AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​

ನರೇಂದ್ರ ಮೋದಿ ಅವರು ಬರೆದ ಪತ್ರವನ್ನು ರವೀನಾ ಟಂಡನ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತ್ರ ಬರೆದಿದ್ದಕ್ಕಾಗಿ ಪ್ರಧಾನಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​
ರವೀನಾ ಟಂಡನ್, ರವಿ ಟಂಡನ್, ನರೇಂದ್ರ ಮೋದಿ
TV9 Web
| Edited By: |

Updated on: Feb 25, 2022 | 8:05 AM

Share

ನಟಿ ರವೀನಾ ಟಂಡನ್​ (Raveena Tandon) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮೂಲಕ ದೇಶಾದ್ಯಂತ ಫೇಮಸ್​ ಆಗಿರುವ ಅವರು ಕನ್ನಡದ ಸಿನಿಪ್ರಿಯರಿಗೂ ಪರಿಚಿತರು. ‘ಉಪೇಂದ್ರ’ ಸಿನಿಮಾ ಬಳಿಕ ಅವರು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೆ ಕನ್ನಡದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈ ನಡುವೆ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ರವೀನಾ ಟಂಡನ್​ ತಂದೆ ರವಿ ಟಂಡನ್​ (Ravi Tandon) ಅವರು ಇತ್ತೀಚೆಗೆ ನಿಧನರಾದರು. ಫೆ.11ರಂದು ಕೊನೆಯುಸಿರು ಎಳೆದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸಿದ್ದಾರೆ. ರವೀನಾ ಟಂಡನ್​ ಅವರಿಗೆ ಧೈರ್ಯ ತುಂಬಲು ಹಲವಾರು ಸೆಲೆಬ್ರಿಟಿಗಳು ಸಾಂತ್ವನ ಹೇಳಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ರವೀನಾ ಟಂಡನ್​ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ‘ಕೆಜಿಎಫ್​ 2’ ನಟಿಗೆ ಅವರು ಸಾಂತ್ವನ ಹೇಳಿದ್ದಾರೆ. ಅಲ್ಲದೇ, ರವಿ ಟಂಡನ್​ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಕೂಡ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ. ಈ ಪತ್ರವನ್ನು ರವೀನಾ ಟಂಡನ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನಲ್ಲಿ ರವಿ ಟಂಡನ್​ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಉಸಿರಾಟದ ಸಮಸ್ಯೆಯಿಂದ ನಿಧನರಾದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಕುಟುಂಬದವರು 13ನೇ ದಿನ ಕಾರ್ಯಗಳನ್ನು ಮುಗಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರವು ರವೀನಾ ಟಂಡನ್​ ಕೈ ಸೇರಿದೆ. ಆ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ರವೀನಾ ಟಂಡನ್​ ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ನರೇಂದ್ರ ಮೋದಿ ಬರೆದ ಪತ್ರದಲ್ಲಿ ಏನಿದೆ?

‘ತಮ್ಮ ಸೃಜನಶೀಲತೆ ಮತ್ತು ಕೌಶಲಗಳ ಮೂಲಕ ಭಾರತೀಯ ಚಿತ್ರರಂಗವನ್ನು ರವಿ ಟಂಡನ್​ ಅವರು ಶ್ರೀಮಂತಗೊಳಿಸಿದ್ದರು. ಫಿಲ್ಮ್​ ಮೇಕಿಂಗ್​ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದರು. ನಿರ್ದೇಶಕನಾಗಿ ಕೆಲವು ಸ್ಮರಣೀಯ ಸಿನಿಮಾಗಳನ್ನು ಅವರು ನೀಡಿದ್ದರು. ಅವರ ನಿಧನದಿಂದ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ ಆಗಿದೆ. ರವೀನಾ ಟಂಡನ್​ ಅವರ ವ್ಯಕ್ತಿತ್ವ ಮತ್ತು ಯಶಸ್ಸಿನಲ್ಲಿ ರವಿ ಟಂಡನ್​ ಅವರ ಮಾರ್ಗದರ್ಶನ ಮತ್ತು ಮೌಲ್ಯಗಳು ಕಾಣಿಸುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದಲ್ಲಿ ಬರೆದಿದ್ದಾರೆ.

13ನೇ ದಿನದ ಕಾರ್ಯ ಮುಗಿಸಿದ ರವೀನಾ ಟಂಡನ್​:

‘ಇಂದು ತಂದೆಯ 13ನೇ ದಿನದ ಕಾರ್ಯ. ಈ ದಿನವೇ ಆತ್ಮವು ಎಲ್ಲ ಬಂಧಗಳನ್ನು ಕಳಚಿಕೊಂಡು ಸ್ವರ್ಗದಲ್ಲಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ಅವರಿಗಾಗಿ ಪ್ರೀತಿ ತೋರಿಸಿದ ಮತ್ತು ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ಅವರೊಬ್ಬರ ಜಂಟಲ್​ಮ್ಯಾನ್​ ನಿರ್ದೇಶಕ ಆಗಿದ್ದರು. ಅವರು ಸದಾ ಪ್ರೀತಿ ಪಾತ್ರರು’ ಎಂದು ರವೀನಾ ಟಂಡನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ರಮಿಕಾ ಸೇನ್​ ಪಾತ್ರ:

ನಟಿ ರವೀನಾ ಟಂಡನ್​ ಅವರನ್ನು ಮತ್ತೆ ಕನ್ನಡದ ಸಿನಿಮಾದಲ್ಲಿ ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಯಶ್​ ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ ಮತ್ತು ಟೀಸರ್​ ಮೂಲಕ ಈ ಪಾತ್ರ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ರವೀನಾ ಟಂಡನ್​ ಜೊತೆ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಕೂಡ ‘ಕೆಜಿಎಫ್​: 2’ ಚಿತ್ರದಲ್ಲಿ ನಟಿಸಿರುವುದರಿಂದ ಉತ್ತರ ಭಾರತದಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

21ನೇ ವಯಸ್ಸಿನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದ ರವೀನಾ ಟಂಡನ್​ ಆ ವಿಚಾರ ಮುಚ್ಚಿಟ್ಟಿದ್ದೇಕೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್