AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಜೊತೆ ನಡೆದಿತ್ತು ರವೀನಾ ನಿಶ್ಚಿತಾರ್ಥ: ಬಳಿಕ ಬೇರೆ ಆಗಿದ್ದೇಕೆ?

Raveena Tandon: ಖ್ಯಾತ ನಟಿ ರವೀನಾ ಟಂಡನ್ ಹುಟ್ಟುಹಬ್ಬ ಇಂದು. ಅಂದಹಾಗೆ ರವೀನಾ ಟಂಡನ್ ಹಾಗೂ ಅಕ್ಷಯ್ ಕುಮಾರ್ ಮದುವೆ ಆಗುವವರಿದ್ದರು. ಇಬ್ಬರ ನಿಶ್ಚಿತಾರ್ಥವೂ ಆಗಿತ್ತು, ಆದರೆ ಅವರಿಬ್ಬರೂ ನಿಶ್ಚಿತಾರ್ಥದ ಬಳಿಕ ದೂರಾದರು, ಕಾರಣವೇನು?

ಅಕ್ಷಯ್ ಜೊತೆ ನಡೆದಿತ್ತು ರವೀನಾ ನಿಶ್ಚಿತಾರ್ಥ: ಬಳಿಕ ಬೇರೆ ಆಗಿದ್ದೇಕೆ?
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 26, 2024 | 12:30 PM

Share

ಬಾಲಿವುಡ್ ನಟಿ ರವೀನಾ ಟಂಡನ್ ಅವರಿಗೆ ಇಂದು (ಅಕ್ಟೋಬರ್ 26) ಜನ್ಮದಿನ. ಅವರಿಗೆ ಇದು 50ನೇ ವರ್ಷ ತುಂಬಿದೆ. ಈ ವಯಸ್ಸಿನಲ್ಲೂ ಅವರು ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಜನಿಸಿದ್ದು 1974ರಲ್ಲಿ. ರವೀನಾ ಅವರ ಜೀವನದಲ್ಲಿ ಅಕ್ಷಯ್ ಕುಮಾರ್ ಜೊತೆಗಿನ ಸಂಬಂಧವು ಕಪ್ಪು ಚುಕ್ಕೆಯಾಗಿ ಉಳಿದುಕೊಂಡು ಬಿಟ್ಟಿದೆ. ಅವರ ಪ್ರೀತಿ ಆರಂಭ ಆಗಿದ್ದು ಹೇಗೆ, ಕೊನೆ ಆಗಿದ್ದು ಹೇಗೆ ಎಂಬ ಬಗ್ಗೆ ಇಲ್ಲಿದೆ ವಿವರ.

ರವೀನಾ ಟಂಡನ್ ಹಾಗೂ ಅಕ್ಷಯ್ ಕುಮಾರ್ ಅವರು ‘ಮೊಹ್ರಾ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರ ರಿಲೀಸ್ ಆಗಿದ್ದು 1994ರಲ್ಲಿ. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ತು ಚೀಜ್ ಬಡಿ ಹೇ ಮಸ್ತ್ ಮಸ್ತ್..’ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆಯಿತು. ಈ ಸಿನಿಮಾ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೊಳೆಯಿತು.

ರವೀನಾ ಟಂಡನ್ ಹಾಗೂ ಅಕ್ಷಯ್ ಕುಮಾರ್ ಅವರು ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ಕೂಡ ಮಾಡಿಕೊಂಡಿದ್ದರು. ಅಕ್ಷಯ್ಗೋಸ್ಕರ್ಗೆ ಅವರು ವೃತ್ತಿ ಜೀವನ ತೊರೆಯಲು ನಿರ್ಧರಿಸಿದ್ದರು. ರವೀನಾ ಮನೆಯಲ್ಲಿ ಅಡುಗೆ ಮಾಡಿಕೊಂಡಿರಲಿ ಎಂಬುದು ಅಕ್ಷಯ್ ಆಸೆ ಆಗಿತ್ತು.

ಇದನ್ನೂ ಓದಿ:ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ರವೀನಾ ಟಂಡನ್

ಇದೇ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಹಾಗೂ ನಟಿ ರೇಖಾ ಮಧ್ಯೆ ಅಫೇರ್ ಇದೆ ಎಂಬ ವಿಚಾರ ಹರಿದಾಡಿತು. 1996ರಲ್ಲಿ ರಿಲೀಸ್ ಆದ ‘ಖಿಲಾಡಿಯೋ ಕಾ ಖಿಲಾಡಿ’ ಶೂಟ್ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು ಎನ್ನಲಾಗಿದೆ. ಅಕ್ಷಯ್ಗೆ ರೇಖಾ ಬಂಗಲೆ ಗಿಫ್ಟ್ ನೀಡಿದ್ದರು ಎಂದು ಕೂಡ ಹೇಳಲಾಗಿತ್ತು. ಆದರೆ, ಇದನ್ನು ಅವರು ಅಲ್ಲ ಗಳೆದಿದ್ದಾರೆ.

ರವೀನಾಗೆ ಇದರಿಂದ ಮಾತ್ರ ಬೇಸರ ಆಗಿಲ್ಲ. ಶಿಲ್ಪಾ ಶೆಟ್ಟಿ ಹಾಗೂ ರವೀನಾ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಆದರೆ, ಗೊತ್ತಿಲ್ಲದೆ ಪ್ರಿಯಾಂಕಾ ಜೊತೆಯೂ ಅಕ್ಷಯ್ ಕ್ಲೋಸ್ ಆಗಿದ್ದರು. ಇದನ್ನು ತಡೆದುಕೊಳ್ಳೋಕೆ ರವೀನಾಗೆ ಆಗಲೇ ಇಲ್ಲ.

ಬ್ರೇಕಪ್ ಬಳಿಕ ಅಕ್ಷಯ್ ಕುಮಾರ್ ಹಾಗೂ ರವೀನಾ ಪರಸ್ಪರ ಬೈದುಕೊಳ್ಳೋಕೆ ಆರಂಭಿಸಿದರು. ಅಕ್ಷಯ್ಗೆ ನೀಯತ್ತು ಇಲ್ಲ ಎಂದು ರವೀನಾ ಹೇಳಿದರು. ಅಕ್ಷಯ್ ಕುಮಾರ್ ಅವರು ರವೀನಾ ಅವರನ್ನು ಚೈಲ್ಡಿಶ್ ಎಂದು ಕರೆದರು. ರವೀನಾ ನಟಿಟಿಸಿದ ಸಿನಿಮಾ ಒಂದರಲ್ಲಿ ‘ನಾನು ಖಿಲಾಡಿಯನ್ನು (ಪ್ಲೇಯರ್) ಎಂದಿಗೂ ಮದುವೆ ಆಗಲ್ಲ’ ಎಂದಿತ್ತು. ಇದು ಅಕ್ಷಯ್ಗೆ ಹೇಳಿದ ಮಾತು ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Sat, 26 October 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ