AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​ನ ಲವ್​ ಮಾಡುವಾಗ ರೇಖಾಗೆ ಎಚ್ಚರಿಕೆ ಕೊಟ್ಟಿದ್ದ ಜಯಾ; ನಂತರ ಎಲ್ಲವೂ ಬದಲಾಯ್ತು

ಅಮಿತಾಭ್ ಬಚ್ಚನ್ ಹಾಗೂ ಜಯಾ ಬಚ್ಚನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದರು. ಅಮಿತಾಭ್ ಪಕ್ಕಾ ಫ್ಯಾಮಿಲಿ ಮ್ಯಾನ್ ಎನಿಸಿಕೊಂಡಿದ್ದರು. ಆದರೆ, ಇದು ಅವರ ಬಾಳಲ್ಲಿ ರೇಖಾ ಬರೋವರೆಗೆ ಮಾತ್ರ ಇದೆಲ್ಲವೂ ಇತ್ತು. ನಂತರ ಏನಾಯ್ತು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಅಮಿತಾಭ್​ನ ಲವ್​ ಮಾಡುವಾಗ ರೇಖಾಗೆ ಎಚ್ಚರಿಕೆ ಕೊಟ್ಟಿದ್ದ ಜಯಾ; ನಂತರ ಎಲ್ಲವೂ ಬದಲಾಯ್ತು
ಅಮಿತಾಭ್-ರೇಖಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 10, 2024 | 7:49 AM

Share

ನಟಿ ರೇಖಾ ಅವರಿಗೆ ಇಂದು (ಅಕ್ಟೋಬರ್ 10) ಜನ್ಮದಿನ. 90ರ ದಶಕದಲ್ಲಿ ಒಮ್ಮೆ ಮದುವೆ ಆಗಿದ್ದ ಅವರು ಕೆಲವೇ ತಿಂಗಳಲ್ಲಿ ತಮ್ಮ ಪತಿಯನ್ನು ಕಳೆದುಕೊಂಡರು. ಈ ಕಾರಣಕ್ಕೆ ಅವರು ಸಾಕಷ್ಟು ನೋವು ಅನುಭವಿಸಬೇಕಾಗಿ ಬಂದಿತ್ತು. ಇದಕ್ಕೂ ಮೊದಲು ಅಮಿತಾಭ್ ಜೊತೆಗಿನ ಲವ್ ಕಹಾನಿ ಕೊನೆಯಾಗಿತ್ತು. ಅವರು ಎಂದಿಗೂ ಅಮಿತಾಭ್ ಜೊತೆಗಿನ ಪ್ರೀತಿ ವಿಚಾರ ಒಪ್ಪಿಕೊಂಡಿಲ್ಲ. ಆದರೆ. ಈ ವಿಚಾರ ಎಲ್ಲರಿಗೂ ಗೊತ್ತಿತ್ತು. ಅಮಿತಾಭ್ ಪತ್ನಿ ಜಯಾಗೂ ಕೂಡ.

ಅಮಿತಾಭ್ ಬಚ್ಚನ್ ಹಾಗೂ ಜಯಾ ಬಚ್ಚನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದರು. ಅಮಿತಾಭ್ ಪಕ್ಕಾ ಫ್ಯಾಮಿಲಿ ಮ್ಯಾನ್ ಎನಿಸಿಕೊಂಡಿದ್ದರು. ಆದರೆ, ಇದು ಅವರ ಬಾಳಲ್ಲಿ ರೇಖಾ ಬರೋವರೆಗೆ ಮಾತ್ರ ಇದೆಲ್ಲವೂ ಇತ್ತು. ಇದು ಆರಂಭ ಆಗಿದ್ದು ಹೇಗೆ, ಕೊನೆ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅಮಿತಾಭ್ ಬಚ್ಚನ್ ಹಾಗೂ ಜಯಾ 1973ರಲ್ಲಿ ಮದುವೆ ಆದರು. ‘ಜಂಜೀರ್’ ಯಶಸ್ಸಿನ ಬಳಿಕ ಅವರು ವಿವಾಹ ಕಂಡರು. ಮದುವೆ ಆದ ಕೆಲವೇ ವರ್ಷಗಳಲ್ಲಿ ಅವರು ಅಫೇರ್ ಕಾರಣಕ್ಕೆ ಸುದ್ದಿ ಆದರು. ಅಮಿತಾಭ್ ಹಾಗೂ ರೇಖಾ ವಿವಾಹೇತರ ಸಂಬಂಧ ಸಾಕಷ್ಟು ಸುದ್ದಿ ಆಯಿತು.

1976ರ ‘ದೋ ಅಂಜಾನೆ’ ಸಿನಿಮಾದ ಶೂಟ್ ವೇಳೆ ಅಮಿತಾಭ್ ಹಾಗೂ ರೇಖಾ ಲವ್​ಸ್ಟೋರಿ ಶುರುವಾಯಿತು. ರೇಖಾ ಗೆಳತಿಯ ಬಂಗಲೆಯಲ್ಲಿ ಇಬ್ಬರೂ ಸೇರುತ್ತಿದ್ದರು. ಅಮಿತಾಭ್ ಹಾಗೂ ರೇಖಾ ಮಧ್ಯೆ ಸಂಬಂಧ ಬೆಳೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

‘ಗಂಗಾ ಕಿ ಸೌಗಂಧ’ (1978) ಚಿತ್ರದ ಶೂಟ್ ವೇಳೆ ಈ ವಿಚಾರ ರಿವೀಲ್ ಆಯಿತು. ಸಹ ನಟ ರೇಖಾ ಜೊತೆ ತಪ್ಪಾಗಿ ನಡೆದುಕೊಂಡಿದ್ದರು. ಇದರಿಂದ ಅಮಿತಾಭ್ ಅವರು ಟೆಂಪರ್ ಕಳೆದುಕೊಂಡರು. ಇದಾದ ಬಳಿಕ ಅಮಿತಾಭ್ ಹಾಗೂ ರೇಖಾ ಸಂಬಂಧ ಹೊರಬಿತ್ತು. ಆದರೆ, ಇದನ್ನು ಅವರು ಒಪ್ಪಿಲ್ಲ. ಒಮ್ಮೆ ಯಶ್ ಚೋಪ್ರಾ ಈ ವಿಚಾರವನ್ನು ಖಚಿತಪಡಿಸಿ ಬಿಟ್ಟಿದ್ದರು. ‘ರೇಖಾ-ಅಮಿತಾಭ್ ಮದುವೆ ನಡೆದಿದೆ’ ಎಂದು ಕೆಲವು ಕಡೆಗಳಲ್ಲಿ ವರದಿ ಬಿತ್ತರ ಆಯಿತು.

ಇದನ್ನೂ ಓದಿ: ‘ಐಶ್ವರ್ಯಾನ ಅಮಿತಾಭ್ ಸೊಸೆಯಂತೆ ಎಂದೂ ನೋಡಿಲ್ಲ’; ಜಯಾ ಬಚ್ಚನ್

ಜಯಾ ಒಮ್ಮೆ ರೇಖಾನ ಊಟಕ್ಕೆ ಕರೆದಿದ್ದರಂತೆ. ಆಗ ಅವರು ಒಂದು ವಿಚಾರವನ್ನು ಸ್ಪಷ್ಟಪಡಿಸಿದ್ದರು. ‘ನಾನು ಎಷ್ಟೇ ಕಷ್ಟಪಟ್ಟರೂ, ಏನೇ ಆದರೂ ಅಮಿತಾಭ್​ನ ಬಿಡಲ್ಲ’ ಎಂದಿದ್ದರು ಜಯಾ. ಆ ಬಳಿಕ ರೇಖಾ ಮನಸ್ಸು ಮುರಿದು ಹೋಯ್ತು. 1981ರಲ್ಲಿ ರಿಲೀಸ್ ಆದ ‘ಸಿಲ್​ಸಿಲಾ’ ಇವರು ಒಟ್ಟಾಗಿ ನಟಿಸಿದ ಕೊನೆಯ ಚಿತ್ರ. ಈ ಸಿನಿಮಾ ಟ್ರಯಾಂಗಲ್ ಲವ್​ ಸ್ಟೋರಿ ಬಗ್ಗೆ ಇತ್ತು. ಅಮಿತಾಭ್​, ಜಯಾ ಹಾಗೂ ರೇಖಾ ಈ ಚಿತ್ರದಲ್ಲಿ ನಟಿಸಿದ್ದರು. ನಂತರ ಬಚ್ಚನ್ ಕುಟುಂಬದಿಂದ ರೇಖಾ ದೂರ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Thu, 10 October 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ