Jacqueline Fernandez: ವಂಚನೆ ಆರೋಪಿ ಸುಕೇಶ್​ ತನ್ನ ಕನಸಿನ ಹುಡುಗ ಅಂತ ತಿಳಿದು ಮದುವೆ ಆಗಲು ನಿರ್ಧರಿಸಿದ್ದ ಜಾಕ್ವೆಲಿನ್​

Sukesh Chandrasekhar: ಬುಧವಾರ (ಸೆ.14) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಸತತ 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಅನೇಕ ವಿಷಯಗಳ ಹೊರಬಂದಿವೆ.

Jacqueline Fernandez: ವಂಚನೆ ಆರೋಪಿ ಸುಕೇಶ್​ ತನ್ನ ಕನಸಿನ ಹುಡುಗ ಅಂತ ತಿಳಿದು ಮದುವೆ ಆಗಲು ನಿರ್ಧರಿಸಿದ್ದ ಜಾಕ್ವೆಲಿನ್​
ಜಾಕ್ವೆಲಿನ್ ಫರ್ನಾಂಡಿಸ್, ಸುಕೇಶ್ ಚಂದ್ರಶೇಖರ್
Follow us
| Edited By: ಮದನ್​ ಕುಮಾರ್​

Updated on: Sep 17, 2022 | 2:45 PM

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಬಾಲಿವುಡ್​ ನಟಿಯರಾದ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಮತ್ತು ನೋರಾ ಫತೇಹಿ ಅವರು ಕೂಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ಗೆ ಸಂಬಂಧಿಸಿದಂತೆ ನಟಿಯರನ್ನು ಆಗಾಗ ವಿಚಾರಣೆಗೆ ಒಳಪಡಿಸಲಾಗಗುತ್ತಿದೆ. ಪ್ರತಿ ವಿಚಾರಣೆಯಲ್ಲೂ ಶಾಕಿಂಗ್​ ಸತ್ಯಗಳ ಬಯಲಾಗುತ್ತಿದೆ. ಅಚ್ಚರಿ ಏನೆಂದರೆ, ಸುಕೇಶ್​ ಚಂದ್ರಶೇಖರ್​ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಮದುವೆ ಆಗಲು ನಿರ್ಧರಿಸಿದ್ದರು ಎಂಬ ವಿಚಾರ ಈಗ ತಿಳಿದುಬಂದಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸುಕೇಶ್​ ಚಂದ್ರಶೇಖರ್​ ಅನೇಕ ದುಬಾರಿ ಗಿಫ್ಟ್​ಗಳನ್ನು ನೀಡಿದ್ದರು. ಹಾಗಾಗಿ ಇಬ್ಬರ ನಡುವೆ ಆಪ್ತತೆ ಬೆಳೆದಿತ್ತು. ಇಬ್ಬರೂ ತುಂಬ ಕ್ಲೋಸ್​ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ವೈರಲ್​ ಆದವು. ‘ಸುಕೇಶ್​ ಚಂದ್ರಶೇಖರ್​ ತನ್ನ ಕನಸಿನ ಹುಡುಗ ಎಂದು ಜಾಕ್ವೆಲಿನ್​ ಅಂದುಕೊಂಡಿದ್ದರು. ಹಾಗಾಗಿ ಅವರನ್ನೇ ಮದುವೆ ಮಾಡಿಕೊಳ್ಳುವುದಾಗಿಯೂ ಅವರು ನಿರ್ಧರಿಸಿದ್ದರು’ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಎನ್​ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ ಎಂದು ಪಿಂಕ್​ವಿಲ್ಲಾ ವರದಿ ಮಾಡಿದೆ.

ಒಂದಷ್ಟು ದಿನಗಳು ಕಳೆದಂತೆ ಸುಕೇಶ್​ ಚಂದ್ರಶೇಖರ್​ನ ನಿಜವಾದ ಬಣ್ಣ ಜಾಕ್ವೆಲಿನ್​ ಮತ್ತು ನೋರಾ ಫತೇಹಿ ಅವರಿಗೆ ತಿಳಿಯುತ್ತ ಬಂದಿತ್ತು. ಸುಕೇಶ್​ ನಡೆಸುತ್ತಿರುವ ವ್ಯವಹಾರ ಯಾಕೋ ಸರಿ ಇಲ್ಲ ಎಂಬುದು ಗೊತ್ತಾಗುತ್ತಿದ್ದಂತೆಯೇ ನೋರಾ ಫತೇಹಿ ಅವರು ಅಂತರ ಕಾಯ್ದುಕೊಳ್ಳಲು ಆರಂಭಿಸಿದರು. ಆದರೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಜೊತೆ ಒಡನಾಟ ಮುಂದುವರಿಸಿದ್ದರು. ಅದೇ ಈಗ ಅವರಿಗೆ ಕಂಟಕವಾಗಿ ಪರಿಣಮಿಸಿದೆ.

ಇದನ್ನೂ ಓದಿ
Image
ಸುಕೇಶ್ ಚಂದ್ರಶೇಖರ್ ಬಹು ಕೋಟಿ​ ವಂಚನೆ ಪ್ರಕರಣ: ಜಾಕ್ವೆಲಿನ್ ಬಳಿಕ ನೋರಾಗೆ ಹೆಚ್ಚಿತು ಸಂಕಷ್ಟ
Image
ಸುಕೇಶ್ ಕಳ್ಳಾಟ ಜಾಕ್ವೆಲಿನ್​ಗೆ ಗೊತ್ತಿತ್ತು, ಆದರೂ ರಿಲೇಶನ್​ಶಿಪ್​ನಲ್ಲಿದ್ದರು; ಚಾರ್ಜ್​ಶೀಟ್​​ನಲ್ಲಿ ಅಚ್ಚರಿಯ ಉಲ್ಲೇಖ
Image
‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​
Image
‘ದುಬೈಗೆ ಹೋಗಿ ಬರುತ್ತೇನೆ, ಅವಕಾಶ ನೀಡಿ’; ಕೋರ್ಟ್ ಮುಂದೆ ಅಲವತ್ತುಕೊಂಡ ಜಾಕ್ವೆಲಿನ್ ಫರ್ನಾಂಡಿಸ್

ಬುಧವಾರ (ಸೆ.14) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಸತತ 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಅನೇಕ ವಿಷಯಗಳ ಹೊರಬಂದಿವೆ. ಜಾಕ್ವೆಲಿನ್​ ಮ್ಯಾನೇಜರ್​ಗೆ ಸುಕೇಶ್​ ನೀಡಿದ್ದ 8 ಲಕ್ಷ ರೂಪಾಯಿ ಬೆಲೆಯ ಬೈಕ್​ ವಶಪಡಿಸಿಕೊಳ್ಳಲಾಗಿದೆ. ನೋರಾ ಫತೇಹಿ ಅವರನ್ನು ಸುಕೇಶ್​ ಚಂದ್ರಶೇಖರ್​ ಎಂದಿಗೂ ನೇರವಾಗಿ ಭೇಟಿ ಆಗಿಲ್ಲ. ಬದಲಿಗೆ ಎರಡು ಬಾರಿ ವಾಟ್ಸಪ್​ ಮೂಲಕ ಸಂಪರ್ಕಿಸಿದ್ದರು. ಚೆನ್ನೈನ ಸ್ಟುಡಿಯೋಗೆ ಗೆಸ್ಟ್​ ಆಗಿ ಬರುವಂತೆ ನೋರಾಗೆ ಸುಕೇಶ್​ ಆಹ್ವಾನ ನೀಡಿದ್ದರು. ಜೊತೆಗೆ ಬಿಎಂಡಬ್ಲ್ಯು ಕಾರನ್ನು ಗಿಫ್ಟ್​ ಕೊಡುವುದಾಗಿಯೂ ಆಸೆ ತೋರಿಸಿದ್ದರು ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ