಮೋಸ ಮಾಡಲ್ಲ ಅಂತ ರಣ್​ವಿಜಯ್​ ಸಿಂಗ್​ ಪ್ರಮಾಣ ಮಾಡಿರುತ್ತಾನೆ. ಹಾಗಿದ್ದರೂ ಕೂಡ ಆತ ಪರಸ್ತ್ರೀ ಸಹವಾಸ ಮಾಡಿ, ಗೀತಾಂಜಲಿಗೆ ಮೋಸ ಮಾಡುತ್ತಾನೆ. ಆ ವಿಡಿಯೋ ತುಣುಕನ್ನು ಅಭಿಮಾನಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಬ್ಬ ಗಂಡಸನ್ನು ನಂಬುವುದಕ್ಕಿಂತ ಭಯಾನಕವಾದ ವಿಷಯ ಬೇರೇನೂ ಇಲ್ಲ’ ಎಂದು ಈ ವಿಡಿಯೋಗೆ ಅಭಿಮಾನಿಯೊಬ್ಬರು ಕ್ಯಾಪ್ಷನ್​ ನೀಡಿದ್ದಾರೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಆ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಅವರು, ‘ತಿದ್ದುಪಡಿ: ಮೂರ್ಖನಾದ ಗಂಡಸನ್ನು ನಂಬುವುದು ಭಯಾನಕ. ತುಂಬ ಒಳ್ಳೆಯ ಗಂಡಸರು ಇದ್ದಾರೆ. ಅಂಥವರನ್ನು ನಂಬುವುದು ವಿಶೇಷ’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಮತ್ತೆ ಡೀಪ್​ಫೇಕ್​ ಕಾಟ; ಅರೆಸ್ಟ್​ ಆದರೂ ಬುದ್ಧಿ ಕಲಿಯದ ಕಿಡಿಗೇಡಿಗಳು

ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದಲ್ಲಿ ಮೂಡಿಬಂದ ‘ಅನಿಮಲ್​’ ಸಿನಿಮಾದಲ್ಲಿ ಅನೇಕ ದೃಶ್ಯಗಳು ಸ್ತ್ರೀ ವಿರೋಧಿ ಆಗಿವೆ ಎಂದು ಹಲವರು ತಕರಾರು ತೆಗೆದಿದ್ದರು. ಹಲವು ವಿಮರ್ಶಕರು ಕೂಡ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಿನಿಮಾದಲ್ಲಿ ಕ್ರೌರ್ಯ ಅತಿಯಾಗಿದೆ ಎಂಬ ಟೀಕೆ ಕೂಡ ಕೇಳಿಬಂತು. ಹಾಗಿದ್ದರೂ ಕೂಡ ಸಿನಿಮಾ ಯಶಸ್ಸು ಕಂಡಿತು. ಬಾಬಿ ಡಿಯೋಲ್​ ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿತು. ತೃಪ್ತಿ ದಿಮ್ರಿ ಕೂಡ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್