AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಮತ್ತೋರ್ವ ಸ್ಟಾರ್ ನಟನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ?; ಕೊಡಗಿನ ಕುವರಿ ಓಟಕ್ಕಿಲ್ಲ ಬ್ರೇಕ್

ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ.

ಬಾಲಿವುಡ್​ನ ಮತ್ತೋರ್ವ ಸ್ಟಾರ್ ನಟನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ?; ಕೊಡಗಿನ ಕುವರಿ ಓಟಕ್ಕಿಲ್ಲ ಬ್ರೇಕ್
ರಶ್ಮಿಕಾ-ಕಾರ್ತಿಕ್ ಆರ್ಯನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 22, 2022 | 5:22 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಗೆಲ್ಲುವ ಕುದರೆ ಆಗಿದ್ದಾರೆ. ಅವರು ಯಾವುದಾದರೂ ಚಿತ್ರಕ್ಕೆ ನಾಯಕಿ ಆದರೆ ಚಿತ್ರ ಶೇ.50 ಗೆದ್ದಂತೆ ಎಂಬ ನಂಬಿಕೆ ನಿರ್ಮಾಪಕರಲ್ಲಿ ಮೂಡಿದೆ. ಇದೇ ಕಾರಣಕ್ಕೋ ಏನೋ ಅವರಿಗೆ ಹಲವು ಪ್ರಾಜೆಕ್ಟ್​ಗಳು ಬರುತ್ತಿವೆ. ಆದರೆ, ರಶ್ಮಿಕಾ ಮಂದಣ್ಣ ಸಿಕ್ಕ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋನ ಚಿತ್ರಕ್ಕೆ ನಾಯಕಿ ಆಗುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇದು ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿರುವ ನಾಲ್ಕನೇ ಬಾಲಿವುಡ್ ಸಿನಿಮಾ (Bollywood Movie) ಅನ್ನೋದು ವಿಶೇಷ.

ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ‘ಮಿಷನ್ ಮಜ್ನು’ ಹಾಗೂ ‘ಗುಡ್​ಬೈ’ ಚಿತ್ರಗಳಲ್ಲಿ ರಶ್ಮಿಕಾ ನಟಿಸಿದ್ದು, ಈ ಚಿತ್ರಗಳು ರಿಲೀಸ್​ಗೆ ರೆಡಿ ಇದೆ. ‘ಮಿಷನ್ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರಾ ಹೀರೋ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್​ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭಗೊಂಡಿದೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್​ನಲ್ಲಿ ಛಾಪು ಮೂಡಿಸಿರುವ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಕೇಳಿ ಬಂದಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಮುಹೂರ್ತಕ್ಕೆ ಗೈರಾದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ; ಕಾರಣ ಏನು?

‘ಭೂಲ್​ ಭುಲಯ್ಯ 2’ ಚಿತ್ರದಿಂದ ಕಾರ್ತಿಕ್ ಆರ್ಯನ್ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಬಾಲಿವುಡ್ ಸಿನಿಮಾಗಳು ಸೊರಗುತ್ತಿರುವ ಸಂದರ್ಭದಲ್ಲಿ ಈ ಚಿತ್ರ ಕೋಟ್ಯಂತರ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಗೆಲುವಿನ ಅಲೆಯಲ್ಲಿರುವ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಹೀರೋಯಿನ್ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ರಶ್ಮಿಕಾ ಹಾಗೂ ಕಾರ್ತಿಕ್ ಆರ್ಯನ್ ಜೋಡಿ ಚೆನ್ನಾಗಿ ಹೊಂದಲಿದೆ ಎಂಬ ಮಾತು ಅಭಿಮಾನಿಗಳ ವಲಯದಲ್ಲಿ ವ್ಯಕ್ತವಾಗಿದೆ.

Published On - 5:22 pm, Mon, 22 August 22

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!