AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರತನ್ ಟಾಟಾ ಅಂತ್ಯಕ್ರಿಯೆ: ಮುಂಬೈನಲ್ಲಿ ಅಂತಿಮ ದರ್ಶನ ಪಡೆದ ಆಮಿರ್ ಖಾನ್, ಕಿರಣ್ ರಾವ್

ಖ್ಯಾತ ಉದ್ಯಮಿ ರತನ್​ ಟಾಟಾ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಎಲ್ಲ ಕ್ಷೇತ್ರಗಳ ಜನರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸಿನಿಮಾ ಕ್ಷೇತ್ರದ ಸೆಲೆಬ್ರಿಟಿಗಳು ಕೂಡ ಕಂಬನಿ ಮಿಡಿದಿದ್ದಾರೆ. ನಟ ಆಮಿರ್ ಖಾನ್​ ಅವರು ಮಾಜಿ ಪತ್ನಿ ಕಿರಣ್​ ರಾವ್​ ಜೊತೆ ಬಂದು ರತನ್​ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ರತನ್ ಟಾಟಾ ಅಂತ್ಯಕ್ರಿಯೆ: ಮುಂಬೈನಲ್ಲಿ ಅಂತಿಮ ದರ್ಶನ ಪಡೆದ ಆಮಿರ್ ಖಾನ್, ಕಿರಣ್ ರಾವ್
ಆಮಿರ್​ ಖಾನ್​, ಕಿರಣ್ ರಾವ್​, ರತನ್​ ಟಾಟಾ
Follow us
ಮದನ್​ ಕುಮಾರ್​
|

Updated on: Oct 10, 2024 | 5:27 PM

ಬುಧವಾರ (ಅ.10) ರಾತ್ರಿ ನಿಧನರಾದ ರತನ್​ ಟಾಟಾ ಅವರ ಆತ್ಮಕ್ಕೆ ಹಲವು ಸೆಲೆಬ್ರಿಟಿಗಳು ಶಾಂತಿಕೋರಿದ್ದಾರೆ. ಮುಂಬೈನ ‘ನ್ಯಾಷನಲ್​ ಸೆಂಟರ್​ ಫಾರ್​ ಪರ್ಫಾರ್ಮಿಂಗ್​ ಆರ್ಟ್ಸ್​’ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಾಲಿವುಡ್​ನ ಖ್ಯಾತ ನಟ ಆಮಿರ್ ಖಾನ್​ ಅವರು ಬಂದು ಅಂತಿಮ ದರ್ಶನ ಪಡೆದುಕೊಂಡರು. ಅವರ ಜೊತೆ ಮಾಜಿ ಪತ್ನಿ ಕಿರಣ್​ ರಾವ್​ ಕೂಡ ಆಗಮಿಸಿದ್ದರು. ರತನ್​ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಅವರ ಕೊಡುಗೆಗಳ ಬಗ್ಗೆ ಆಮಿರ್​ ಖಾನ್​ ಮಾತನಾಡಿದರು.

‘ನಮಗೆ ಹಾಗೂ ಇಡೀ ದೇಶಕ್ಕೆ ಇಂದು ದುಃಖಕರ ದಿನ. ರತನ್​ ಟಾಟಾ ಅವರು ತಮ್ಮ ಸಂಸ್ಥೆಯ ಮೂಲಕ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರು ಬಹಳ ಅಪರೂಪದ ವ್ಯಕ್ತಿ. ಅವರನ್ನು ನಾವು ಎಂದೆಂದಿಗೂ ಮಿಸ್​ ಮಾಡಿಕೊಳ್ಳುತ್ತೇವೆ’ ಎಂದು ಆಮಿರ್ ಖಾನ್​ ಹೇಳಿದ್ದಾರೆ. ‘ರತನ್​ ಟಾಟಾ ಅವರ ಜೊತೆ ಕೆಲವು ಸಮಯ ಕಳೆಯುವ ಅವಕಾಶ ನಮಗೆ ಸಿಕ್ಕಿತ್ತು. ಆ ವಿಚಾರದಲ್ಲಿ ನಾವು ಅದೃಷ್ಟವಂತರು. ಅವರು ತುಂಬ ಒಳ್ಳೆಯ ವ್ಯಕ್ತಿ ಆಗಿದ್ದರು. ಸಾಕಷ್ಟು ಕೊಡುಗೆ ನೀಡಿದ ಅವರು ಇಂದು ನಮ್ಮೊಂದಿಗಿಲ್ಲ’ ಎಂದು ಕಿರಣ್​ ರಾವ್​ ಹೇಳಿದರು.

ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ರತನ್ ಟಾಟಾ ಅವರು ಕೊನೆಯುಸಿರು ಎಳೆದರು. ಸೋಮವಾರದಿಂದಲೂ ಅವರು ತೀವ್ರ ನಿಗಾ ಘಟಕದಲ್ಲಿ ಇದ್ದರು. ಅವರ ನಿಧನದ ಸುದ್ದಿ ತಿಳಿದು ಇಡೀ ದೇಶಕ್ಕೆ ಆಘಾತ ಆಗಿದೆ. ರತನ್​ ಟಾಟಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಗೃಹಬಳಕೆಯ ಚಿಕ್ಕ ವಸ್ತುಗಳಿಂದ ಹಿಡಿದು ವಿಮಾನಯಾನದ ತನಕ ಹಲವು ಉತ್ಪನ್ನಗಳ ಉದ್ಯಮದಲ್ಲಿ ಅವರು ಯಶಸ್ಸು ಕಂಡಿದ್ದರು.

ಇದನ್ನೂ ಓದಿ: ರತನ್ ಟಾಟಾಗೂ ಚಿತ್ರರಂಗಕ್ಕೂ ಸಂಬಂಧವೇನು? ನಿರ್ಮಾಣ ಮಾಡಿದ್ದು ಒಂದೇ ಸಿನಿಮಾ

ಮಹಾರಾಷ್ಟ್ರದಲ್ಲಿ ಶೋಕಾಚರಣೆ ಮಾಡಲಾಗುತ್ತಿದೆ. ಹಾಗಾಗಿ, ನಟ ಅಜಯ್​ ದೇವಗನ್​ ಅವರು ಇಂದು (ಅ.10) ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ನಡೆಸಬೇಕಿದ್ದ ಪ್ರಶ್ನೋತ್ತರ ಸೆಷನ್​ ಅನ್ನು ಕ್ಯಾನ್ಸಲ್​ ಮಾಡಿದ್ದಾರೆ. ‘ರತನ್​ ಟಾಟಾ ಅವರು ನೀಡಿದ ಕೊಡುಗೆಯನ್ನು ಅಳೆಯಲು ಸಾಧ್ಯವಿಲ್ಲ. ಅದಕ್ಕಾಗಿ ನಾನು ಚಿರಋಣಿ ಆಗಿದ್ದೇವೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್’ ಎಂದು ಅಜಯ್​ ದೇವಗನ್​ ಪೋಸ್ಟ್ ಮಾಡಿದ್ದಾರೆ. ನಟ ಅಮಿತಾಭ್​ ಬಚ್ಚನ್​ ಕೂಡ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ಯುಗಾಂತ್ಯವಾಯಿತು’ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ