AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ಸ್ಥಾನವನ್ನು ತುಂಬಲಿದ್ದಾರೆ ರಶ್ಮಿಕಾ ಮಂದಣ್ಣ; ‘ಕ್ರಿಶ್ 4’ ಚಿತ್ರಕ್ಕೆ ನಾಯಕಿ

ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 'ಪುಷ್ಪ' ಚಿತ್ರದ ಯಶಸ್ಸಿನ ನಂತರ, ಅವರು 'ಕ್ರಿಶ್ 4' ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಸ್ಥಾನವನ್ನು ತುಂಬುವ ಸಾಧ್ಯತೆಗಳಿವೆ ಎಂಬ ಸುದ್ದಿ ಹರಡಿದೆ. ಇದು ಅವರ ವೃತ್ತಿಜೀವನಕ್ಕೆ ಮತ್ತೊಂದು ದೊಡ್ಡ ಅವಕಾಶ.

ಪ್ರಿಯಾಂಕಾ ಚೋಪ್ರಾ ಸ್ಥಾನವನ್ನು ತುಂಬಲಿದ್ದಾರೆ ರಶ್ಮಿಕಾ ಮಂದಣ್ಣ; ‘ಕ್ರಿಶ್ 4’ ಚಿತ್ರಕ್ಕೆ ನಾಯಕಿ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Sep 20, 2025 | 9:46 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ದೇಶ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಪ್ರಿಯಾಂಕಾ ಚೋಪ್ರಾ ಸ್ಥಾನವನ್ನು ತುಂಬಲು ರೆಡಿ ಆಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಇದು ಅಚ್ಚರಿ ಎನಿಸಿದರೂ ಸತ್ಯ. ‘ಕ್ರಿಶ್’ ಹಾಗೂ ‘ಕ್ರಿಶ್ 3’ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ನಾಯಕಿ ಆಗಿದ್ದರು. ಈಗ ‘ಕ್ರಿಶ್ 4’ ಚಿತ್ರದಲ್ಲಿ ಪ್ರಿಯಾಂಕಾ ಸ್ಥಾನವನ್ನು ರಶ್ಮಿಕಾ ತುಂಬಲಿದ್ದಾರೆ ಎನ್ನಲಾಗುತ್ತಿದೆ.

‘ಕ್ರಿಶ್ 4’ ಚಿತ್ರದ ಸ್ಕ್ರಿಪ್ಟ್ ಕೆಲಸ ಪ್ರಗತಿಯಲ್ಲಿ ಇದೆ. ಇದರ ಜೊತೆಗೆ ಪಾತ್ರವರ್ಗದ ಆಯ್ಕೆ ಕೂಡ ಫೈನಲ್ ಮಾಡುವ ಕೆಲಸ ಆಗುತ್ತಿದೆ. ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್​ನಲ್ಲಿ ಸೆಟಲ್ ಆಗಿದ್ದು, ಅವರು ಸದ್ಯಕ್ಕಂತೂ ಹಿಂದಿ ಚಿತ್ರರಂಗಕ್ಕೆ ಮರಳಲ್ಲ. ಹೀಗಾಗಿ, ಬೇರೆ ನಟಿಯರ ಆಯ್ಕೆ ತಂಡಕ್ಕೆ ಅನಿವಾರ್ಯ ಆಗಿದೆ. ಈ ವೇಳೆ ನಿರ್ಮಾಪಕರ ಕಣ್ಣು ರಶ್ಮಿಕಾ ಮಂದಣ್ಣ ಮೇಲೆ ಬಿದ್ದಿದೆ.

ಹೃತಿಕ್ ರೋಷನ್ ಅವರು ‘ಕ್ರಿಶ್ 4’ ಚಿತ್ರದ ಹೀರೋ. ಇವರ ಜೊತೆ ರಶ್ಮಿಕಾ ಮಂದಣ್ಣ ಇನ್ನೂ ತೆರೆ ಹಂಚಿಕೊಂಡಿಲ್ಲ. ಈ ಫ್ರೆಶ್ ಜೋಡಿ ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಹೀಗಾಗಿ, ಚಿತ್ರತಂಡದವರು ಇದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ, ‘ಪುಷ್ಪ 2’, ‘ಅನಿಮಲ್’, ‘ಛಾವಾ’ ರೀತಿಯ ಸಿನಿಮಾಗಳನ್ನು ನೀಡಿ ಯಶಸ್ಸು ಕಂಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಫ್ಲಾಪ್ ಎನಿಸಿಕೊಂಡರೂ ಅವರ ಓಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇದಕ್ಕೆ ‘ಕ್ರಿಶ್ 4’ ಆಫರ್ ಒಳ್ಳೆಯ ಉದಾಹರಣೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ನಟಿಸಿದ್ದ ಸಿನಿಮಾದ ಸೀಕ್ವೆಲ್​​​ನಲ್ಲಿ ರಶ್ಮಿಕಾ, ಶೂಟಿಂಗ್ ಶುರು

ಸದ್ಯ ರಶ್ಮಿಕಾ ಅವರು ‘ಥಮ’ ಹೆಸರಿನ ಹಿಂದಿ ಸಿನಿಮಾ ಮಾಡುತ್ತಿದ್ದಾರೆ. ಇದರ ಜೊತೆಗೆ ‘ಕಾಕ್​ಟೇಲ್ 2’ ಚಿತ್ರ ಕೂಡ ಮಾಡುತ್ತಿದ್ದಾರೆ. ಇಷ್ಟೇ ಅಲ್ಲದೆ ಗರ್ಲ್​ ಫ್ರೆಂಡ್ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹೃತಿಕ್ ಸಿನಿಮಾ ಸಿಕ್ಕರೆ ಅವರ ವೃತ್ತಿ ಜೀವನಕ್ಕೆ ಮತ್ತಷ್ಟು ಮೈಲೇಜ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ