Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಸಿನಿಮಾಗೆ ಸೋಲಿನ ಭಯ? ‘ಛಾವ’ ಚಿತ್ರಕ್ಕೆ ಇದೆಂಥ ಪರಿಸ್ಥಿತಿ

ನಟಿ ರಶ್ಮಿಕಾ ಮಂದಣ್ಣ ಅವರು ಸತತ ಗೆಲುವು ಕಂಡಿದ್ದಾರೆ. ಈಗ ಅವರು ಇನ್ನೊಂದು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ. ಆದರೆ ಟ್ರೆಂಡ್ ಬೇರೆ ರೀತಿ ಇದೆ. ಹೌದು, ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ನಟಿಸಿರುವ ‘ಛಾವ’ ಸಿನಿಮಾದ ಪ್ರಮೋಷನ್​ ಹಂತದಲ್ಲೇ ನಿರೀಕ್ಷಿತ ಪ್ರಮಾಣದ ಹೈಪ್ ಕಾಣಿಸುತ್ತಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಶ್ಮಿಕಾ ಮಂದಣ್ಣ ಸಿನಿಮಾಗೆ ಸೋಲಿನ ಭಯ? ‘ಛಾವ’ ಚಿತ್ರಕ್ಕೆ ಇದೆಂಥ ಪರಿಸ್ಥಿತಿ
Rashmika Mandanna
Follow us
ಮದನ್​ ಕುಮಾರ್​
|

Updated on: Feb 11, 2025 | 7:01 PM

ಬಾಲಿವುಡ್​ನಲ್ಲಿ ಈ ವಾರ (ಫೆಬ್ರವರಿ 14) ಬಹುನಿರೀಕ್ಷಿತ ‘ಛಾವ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಈಗಾಗಲೇ ಬುಕಿಂಗ್ ಕೂಡ ಶುರುವಾಗಿದೆ. ಆದರೆ ಮುಂಗಡ ಟಿಕೆಟ್ ಬುಕಿಂಗ್​ನಲ್ಲಿ ಜನರ ಆಸಕ್ತಿ ಅಷ್ಟಾಗಿ ಕಾಣಿಸುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಟಿಕೆಟ್​ಗಳು ಬುಕ್ ಆಗುತ್ತಿಲ್ಲ. ಹಾಗಾಗಿ ಆರಂಭದಲ್ಲೇ ಈ ಚಿತ್ರಕ್ಕೆ ಸೋಲಿನ ಭಯ ಕಾಣುತ್ತಿದೆ.

ಐತಿಹಾಸಿಕ ಕಥಾಹಂದರವನ್ನು ಇಟ್ಟುಕೊಂಡು ‘ಛಾವ’ ಸಿನಿಮಾ ಮೂಡಿಬಂದಿದೆ. ಛತ್ರಪತಿ ಶಂಬಾಜಿ ಮಹಾರಾಜ್ ಜೀವನವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ವಿಕ್ಕಿ ಕೌಶಲ್ ಅವರು ಶಂಬಾಜಿ ಮಹಾರಾಜ್ ಪಾತ್ರವನ್ನು ನಿಭಾಹಿಸಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಸ್ಟಾರ್​ ಕಲಾವಿದರು ಇದ್ದರೂ ಕೂಡ ಬುಕ್ ಮೈ ಶೋನಲ್ಲಿ ವೇಗವಾಗಿ ಟಿಕೆಟ್ ಬುಕಿಂಗ್ ಆಗುತ್ತಿಲ್ಲ.

ಪ್ರಚಾರದ ವಿಚಾರದಲ್ಲಿ ‘ಛಾವ’ ಸಿನಿಮಾ ಹಿಂದೆ ಬಿದ್ದಿದೆಯಾ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಸೋಶಿಯಲ್ ಮೀಡಿಯಾದಲ್ಲಿ ಕೂಡ ದೊಡ್ಡ ಹೈಪ್ ಕಾಣಿಸುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ‘ಛಾವ’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್​ ಮೇಲೆ ಪೆಟ್ಟು ಬೀಳಲಿದೆ. ಈ ಮೊದಲು ಬಾಲಿವುಡ್​ನಲ್ಲಿ ಅನೇಕ ಐತಿಹಾಸಿಕ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಇನ್ನು ಕೆಲವು ಫ್ಲಾಪ್ ಆಗಿವೆ. ಈಗ ‘ಛಾವ’ ಸಿನಿಮಾದ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗಿದೆ.

ಇದನ್ನೂ ಓದಿ: ಕಾಲು ನೋವಿನಿಂದ ಸಂಪೂರ್ಣ ಚೇತರಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಅನಿಮಲ್’ ಮತ್ತು ‘ಪುಷ್ಪ 2’ ಸಿನಿಮಾದಿಂದ ಅಭೂತಪೂರ್ವ ಯಶಸ್ಸು ಕಂಡಿದ್ದಾರೆ. ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಎಷ್ಟೋ ಹೀರೋಗಳಿಗೆ ಅವರು ಲಕ್ಕಿ ಹೀರೋಯಿನ್ ಆಗಿದ್ದಾರೆ. ‘ಛಾವ’ ಸಿನಿಮಾದಲ್ಲಿ ಅವರ ಮ್ಯಾಜಿಕ್ ಮರುಕಳುಸುತ್ತಾ ಅಥವಾ ಇಲ್ಲವಾ ಎಂಬುದು ಫೆಬ್ರವರಿ 14ರಂದು ಗೊತ್ತಾಗಲಿದೆ. ಒಂದು ವೇಳೆ ಸಿನಿಮಾದ ಬಿಡುಗಡೆ ಬಳಿಕ ಉತ್ತಮ ವಿಮರ್ಶೆ ಮತ್ತು ಬಾಯಿ ಮಾತಿನ ಪ್ರಚಾರ ಸಿಕ್ಕಿರೆ ಖಂಡಿತಾ ಸಿನಿಮಾ ಗೆಲ್ಲಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ