AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಚಿತ್ರಗಳ ಎದುರು ಶೋ ಕಳೆದುಕೊಂಡ ‘ಸಾಮ್ರಾಟ್​ ಪೃಥ್ವಿರಾಜ್​’? ‘ವಿಕ್ರಮ್’​, ‘ಮೇಜರ್’​ ಮೇಲುಗೈ

Samrat Prithviraj: ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತ ದಕ್ಷಿಣದಲ್ಲಿ ‘ವಿಕ್ರಮ್​’ ಮತ್ತು ‘ಮೇಜರ್​’ ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದಿವೆ.

ಸೌತ್​ ಚಿತ್ರಗಳ ಎದುರು ಶೋ ಕಳೆದುಕೊಂಡ ‘ಸಾಮ್ರಾಟ್​ ಪೃಥ್ವಿರಾಜ್​’? ‘ವಿಕ್ರಮ್’​, ‘ಮೇಜರ್’​ ಮೇಲುಗೈ
ಮೇಜರ್​, ಸಾಮ್ರಾಟ್​ ಪೃಥ್ವಿರಾಜ್​. ವಿಕ್ರಮ್​
TV9 Web
| Edited By: |

Updated on:Jun 06, 2022 | 4:26 PM

Share

ಭಾರತೀಯ ಚಿತ್ರರಂಗದಲ್ಲಿ ಈಗ ‘ಬಾಲಿವುಡ್​ ವರ್ಸಸ್​ ಸೌತ್​ ಸಿನಿಮಾ’ ಎಂಬ ಚರ್ಚೆ ಶುರುವಾಗಿದೆ. ಅದಕ್ಕೆ ತಕ್ಕಂತೆಯೇ ಸಿನಿಮಾಗಳ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಕೂಡ ಆಗುತ್ತಿದೆ. ಒಂದು ಕಾಲದಲ್ಲಿ ದೇಶಾದ್ಯಂತ ಹವಾ ಮಾಡುತ್ತಿದ್ದ ಹಿಂದಿ ಸಿನಿಮಾಗಳು ಈಗ ಮಂಕಾಗಿವೆ. ಇತ್ತೀಚೆಗೆ ರಿಲೀಸ್​ ಆದ ಬಹುತೇಕ ಬಾಲಿವುಡ್ (Bollywood)​ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸೊರಗಿವೆ. ಅದರಲ್ಲೂ ‘ಕೆಜಿಎಫ್​: ಚಾಪ್ಟರ್​ 2’, ‘ಆರ್​ಆರ್​ಆರ್​’, ‘ಪುಷ್ಪ’ ರೀತಿಯ ಹೈ ಬಜೆಟ್​ ಚಿತ್ರಗಳ ಎದುರಿನಲ್ಲಿ ಹಿಂದಿ ಚಿತ್ರರಂಗದ ಸ್ಟಾರ್​ ನಟರ ಸಿನಿಮಾಗಳೇ ಸೋತು ಸುಮ್ಮನಾಗಿವೆ. ಈಗ ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ ಅಬ್ಬರಿಸುತ್ತಿದೆ. ಇದೇ ಸಮಯಕ್ಕೆ ರಿಲೀಸ್​ ಆಗಿರುವ ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡುತ್ತಿಲ್ಲ. ಈ ನಡುವೆ ಒಂದು ಗಾಸಿಪ್​ ಕೂಡ ಹಬ್ಬಿದೆ. ‘ವಿಕ್ರಮ್​’ ಮತ್ತು ‘ಮೇಜರ್​’ ಸಿನಿಮಾಗಳ ಕಾರಣದಿಂದ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಚಿತ್ರಕ್ಕೆ ಶೋ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಕೆಲವೆಡೆ ವರದಿ ಆಗಿದೆ.

‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಮೊದಲ ದಿನ (ಜೂನ್​ 3) ಗಳಿಸಿದ್ದು 10.70 ಕೋಟಿ ರೂಪಾಯಿ. ಎರಡನೇ ದಿನವಾದ ಶನಿವಾರ ಸಣ್ಣ ಪ್ರಮಾಣದ ಏರಿಕೆ ಆಯಿತು. ಅಂದರೆ, 12.60 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನವಾದ ಭಾನುವಾರ (ಜೂನ್​ 5) 16.10 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ನಿಧಾನವಾಗಿ ಇದರ ಗಳಿಕೆ ಹೆಚ್ಚುತ್ತಿದೆ. ಆದರೆ ಅಕ್ಷಯ್​ ಕುಮಾರ್​ ಅವರಂತಹ ಸ್ಟಾರ್​ ನಟನ ಸಿನಿಮಾಗೆ ವೀಕೆಂಡ್​ನಲ್ಲಿ ಇದು ಸಣ್ಣ ಮೊತ್ತ ಎನ್ನಲಾಗುತ್ತಿದೆ. ಸೋಮವಾರ ಕಲೆಕ್ಷನ್​ ಕುಸಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: Vikram Twitter Review: ಮುಂಜಾನೆಯೇ ‘ವಿಕ್ರಮ್​’ ಚಿತ್ರ ನೋಡಿ ‘ಮ್ಯಾಜಿಕ್​’ ಅಂತ ಹೊಗಳಿದ ಪ್ರೇಕ್ಷಕರು

ಇದನ್ನೂ ಓದಿ
Image
ಎಷ್ಟೇ ಪ್ರಚಾರ ಮಾಡಿದ್ರೂ ಮಂಕಾಗಿದೆ ‘ಸಾಮ್ರಾಟ್​ ಪೃಥ್ವಿರಾಜ್​’ ಕಲೆಕ್ಷನ್​; 2ನೇ ದಿನದ ಗಳಿಕೆ ಎಷ್ಟು?
Image
ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’
Image
‘ವಿಕ್ರಮ್​’ ಚಿತ್ರಕ್ಕೆ ಭರ್ಜರಿ ಓಪನಿಂಗ್​; ಮೊದಲ ದಿನ ಕಮಲ್​ ಹಾಸನ್​ ಸಿನಿಮಾ ಗಳಿಸಿದ್ದೆಷ್ಟು?
Image
ಕಮಲ್ ಹಾಸನ್ ‘ವಿಕ್ರಮ್​’ಗೆ ಕರ್ನಾಟಕದಲ್ಲಿ ವಿರೋಧ, ಸಿನಿಮಾ ನಿಷೇಧಿಸಲು ಆಗ್ರಹ; ಚಿತ್ರತಂಡ ಮಾಡಿದ ತಪ್ಪೇನು?

‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತ ದಕ್ಷಿಣದಲ್ಲಿ ‘ವಿಕ್ರಮ್​’ ಮತ್ತು ‘ಮೇಜರ್​’ ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದಿವೆ. ಉತ್ತರ ಭಾರತದಲ್ಲಿ ಹಿಂದಿ ಪ್ರೇಕ್ಷಕರು ಕೂಡ ಈ ಸಿನಿಮಾಗಳನ್ನು ನೋಡಲು ಬಯಸುತ್ತಿದ್ದಾರೆ. ಹಾಗಾಗಿ ಕೆಲವು ಕಡೆಗಳಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಬದಲಿಗೆ ‘ವಿಕ್ರಮ್​’ ಮತ್ತು ‘ಮೇಜರ್​’ ಸಿನಿಮಾಗಳನ್ನು ಪ್ರದರ್ಶನ ಮಾಡುವಂತೆ ಜನರು ಕೇಳುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ. ಆದರೆ ಚಿತ್ರತಂಡಗಳಿಂದ ಯಾರೊಬ್ಬರೂ ಈ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ

ಇನ್ನೊಂದು ಮೂಲದ ಪ್ರಕಾರ, ಈ ಮೂರು ಸಿನಿಮಾಗಳಿಂದ ಪರಸ್ಪರ ತೊಂದರೆ ಆಗಿಲ್ಲ. ಯಾಕೆಂದರೆ ಪ್ರತಿ ಸಿನಿಮಾದ ಕಥಾವಸ್ತು ಭಿನ್ನವಾಗಿದೆ. ಎಲ್ಲ ಚಿತ್ರವನ್ನೂ ಜನರು ನೋಡುತ್ತಿದ್ದಾರೆ ಎನ್ನಲಾಗಿದೆ. ಮುಂಬೈ ಅಟ್ಯಾಕ್​ ವೇಳೆ ಸಾವನ್ನಪ್ಪಿದ ವೀರ ಯೋಧ ಸಂದೀಪ್​ ಉನ್ನಿಕೃಷ್ಣನ್​ ಅವರ ಜೀವನವನ್ನು ಆಧರಿಸಿ ‘ಮೇಜರ್’​ ಸಿನಿಮಾ ಮೂಡಿಬಂದಿದೆ. ಈ ಸಿನಿಮಾದಲ್ಲಿ ಅಡಿವಿ ಶೇಷ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:41 pm, Mon, 6 June 22

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​