AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವೀನಾಗೆ ಇನ್ನೂ ಮಾಸಿಲ್ಲ ಆಘಾತ; ಸೆಲ್ಫಿ ಕೇಳಿದಕ್ಕೆ ಭಯದಿಂದ ಓಡಿಹೋದ ನಟಿ

ಲಂಡನ್ ಬೀದಿಗಳಲ್ಲಿ ರವೀನಾ ಓಡಾಡುತ್ತಿದ್ದರು. ಆಗ ಬಂದ ಕೆಲವರು ಸೆಲ್ಫಿ ಕೇಳಿದ್ದಾರೆ. ಆದರೆ, ಇದನ್ನು ಅವರು ಮನ್ನಿಸಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಮುಂಬೈನ ಬಂದ್ರಾದ ಅಪಘಾತದಿಂದ ಆದ ಆಘಾತದಿಂದ ಇನ್ನೂ ಅವರು ಹೊರಬಂದಿಲ್ಲವಂತೆ.

ರವೀನಾಗೆ ಇನ್ನೂ ಮಾಸಿಲ್ಲ ಆಘಾತ; ಸೆಲ್ಫಿ ಕೇಳಿದಕ್ಕೆ ಭಯದಿಂದ ಓಡಿಹೋದ ನಟಿ
ರವೀನಾ
ರಾಜೇಶ್ ದುಗ್ಗುಮನೆ
|

Updated on: Sep 14, 2024 | 12:58 PM

Share

ರವೀನಾ ಟಂಡನ್ ಅವರು ಇತ್ತೀಚೆಗೆ ಚರ್ಚೆ ಆಗಿದ್ದಾರೆ. ಅವರು ಲಂಡನ್​ಗೆ ತೆರಳಿದ್ದಾಗ ಕೆಲ ಫ್ಯಾನ್ಸ್ ಫೋಟೋ ಕೇಳಿದ್ದರು. ಆದರೆ ಇದನ್ನು ಅವರು ನಿರಾಕರಿಸಿದ್ದರು. ‘ರವೀನಾಗೆ ಧಿಮಾಕು’ ಎಂದೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗಿತ್ತು. ಈ ಬಗ್ಗೆ ರವೀನಾ ಟಂಡನ್ ಅವರು ಮಾತನಾಡಿದ್ದಾರೆ. ಮುಂಬೈನ ಬಂದ್ರಾದ ಅಪಘಾತದಿಂದ ಆದ ಆಘಾತದಿಂದ ಇನ್ನೂ ಅವರು ಹೊರಬಂದಿಲ್ಲ.

ಲಂಡನ್ ಬೀದಿಗಳಲ್ಲಿ ರವೀನಾ ಓಡಾಡುತ್ತಿದ್ದರು. ಆಗ ಬಂದ ಕೆಲವರು ಸೆಲ್ಫಿ ಕೇಳಿದ್ದಾರೆ. ಆದರೆ, ಇದನ್ನು ಅವರು ಮನ್ನಿಸಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನಾನು ಲಂಡನ್​ನಲ್ಲಿ ಓಡಾಡುತ್ತಿರುವಾಗ ಕೆಲವರು ಬಂದು ಸೆಲ್ಫಿ ಕೇಳಿದರು. ನಾನು ನೋ ಹೇಳಿ ವೇಗವಾಗಿ ನಡೆದು ಹೊರಟೆ. ಆಗ ನಾನು ಒಬ್ಬಂಟಿಯಾಗಿದ್ದೆ. ಬಾಂದ್ರಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಘಟನೆಯ ಆಘಾತ ಇನ್ನೂ ಹಾಗೆಯೇ ಇದೆ. ನನ್ನ ಜೊತೆ ಜನರು ಇರುವಾಗ ಏನೂ ತೊಂದರೆ ಇಲ್ಲ. ಆದರೆ, ಒಬ್ಬಂಟಿ ಆಗಿದ್ದಾಗ ನಾನು ನರ್ವಸ್ ಆಗುತ್ತೇನೆ’ ಎಂದಿದ್ದಾರೆ ಅವರು.

‘ಅವರು ಮುಗ್ಧ ಫ್ಯಾನ್ಸ್ ಆಗಿದ್ದರು. ಹೀಗಾಗಿ ನಾನು ಸೆಲ್ಫಿ ಕೊಡಬಹುದಿತ್ತು. ಆದರೆ, ಆ ಸಂದರ್ಭದಲ್ಲಿ ನಾನು ಭಯಗೊಂಡೆ. ಹೀಗಾಗಿ, ವೇಗವಾಗಿ ನಡೆದು ಸಾಗಿದೆ. ನಾನು ಸಹಾಯಕ್ಕೆ ಭದ್ರತಾ ಸಿಬ್ಬಂದಿಯನ್ನೂ ಕರೆದೆ. ಸೆಲ್ಫಿ ಕೇಳಿದವರು ಇದನ್ನು ಓದುತ್ತಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವರಿಗೆ ಬೇಸರ ಮಾಡುವುದು ನನ್ನ ಉದ್ದೇಶ ಅಲ್ಲ. ನಿಜಕ್ಕೂ ಕ್ಷಮೆ ಇರಲಿ. ಮುಂದೊಂದು ದಿನ ನಿಮ್ಮ ಭೇಟಿ ಮಾಡಿ ಸೆಲ್ಫಿ ತೆಗೆದುಕೊಳ್ಳಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರವೀನಾ ಟಂಡನ್ ಹೆಸರು ಬಂದಿದ್ದು ಹೇಗೆ? ಇದರಿಂದ ಹಿಂದಿದೆ ವಿಚಿತ್ರ ಕಹಾನಿ

ಇತ್ತೀಚೆಗೆ ರವೀನಾ ಅವರು ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ರವೀನಾ ಕಾರು ಚಾಲಕ ನಮ್ಮ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದ ಎಂದು ದೂರುದಾರರು ಆರೋಪಿಸಿದ್ದರು. ಚಾಲಕನನ್ನು ರಕ್ಷಿಸುವುದಕ್ಕಾಗಿ ಹೊರಬಂದ ನಟಿ ರವೀನಾ ಅವರ ಮೇಲೂ ಹಲ್ಲೆ ನಡೆದಿತ್ತು. ಜೂನ್ ತಿಂಗಳಲ್ಲಿ ಈ ಘಟನೆ ನಡೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ