‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​

ನರೇಂದ್ರ ಮೋದಿ ಅವರು ಬರೆದ ಪತ್ರವನ್ನು ರವೀನಾ ಟಂಡನ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತ್ರ ಬರೆದಿದ್ದಕ್ಕಾಗಿ ಪ್ರಧಾನಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​
ರವೀನಾ ಟಂಡನ್, ರವಿ ಟಂಡನ್, ನರೇಂದ್ರ ಮೋದಿ
Follow us
| Updated By: ಮದನ್​ ಕುಮಾರ್​

Updated on: Feb 25, 2022 | 8:05 AM

ನಟಿ ರವೀನಾ ಟಂಡನ್​ (Raveena Tandon) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮೂಲಕ ದೇಶಾದ್ಯಂತ ಫೇಮಸ್​ ಆಗಿರುವ ಅವರು ಕನ್ನಡದ ಸಿನಿಪ್ರಿಯರಿಗೂ ಪರಿಚಿತರು. ‘ಉಪೇಂದ್ರ’ ಸಿನಿಮಾ ಬಳಿಕ ಅವರು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೆ ಕನ್ನಡದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈ ನಡುವೆ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ರವೀನಾ ಟಂಡನ್​ ತಂದೆ ರವಿ ಟಂಡನ್​ (Ravi Tandon) ಅವರು ಇತ್ತೀಚೆಗೆ ನಿಧನರಾದರು. ಫೆ.11ರಂದು ಕೊನೆಯುಸಿರು ಎಳೆದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸಿದ್ದಾರೆ. ರವೀನಾ ಟಂಡನ್​ ಅವರಿಗೆ ಧೈರ್ಯ ತುಂಬಲು ಹಲವಾರು ಸೆಲೆಬ್ರಿಟಿಗಳು ಸಾಂತ್ವನ ಹೇಳಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ರವೀನಾ ಟಂಡನ್​ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ‘ಕೆಜಿಎಫ್​ 2’ ನಟಿಗೆ ಅವರು ಸಾಂತ್ವನ ಹೇಳಿದ್ದಾರೆ. ಅಲ್ಲದೇ, ರವಿ ಟಂಡನ್​ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಕೂಡ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ. ಈ ಪತ್ರವನ್ನು ರವೀನಾ ಟಂಡನ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನಲ್ಲಿ ರವಿ ಟಂಡನ್​ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಉಸಿರಾಟದ ಸಮಸ್ಯೆಯಿಂದ ನಿಧನರಾದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಕುಟುಂಬದವರು 13ನೇ ದಿನ ಕಾರ್ಯಗಳನ್ನು ಮುಗಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರವು ರವೀನಾ ಟಂಡನ್​ ಕೈ ಸೇರಿದೆ. ಆ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ರವೀನಾ ಟಂಡನ್​ ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ನರೇಂದ್ರ ಮೋದಿ ಬರೆದ ಪತ್ರದಲ್ಲಿ ಏನಿದೆ?

‘ತಮ್ಮ ಸೃಜನಶೀಲತೆ ಮತ್ತು ಕೌಶಲಗಳ ಮೂಲಕ ಭಾರತೀಯ ಚಿತ್ರರಂಗವನ್ನು ರವಿ ಟಂಡನ್​ ಅವರು ಶ್ರೀಮಂತಗೊಳಿಸಿದ್ದರು. ಫಿಲ್ಮ್​ ಮೇಕಿಂಗ್​ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದರು. ನಿರ್ದೇಶಕನಾಗಿ ಕೆಲವು ಸ್ಮರಣೀಯ ಸಿನಿಮಾಗಳನ್ನು ಅವರು ನೀಡಿದ್ದರು. ಅವರ ನಿಧನದಿಂದ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ ಆಗಿದೆ. ರವೀನಾ ಟಂಡನ್​ ಅವರ ವ್ಯಕ್ತಿತ್ವ ಮತ್ತು ಯಶಸ್ಸಿನಲ್ಲಿ ರವಿ ಟಂಡನ್​ ಅವರ ಮಾರ್ಗದರ್ಶನ ಮತ್ತು ಮೌಲ್ಯಗಳು ಕಾಣಿಸುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದಲ್ಲಿ ಬರೆದಿದ್ದಾರೆ.

13ನೇ ದಿನದ ಕಾರ್ಯ ಮುಗಿಸಿದ ರವೀನಾ ಟಂಡನ್​:

‘ಇಂದು ತಂದೆಯ 13ನೇ ದಿನದ ಕಾರ್ಯ. ಈ ದಿನವೇ ಆತ್ಮವು ಎಲ್ಲ ಬಂಧಗಳನ್ನು ಕಳಚಿಕೊಂಡು ಸ್ವರ್ಗದಲ್ಲಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ಅವರಿಗಾಗಿ ಪ್ರೀತಿ ತೋರಿಸಿದ ಮತ್ತು ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ಅವರೊಬ್ಬರ ಜಂಟಲ್​ಮ್ಯಾನ್​ ನಿರ್ದೇಶಕ ಆಗಿದ್ದರು. ಅವರು ಸದಾ ಪ್ರೀತಿ ಪಾತ್ರರು’ ಎಂದು ರವೀನಾ ಟಂಡನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ರಮಿಕಾ ಸೇನ್​ ಪಾತ್ರ:

ನಟಿ ರವೀನಾ ಟಂಡನ್​ ಅವರನ್ನು ಮತ್ತೆ ಕನ್ನಡದ ಸಿನಿಮಾದಲ್ಲಿ ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಯಶ್​ ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ ಮತ್ತು ಟೀಸರ್​ ಮೂಲಕ ಈ ಪಾತ್ರ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ರವೀನಾ ಟಂಡನ್​ ಜೊತೆ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಕೂಡ ‘ಕೆಜಿಎಫ್​: 2’ ಚಿತ್ರದಲ್ಲಿ ನಟಿಸಿರುವುದರಿಂದ ಉತ್ತರ ಭಾರತದಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

21ನೇ ವಯಸ್ಸಿನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದ ರವೀನಾ ಟಂಡನ್​ ಆ ವಿಚಾರ ಮುಚ್ಚಿಟ್ಟಿದ್ದೇಕೆ?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ