ಹಾರರ್ ಚಿತ್ರದ ಫಸ್ಟ್ ಲುಕ್ ಮೂಲಕ ಗಮನ ಸೆಳೆದ ನಟಿ ರಶ್ಮಿಕಾ ಮಂದಣ್ಣ

Rashmika Mandanna: ರಶ್ಮಿಕಾ ಮಂದಣ್ಣ ನಟನೆಯ ಹೊಸ ಹಿಂದಿ ಸಿನಿಮಾ ‘ಥಮ’. ಇದೊಂದು ಹಾರರ್ ಸಿನಿಮಾ ಆಗಿದ್ದು ರಶ್ಮಿಕಾ ಲುಕ್​ನ ಮೊದಲ ಪೋಸ್ಟರ್ ಇದೀಗ ಬಿಡುಗಡೆ ಆಗಿದೆ. ‘ಥಮ’ ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಆಯುಷ್ಮಾನ್ ಖುರಾನಾ ನಾಯಕ. ನವಾಜುದ್ಧೀನ್ ಸಿದ್ಧಿಖಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ.

ಹಾರರ್ ಚಿತ್ರದ ಫಸ್ಟ್ ಲುಕ್ ಮೂಲಕ ಗಮನ ಸೆಳೆದ ನಟಿ ರಶ್ಮಿಕಾ ಮಂದಣ್ಣ
Rashmika Mandanna
Edited By:

Updated on: Aug 19, 2025 | 12:02 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಈವರೆಗೆ ರೊಮ್ಯಾಂಟಿಕ್ ಹುಡುಗಿಯಾಗಿ, ಡಿ ಗ್ಲಾಮ್ ಲುಕ್ ಮೂಲಕ ಮಿಂಚಿದ್ದಾರೆ. ಅವರು ಈಗ ಹಾರರ್ ಕಾಮಿಡಿ ಸಿನಿಮಾ ‘ಥಮ’ದಲ್ಲಿ ನಟಿಸಿದ್ದಾರೆ. ಇದು ಅವರು ನಟಿಸಿದ ಮೊದಲ ಹಾರರ್ ಸಿನಿಮಾ. ಈ ಚಿತ್ರ ದೀಪಾವಳಿಗೆ ಬಿಡುಗಡೆ ಕಾಣುತ್ತಿದೆ. ಈ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಕೂಡ ನಟಿಸಿದ್ದಾರೆ. ಈ ಸಿನಿಮಾದ ಪೋಸ್ಟರ್​ಗಳನ್ನು ರಿವೀಲ್ ಮಾಡಲಾಗಿದೆ.

ಹಲವು ಹಾರರ್ ಸಿನಿಮಾಗಳನ್ನು ನೀಡಿದ ಖ್ಯಾತಿ ಮ್ಯಾಡಾಕ್ ಫಿಲ್ಮ್ಸ್​ಗೆ ಇದೆ. ಈ ನಿರ್ಮಾಣ ಸಂಸ್ಥೆಯು ‘ಥಮ’ ಸಿನಿಮಾನ ನಿರ್ಮಾಣ ಮಾಡಿದೆ. ಆಯುಷ್ಮಾನ್-ರಶ್ಮಿಕಾ ಜೊತೆಗೆ ನವಾಜುದ್ದೀನ್ ಸಿದ್ದಿಖಿ, ಪರೇಶ್ ರಾವಲ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಪಾತ್ರ ಹೈಲೈಟ್ ಆಗಿದೆ. ಆಯುಷ್ಮಾನ್ ಖುರಾನಾ ಅವರು ಅಲೋಕ್ ಆಗಿ ಕಾಣಿಸಿಕೊಂಡಿದ್ದಾರೆ. ‘ಮಾನವೀಯತೆಯ ಕೊನೆಯ ಭರವಸೆ’ ಎಂದು ಇವರ ಪೋಸ್ಟರ್ ಮೇಲೆ ಬರೆಯಲಾಗಿದೆ. ರಶ್ಮಿಕಾ ಮಂದಣ್ಣ ಅವರು ತಡಾಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ನವಾಜುದ್ದೀನಿ ಸಿದ್ದಿಕಿ ಪೋಸ್ಟರ್ ಗಮನ ಸೆಳೆದಿದೆ. ಅವರು ಯಕ್ಷಾಸನ್ ಹೆಸರಿ ಪಾತ್ರ ಮಾಡುತ್ತಿದ್ದಾರೆ. ಪರೇಶ್ ರಾವಲ್ ಅವರು ಆರ್ಡಿನರಿ ಲುಕ್​ನಲ್ಲಿ ಇದ್ದಾರೆ. ಈ ಚಿತ್ರದಲ್ಲಿ ಹಾರರ್, ಕಾಮಿಡಿ ಹಾಗೂ ರೊಮ್ಯಾನ್ಸ್ ಇದೆ. ಈ ಚಿತ್ರವನ್ನು  ಆದಿತ್ಯ ಸರ್ಪೋತ್​ದಾರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ದೀಪಾವಳಿಯಲ್ಲಿ ತೆರೆಗೆ ಬರಲಿದೆ. ಪ್ರತಿ ಬಾರಿ ದೀಪಾವಳಿಗೆ ಹಾರರ್ ಸಿನಿಮಾಗಳು ಬಿಡುಗಡೆ ಕಾಣುತ್ತವೆ. ಈ ಬಾರೀಯೂ ಅದೇ ರೀತಿಯ ಸಿನಿಮಾ ಒಂದು ತೆರೆಗೆ ಬರುತ್ತಿದೆ.

ಇದನ್ನೂ ಓದಿ:ನನ್ನ ವಿರುದ್ಧ ಪಿತೂರಿ ಮಾಡಲಾಗಿತ್ತು: ಹೀಗೆಂದರೇಕೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲ ಚಿನ್ನ. ಈ ಮೊದಲು ರಿಲೀಸ್ ಆದ ‘ಪುಷ್ಪ 2’, ‘ಛಾವ’, ‘ಅನಿಮಲ್’ ಮೊದಲಾದ ಸಿನಿಮಾಗಳು ಭರ್ಜರಿ ಯಶಸ್ಸು ಕಂಡವು. ಈಗ ಅವರ ಹೊಸ ಸಿನಿಮಾ ಬಗ್ಗೆ ನಿರಿಕ್ಷೆ ಇದೆ. ಹಾಹರ್ ಕಾಮಿಡಿ ಸಿನಿಮಾಗಳನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಹೀಗಾಗಿ, ‘ಥಮ’ ಸಿನಿಮಾ ಯಶಸ್ಸು ಕಂಡರೂ ಅಚ್ಚರಿ ಏನಿಲ್ಲ. ಇದರಿಂದ ರಶ್ಮಿಕಾಗೆ ಮತ್ತೊಂದು ಗೆಲುವು ಸಿಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us