AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ

ಸುಕುಮಾರ್​ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇದ್ದೇ ಇರುತ್ತದೆ. ಈ ಬಾರಿ ಅವರು ಖ್ಯಾತ ನಟ ಅಲ್ಲು ಅರ್ಜುನ್​ ಜತೆ ಕೈ ಜೋಡಿಸಿದ್ದಾರೆ. ಈ ಕಾರಣಕ್ಕೆ ನಿರೀಕ್ಷೆ ಡಬಲ್​ ಆಗಿದೆ

ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ
ಅಲ್ಲು ಅರ್ಜುನ್​-ರವೀನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 21, 2021 | 1:43 PM

Share

ಅಲ್ಲು ಅರ್ಜುನ್ (Allu Arjun)​ ನಟನೆಯ ‘ಪುಷ್ಪ’ ಸಿನಿಮಾ (Pushpa Movie) ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಡಬ್​ ಆಗಿ ತೆರೆಕಾಣುತ್ತಿದೆ. ಸಿನಿಮಾ ರಿಲೀಸ್​ ಆಗೋಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. ಅದಕ್ಕೂ ಮೊದಲು ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿತ್ತು. ಹಿಂದಿ ಅವತರಣಿಕೆ ರಿಲೀಸ್​ ಮಾಡೋಕೆ ಕೆಲ ಅಡಚಣೆಗಳು ಉಂಟಾಗಿದ್ದವು. ಆದರೆ, ಈ ಸಮಸ್ಯೆಗಳು ಈಗ ಪರಿಹಾರವಾಗಿದೆ. ಗೋಲ್ಡ್​ಮೈನ್​ ಫಿಲ್ಮ್ಸ್ ಸಂಸ್ಥೆ​ ‘ಪುಷ್ಪ’ದ ಹಿಂದಿ ಅವತರಣಿಕೆಯನ್ನು ಡಿಸೆಂಬರ್​ 17ರಂದೇ ಬಿಡುಗಡೆ ಮಾಡುತ್ತಿದೆ. ಖುಷಿಯ ವಿಚಾರ ಎಂದರೆ ಈ ಸಿನಿಮಾಗೆ ರವೀನಾ ಟಂಡನ್​ ಕುಟುಂಬದಿಂದ ಬೆಂಬಲ ಸಿಕ್ಕಿದೆ.

ಸುಕುಮಾರ್​ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇದ್ದೇ ಇರುತ್ತದೆ. ಈ ಬಾರಿ ಅವರು ಖ್ಯಾತ ನಟ ಅಲ್ಲು ಅರ್ಜುನ್​ ಜತೆ ಕೈ ಜೋಡಿಸಿದ್ದಾರೆ. ಈ ಕಾರಣಕ್ಕೆ ನಿರೀಕ್ಷೆ ಡಬಲ್​ ಆಗಿದೆ. ಈಗಾಗಲೇ ರಿಲೀಸ್​ ಆಗಿರುವ ‘ಪುಷ್ಪ’ ಟೀಸರ್​ ಹಾಗೂ ಪೋಸ್ಟರ್​ಗಳು ಸಿನಿಮಾ ಮೇಲಿನ ನಿರೀಕ್ಷೆಯನ್ನು ಡಬಲ್​ ಮಾಡಿದೆ. ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಹಿಂದಿ ಅವತರಣಿಕೆ ವಿಳಂಬವಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ನಿರ್ಮಾಪಕರು ಎಲ್ಲಾ ಸಮಸ್ಯೆಗಳನ್ನೂ ಪರಿಹಾರ ಮಾಡಿದ್ದಾರೆ. ಆದರೆ, ಕೇವಲ ಒಂದು ತಿಂಗಳು ಸಮಯಾವಕಾಶ ಇರುವುದರಿಂದ ಹಿಂದಿಯಲ್ಲಿ ಸಿನಿಮಾಗೆ ಹೆಚ್ಚು ಪ್ರಚಾರ ನೀಡೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗೋಲ್ಡ್​ಮೈನ್​ ಫಿಲ್ಮ್ಸ್ ಎಎ ಫಿಲ್ಸ್ಮ್ಸ್​ ಜತೆ ಕೈ ಜೋಡಿಸಿದೆ.

ಎಎ ಫಿಲ್ಸ್ಮ್ಸ್​ ಒಡೆತನ ರವೀನಾ ಟಂಡನ್​ ಪತಿ ಅನಿಲ್​ ಥಡಾನಿ ಕೈಯಲ್ಲಿದೆ. ‘ಬಾಹುಬಲಿ 2’, ‘ಸಾಹೋ’ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ಹಂಚಿಕೆ ಮಾಡಿದ ಅನುಭವ ಅನಿಲ್​ಗೆ ಇದೆ. ಹೀಗಾಗಿ ಅವರಿಗೆ ಕಾಂಟ್ಯಕ್ಟ್ಸ್​ ಕೂಡ ಹೆಚ್ಚಿದೆ. ಈ ಕಾರಣಕ್ಕೆ ಗೋಲ್ಡ್​ಮೈನ್​ ಫಿಲ್ಮ್ಸ್​ ಅನಿಲ್​ ಜತೆ ಕೈ ಜೋಡಿಸಿದೆ. ಈ ಮೂಲಕ ‘ಪುಷ್ಪ’ ಚಿತ್ರ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ‘ರಶ್ಮಿಕಾ ಊಟ’ ಮಾರಾಟಕ್ಕಿದೆ; ಇದನ್ನು ತಿನ್ನೋದು ಹೇಗೆ? ವಿಡಿಯೋ ಸಮೇತ ವಿವರಿಸಿದ ನಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ