AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಘಟನೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ರವೀನಾ ಟಂಡನ್​

ಬಾಲಿವುಡ್​ ನಟಿ ರವೀನಾ ಟಂಡನ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮೆಲ್ಲರ ಅಪಾರವಾದ ಬೆಂಬಲ, ಪ್ರೀತಿ ಹಾಗೂ ನಂಬಿಕೆಗೆ ಧನ್ಯವಾದ. ಈ ಕಥೆಯ ನೀತಿ ಏನು ಗೊತ್ತಾ? ಡ್ಯಾಶ್​ಕ್ಯಾಮ್​ ಹಾಗೂ ಸಿಸಿಟಿವಿ ಈಗಲೇ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಅವರು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಆಪ್ತರು ಮತ್ತು ಅಭಿಮಾನಿಗಳಿಗೆ ಅವರು ಕಿವಿಮಾತು ಹೇಳಿದ್ದಾರೆ.

ಹಲ್ಲೆ ಘಟನೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ರವೀನಾ ಟಂಡನ್​
ರವೀನಾ ಟಂಡನ್​
ಮದನ್​ ಕುಮಾರ್​
|

Updated on: Jun 06, 2024 | 10:30 PM

Share

ಹಿಂದಿ ಚಿತ್ರರಂಗದ ಖ್ಯಾತ ನಟಿ ರವೀನಾ ಟಂಡನ್​ ಅವರ ಮೇಲೆ ಇತ್ತೀಚೆಗೆ ಹಲ್ಲೆ (Assault) ನಡೆದಿತ್ತು. ರಸ್ತೆಯಲ್ಲಿ ಆದ ಸಣ್ಣ ಕಿರಿಕ್​ನಿಂದ ದೊಡ್ಡ ವಿವಾದ ಸೃಷ್ಟಿ ಆಗಿತ್ತು. ರವೀನಾ ಟಂಡನ್​ (Raveena Tandon) ಮತ್ತು ಅವರ ಕಾರು ಚಾಲಕನೇ ಸಾರ್ವಜನಿಕರಿಗೆ ಹೊಡೆದಿದ್ದಾರೆ ಎಂಬ ಆರೋಪ ಇದೆ. ಆದರೆ ವೈರಲ್​ ವಿಡಿಯೋದಲ್ಲಿ ರವೀನಾ ಟಂಡನ್​ ಅವರು ‘ದಯವಿಟ್ಟು ಹೊಡೆಯಬೇಡಿ’ ಎಂದು ಬೇಡಿಕೊಳ್ಳುತ್ತಿರುವುದು ಕಾಣಿಸಿತ್ತು. ಒಟ್ಟಾರೆ ಈ ಘಟನೆಯ ಬಗ್ಗೆ ಈವರೆಗೆ ಮೌನವಾಗಿದ್ದ ರವೀನಾ ಟಂಡನ್​ ಅವರು ಈ ಮೌನ ಮುರಿದಿದ್ದಾರೆ.

ರವೀನಾ ಟಂಡನ್​ ಅವರು ಇನ್​ಸ್ಟಾಗ್ರಾಮ್​ ಸೋರಿ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮೆಲ್ಲರ ಅಪಾರವಾದ ಪ್ರೀತಿ, ಬೆಂಬಲ ಮತ್ತು ನಂಬಿಕೆಗೆ ಧನ್ಯವಾದಗಳು. ಈ ಕಥೆಯ ನೀತಿ ಏನು? ಈಗಲೇ ಡ್ಯಾಶ್​ಕ್ಯಾಮ್​ ಮತ್ತು ಸಿಸಿಟಿವಿ ಹಾಕಿಸಿಕೊಳ್ಳಿ’ ಎಂದು ರವೀನಾ ಟಂಡನ್​ ಅವರು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಅವರು ತಿಳಿ ಹೇಳಿದ್ದಾರೆ.

ಘಟನೆಯ ಹಿನ್ನೆಲೆ:

ಮುಂಬೈನ ಬೀದಿಯಲ್ಲಿ ಈ ಘಟನೆ ನಡೆದಿತ್ತು. ರವೀನಾ ಟಂಡನ್​ ಅವರ ಕಾರು ಚಾಲಕ ರಿವರ್ಸ್​ ತೆಗೆಯುವಾದ ಪಾದಚಾರಿಗಳಿಗೆ ಕಾರು ಗುದ್ದಿದೆ ಎಂಬ ಆರೋಪ ಇದೆ. ಅದನ್ನು ಪ್ರಶ್ನಿಸಿದ ಪಾದಚಾರಿಗಳಿಗೆ ಕಾರು ಚಾಲಕ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಹೊರಬಂದ ರವೀನಾ ಅವರು ಮದ್ಯದ ನಶೆಯಲ್ಲಿ ಇದ್ದರು ಹಾಗೂ ಅವರು ಕೂಡ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿದರು ಎಂಬ ಆರೋಪ ಎದುರಾಗಿತ್ತು. ಡ್ಯಾಶ್​ಕ್ಯಾಮ್​​ ಮತ್ತು ಸಿಸಿಟಿವಿ ದೃಶ್ಯಗಳು ಲಭ್ಯವಾದರೆ ಅಸಲಿ ಸಂಗತಿ ಬಯಲಾಗಲಿದೆ.

ಇದನ್ನೂ ಓದಿ: ‘ಪ್ಲೀಸ್​ ಹೊಡೆಯಬೇಡಿ’: ಕೈ ಮುಗಿದು ಬೇಡಿಕೊಂಡ ರವೀನಾ ಟಂಡನ್​

ಸೆಲೆಬ್ರಿಟಿಗಳ ಮೇಲೆ ಹಲ್ಲೆ ನಡೆದ ಘಟನೆ ಇತ್ತೀಚೆಗೆ ವರದಿ ಆಗುತ್ತಿದೆ. ಇಂದು (ಜೂನ್​ 6) ನಟಿ ಕಂಗನಾ ರಣಾವತ್​ ಅವರ ಮೇಲೆ ಸಿಐಎಸ್​ಎಫ್​ ಸಿಬ್ಬಂದಿ ಕೈ ಮಾಡಿದ್ದಾರೆ. ಈ ಘಟನೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಕುರಿತು ಕಂಗನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪಂಜಾಬ್​ನಲ್ಲಿ ಹೆಚ್ಚಿರುವ ಆತಂಕವಾದ ಮತ್ತು ಉಗ್ರವಾದದ ಬಗ್ಗೆ ತಮಗೆ ಕಳವಳ ಉಂಟಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!