AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾಗೆ ಖುಲಾಯಿಸಿತು ಅದೃಷ್ಟ, ಬಾಲಿವುಡ್ ಖಾನ್​ಗೆ ನಾಯಕಿ

ರಶ್ಮಿಕಾ ಮಂದಣ್ಣ ವೃತ್ತಿ ಏರುಗತಿಯಲ್ಲಿಯೇ ಸಾಗುತ್ತಿದೆ. ಕನ್ನಡ ಚಿತ್ರರಂಗದಿಂದ ವೃತ್ತಿ ಆರಂಭಿಸಿದ ರಶ್ಮಿಕಾ ಈಗ ತೆಲುಗು, ತಮಿಳು, ಬಾಲಿವುಡ್​ನ ಬೇಡಿಕೆಯ ನಟಿ. ಬಾಲಿವುಡ್​ನ ದೊಡ್ಡ ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೀಗ ಬಾಲಿವುಡ್ ನ ಖಾನ್ ಎದುರು ನಾಯಕಿಯಾಗಿದ್ದಾರೆ ರಶ್ಮಿಕಾ.

Rashmika Mandanna: ರಶ್ಮಿಕಾಗೆ ಖುಲಾಯಿಸಿತು ಅದೃಷ್ಟ, ಬಾಲಿವುಡ್ ಖಾನ್​ಗೆ ನಾಯಕಿ
ಮಂಜುನಾಥ ಸಿ.
| Edited By: |

Updated on:May 09, 2024 | 1:00 PM

Share

ರಶ್ಮಿಕಾ ಮಂದಣ್ಣ (Rashmika Mandanna) ವೃತ್ತಿ ಏರುಗತಿಯಲ್ಲಿಯೇ ಸಾಗುತ್ತಿದೆ. ಕನ್ನಡ ಸಿನಿಮಾದಿಂದ ನಟನೆಗೆ ಪದಾರ್ಪಣೆ ಮಾಡಿ ಈಗ ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿಯೂ ಬೇಡಿಕೆಯ ನಟಿಯಾಗಿದ್ದಾರೆ. ಹಿಂದಿಯಲ್ಲಿ ದೊಡ್ಡ ಸ್ಟಾರ್​ ನಟರುಗಳೊಟ್ಟಿಗೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಜೊತೆ ನಟಿಸಿದ್ದ ‘ಅನಿಮಲ್’ ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿದೆ. ಇದೀಗ ಮತ್ತೊಬ್ಬ ಬಾಲಿವುಡ್ ಸೂಪರ್ ಸ್ಟಾರ್ ಜೊತೆ ನಟಿಸುವ ಅವಕಾಶ ರಶ್ಮಿಕಾ ಮಂದಣ್ಣರನ್ನು ಅರಸಿ ಬಂದಿದೆ.

ಬಾಲಿವುಡ್​ನ ಖಾನ್​ ತ್ರಯರಲ್ಲಿ ಒಬ್ಬರಾದ ಸೂಪರ್ ಸ್ಟಾರ್ ಸಲ್ಮಾನ್ ಖಾನ್​ರ ಮುಂದಿನ ಸಿನಿಮಾಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಸಲ್ಮಾನ್ ಖಾನ್ ಜೊತೆಗೆ ಸಿನಿಮಾ ಮಾಡಲು ಸ್ಟಾರ್ ನಟಿಯರೇ ಸಾಲುಗಟ್ಟಿ ನಿಂತಿದ್ದಾರೆ ಅಂಥಹದರಲ್ಲಿ ರಶ್ಮಿಕಾ ಮಂದಣ್ಣಗೆ ಸಲ್ಮಾನ್ ಖಾನ್ ಎದುರು ನಾಯಕಿಯಾಗಿ ನಟಿಸುವ ಅವಕಾಶ ಅರಸಿ ಬಂದಿದೆ.

ಸಲ್ಮಾನ್ ಖಾನ್ ‘ಸಿಖಂದರ್’ ಹೆಸರಿನ ಆಕ್ಷನ್ ಥ್ರಿಲ್ಲರ್ ಸಿನಿಮಾನಲ್ಲಿ ನಟಿಸಲಿದ್ದಾರೆ ಈ ಸಿನಿಮಾವನ್ನು ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾಕ್ಕೆ ತಮಿಳಿನ ಸೂಪರ್ ಹಿಟ್ ನಿರ್ದೇಶಕ ಮುರುಗದಾಸ್ ನಿರ್ದೇಶನ ಮಾಡಲಿದ್ದಾರೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮುರುಗದಾಸ್ ಅನುಭವಿ ಹಾಗೂ ಪ್ರತಿಭಾವಂತ ನಿರ್ದೇಶಕ ಆಗಿದ್ದು, ಸೋಲಿನ ಸುಳಿಯಲ್ಲಿರುವ ಸಲ್ಮಾನ್ ಖಾನ್​ಗೆ ಹಿಟ್ ಸಿನಿಮಾ ನೀಡುವ ಪಣ ತೊಟ್ಟಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾದಲ್ಲಿ ಪ್ರೇಕ್ಷಕರು ಊಹಿಸಿದಂತೆ ಇರಲ್ಲ ರಶ್ಮಿಕಾ ಮಂದಣ್ಣ ಪಾತ್ರ

ಚಿತ್ರಕತೆಯ ಬೇಡಿಕೆಗೆ ತಕ್ಕಂತೆ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದ್ದಾರಂತೆ ನಿರ್ದೇಶಕ ಎಆರ್ ಮುರುಗದಾಸ್. ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚೆಲುವೆಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಎದುರು ಹೊಸ ನಾಯಕಿಯನ್ನು ಪ್ರಯತ್ನಿಸುವ ನಿರ್ಧಾರ ಮಾಡಿ ರಶ್ಮಿಕಾ ಮಂದಣ್ಣರನ್ನು ಆಯ್ಕೆ ಮಾಡಲಾಗಿದೆಯಂತೆ. ರಶ್ಮಿಕಾ ಮಂದಣ್ಣಗೂ ಕತೆ ಬಹಳವಾಗಿ ಇಷ್ಟವಾಗಿದ್ದು, ಸಲ್ಮಾನ್ ಖಾನ್ ಹಾಗೂ ಮುರುಗದಾಸ್ ಅಂಥಹಾ ಅನುಭವಿಗಳೊಟ್ಟಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರಂತೆ ರಶ್ಮಿಕಾ.

ರಶ್ಮಿಕಾ ಮಂದಣ್ಣ ಪ್ರಸ್ತುತ ‘ಪುಷ್ಪ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ತೆಲುಗಿನ ‘ಗರ್ಲ್​ಫ್ರೆಂಡ್’ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಜೊತೆಗೆ ವರ್ಷಗಳ ಬಳಿಕ ಮತ್ತೆ ಹೊಸದೊಂದು ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ಒಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಹಿಂದಿಯಲ್ಲಿ ನಟ ಟೈಗರ್ ಶ್ರಾಫ್ ಜೊತೆಗೆ ಹೊಸದೊಂದು ಸಿನಿಮಾ ಮಾಡಲಿದ್ದಾರೆ. ಈಗ ಸಲ್ಮಾನ್ ಖಾನ್ ಸಿನಿಮಾ ಸಹ ರಶ್ಮಿಕಾರನ್ನು ಅರಸಿ ಬಂದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Thu, 9 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?