AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಥ ಗಂಡಸರನ್ನು ನಂಬೋಕೆ ಭಯ ಆಗತ್ತೆ’: ರಶ್ಮಿಕಾ ಮಂದಣ್ಣ ಶಾಕಿಂಗ್​ ಹೇಳಿಕೆ

ಕನ್ನಡ ಚಿತ್ರರಂಗದಿಂದ ಸಿನಿ ಜರ್ನಿ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಸ್ಟಾರ್​ ನಟರಿಗೆ ಜೋಡಿಯಾಗಿ ಅವರು ನಟಿಸುತ್ತಿದ್ದಾರೆ. ಗಂಡಸರ ಬಗ್ಗೆ ಅವರು ಹಂಚಿಕೊಂಡ ಅಭಿಪ್ರಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅಭಿಮಾನಿಯೊಬ್ಬರ ಪೋಸ್ಟ್​ಗೆ ರಶ್ಮಿಕಾ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಅಂಥ ಗಂಡಸರನ್ನು ನಂಬೋಕೆ ಭಯ ಆಗತ್ತೆ’: ರಶ್ಮಿಕಾ ಮಂದಣ್ಣ ಶಾಕಿಂಗ್​ ಹೇಳಿಕೆ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Jun 13, 2024 | 6:51 PM

Share

ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಅನಿಮಲ್​’ (Animal) ಸಿನಿಮಾದಿಂದ ಸಿಕ್ಕ ಖ್ಯಾತಿ ಸಣ್ಣದೇನಲ್ಲ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿತು. ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಭದ್ರವಾಗಿ ನೆಲೆ ಕಂಡುಕೊಳ್ಳಲು ಈ ಸಿನಿಮಾ ಸಹಕಾರಿ ಆಯಿತು. ಆದರೆ ಒಂದು ವರ್ಗದ ಜನರು ‘ಅನಿಮಲ್​’ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದಾರೆ. ರಣಬೀರ್​ ಕಪೂರ್​ (Ranbir Kapoor) ಮಾಡಿದ ರಣ್​ವಿಜಯ್​ ಸಿಂಗ್​ ಎಂಬ ಪಾತ್ರಕ್ಕೆ ತುಂಬ ಟೀಕೆ ವ್ಯಕ್ತವಾಯಿತು. ಅದೇ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಚರ್ಚೆ ಆರಂಭ ಆಗಿದೆ. ಅದಕ್ಕೆ ರಶ್ಮಿಕಾ ಮಂದಣ್ಣ ಕೂಡ ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಅನಿಮಲ್​’ ಸಿನಿಮಾದ ಕಥೆಯಲ್ಲಿ ರಣ್​ವಿಜಯ್​ ಸಿಂಗ್​ ಹಾಗೂ ಗೀತಾಂಜಲಿ ಪ್ರೀತಿಸಿ ಮದುವೆ ಆಗಿರುತ್ತಾರೆ. ಎಂದಿಗೂ ನಿನಗೆ ಮೋಸ ಮಾಡಲ್ಲ ಅಂತ ರಣ್​ವಿಜಯ್​ ಸಿಂಗ್​ ಪ್ರಮಾಣ ಮಾಡಿರುತ್ತಾನೆ. ಹಾಗಿದ್ದರೂ ಕೂಡ ಆತ ಪರಸ್ತ್ರೀ ಸಹವಾಸ ಮಾಡಿ, ಗೀತಾಂಜಲಿಗೆ ಮೋಸ ಮಾಡುತ್ತಾನೆ. ಆ ವಿಡಿಯೋ ತುಣುಕನ್ನು ಅಭಿಮಾನಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಬ್ಬ ಗಂಡಸನ್ನು ನಂಬುವುದಕ್ಕಿಂತ ಭಯಾನಕವಾದ ವಿಷಯ ಬೇರೇನೂ ಇಲ್ಲ’ ಎಂದು ಈ ವಿಡಿಯೋಗೆ ಅಭಿಮಾನಿಯೊಬ್ಬರು ಕ್ಯಾಪ್ಷನ್​ ನೀಡಿದ್ದಾರೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಆ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಅವರು, ‘ತಿದ್ದುಪಡಿ: ಮೂರ್ಖನಾದ ಗಂಡಸನ್ನು ನಂಬುವುದು ಭಯಾನಕ. ತುಂಬ ಒಳ್ಳೆಯ ಗಂಡಸರು ಇದ್ದಾರೆ. ಅಂಥವರನ್ನು ನಂಬುವುದು ವಿಶೇಷ’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಮತ್ತೆ ಡೀಪ್​ಫೇಕ್​ ಕಾಟ; ಅರೆಸ್ಟ್​ ಆದರೂ ಬುದ್ಧಿ ಕಲಿಯದ ಕಿಡಿಗೇಡಿಗಳು

ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದಲ್ಲಿ ಮೂಡಿಬಂದ ‘ಅನಿಮಲ್​’ ಸಿನಿಮಾದಲ್ಲಿ ಅನೇಕ ದೃಶ್ಯಗಳು ಸ್ತ್ರೀ ವಿರೋಧಿ ಆಗಿವೆ ಎಂದು ಹಲವರು ತಕರಾರು ತೆಗೆದಿದ್ದರು. ಹಲವು ವಿಮರ್ಶಕರು ಕೂಡ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಿನಿಮಾದಲ್ಲಿ ಕ್ರೌರ್ಯ ಅತಿಯಾಗಿದೆ ಎಂಬ ಟೀಕೆ ಕೂಡ ಕೇಳಿಬಂತು. ಹಾಗಿದ್ದರೂ ಕೂಡ ಸಿನಿಮಾ ಯಶಸ್ಸು ಕಂಡಿತು. ಬಾಬಿ ಡಿಯೋಲ್​ ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿತು. ತೃಪ್ತಿ ದಿಮ್ರಿ ಕೂಡ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು