AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ ನಟಿ ರಿಯಾ ಚಕ್ರವರ್ತಿ

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ಸೋಷಿಯಲ್ ಮೀಡಿಯಾ ಜಗತ್ತಿನಿಂದ ಬೇಸತ್ತಿದ್ದಾರೆ. ಇನ್ಮುಂದೆ ರಿಯಲ್ ಆಗಿ ಜೀವಿಸಲು ಅವರು ನಿರ್ಧರಿಸಿದ್ದಾರೆ. ಆ ಕಾರಣದಿಂದ ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಿಂದ ದೂರ ಇರುವುದಾಗಿ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ ನಟಿ ರಿಯಾ ಚಕ್ರವರ್ತಿ
Sushant Singh Rajput, Rhea Chakraborty
ಮದನ್​ ಕುಮಾರ್​
|

Updated on: May 20, 2026 | 5:30 PM

Share

ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಮಾಜಿ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಿಂದ ತಾತ್ಕಾಲಿಕವಾಗಿ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ಲೋಕದಲ್ಲಿನ ನಿರಂತರವಾದ ಗದ್ದಲ ಮತ್ತು ಒತ್ತಡಗಳು ತಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ರಿಯಾ ಚಕ್ರವರ್ತಿ (Rhea Chakraborty) ಅವರು ತಿಳಿಸಿದ್ದಾರೆ. ತಮ್ಮ 3.6 ಮಿಲಿಯನ್ ಫಾಲೋವರ್ಸ್ ಹೊಂದಿರುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ರಿಯಾ, ಆನ್‌ಲೈನ್ ಪ್ರಪಂಚದ ಒತ್ತಡದಿಂದ ಹೊರಬಂದು ನೈಜ ಜಗತ್ತಿನೊಂದಿಗೆ ಮರುಸಂಪರ್ಕ ಸಾಧಿಸಲು ಬಯಸಿದ್ದಾರೆ.

‘ಇತ್ತೀಚೆಗೆ ನನ್ನನ್ನು ನಾನೇ ಸ್ವಲ್ಪ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿರಂತರವಾದ ಗದ್ದಲ, ಸ್ಕ್ರೋಲಿಂಗ್ ಮತ್ತು ಎಲ್ಲದರ ಜೊತೆ ಅಪ್‌ಡೇಟ್ ಆಗಿರುವುದು. ಇದೆಲ್ಲವೂ ನಾನು ಅಂದುಕೊಂಡಿದ್ದಕ್ಕಿಂತ ಹೆಚ್ಚು ಭಾರ ಎನಿಸುತ್ತಿದೆ. ಅದಕ್ಕಾಗಿಯೇ ನಾನು ಸ್ವಲ್ಪ ಸಮಯದವರೆಗೆ ಇವುಗಳಿಂದ ದೂರ ಸರಿಯುತ್ತಿದ್ದೇನೆ. ನಿಧಾನವಾಗಿ ಸಾಗಲು, ಆಳವಾಗಿ ಉಸಿರಾಡಲು ಮತ್ತು ಯಾವುದು ನೈಜವೋ ಅದರೊಂದಿಗೆ ಮತ್ತೆ ಕನೆಕ್ಟ್ ಆಗಲು ಈ ನಿರ್ಧಾರ ಮಾಡಿದ್ದೇನೆ. ಸದ್ಯಕ್ಕೆ ಪೋಸ್ಟ್ ಮಾಡುವ ಕ್ಷಣಗಳಿಗಿಂತ, ಬದುಕುವ ಕ್ಷಣಗಳನ್ನು ಆರಿಸಿಕೊಳ್ಳುತ್ತಿದ್ದೇನೆ’ ಎಂದು ರಿಯಾ ಬರೆದುಕೊಂಡಿದ್ದಾರೆ.

2020ರಲ್ಲಿ ನಟ ಸುಶಾಂತ್ ಸಿಂಗ್ ರಜ್‌ಪೂತ್ ನಿಧನದ ನಂತರ ರಿಯಾ ಚಕ್ರವರ್ತಿ ತೀವ್ರವಾಗಿ ಸಾರ್ವಜನಿಕ ಟೀಕೆಗಳನ್ನು ಎದುರಿಸಬೇಕಾಗಿತ್ತು. ಆ ಕಠಿಣ ದಿನಗಳ ನಂತರ ಅವರು ನಿಧಾನವಾಗಿ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನವನ್ನು ಮತ್ತೆ ಕಟ್ಟಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರಚಾರದಿಂದ ದೂರವಿದ್ದ ಅವರು, ಆಯ್ದ ಕಾರ್ಯಕ್ರಮಗಳು ಮತ್ತು ಪ್ರಾಜೆಕ್ಟ್‌ಗಳ ಮೂಲಕ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುತ್ತಿದ್ದಾರೆ.

ರಿಯಾ ಚಕ್ರವರ್ತಿ ಈಗ ನಟನೆಗೆ ಭರ್ಜರಿ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಪ್ರಸಿದ್ಧ ನಿರ್ದೇಶಕ ಹನ್ಸಲ್ ಮೆಹ್ತಾ ಅವರ ಮುಂಬರುವ ನೆಟ್‌ಫ್ಲಿಕ್ಸ್ ಡ್ರಾಮಾ ಸರಣಿ ‘ಫ್ಯಾಮಿಲಿ ಬಿಸ್ನೆಸ್’ನಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸರಣಿಯಲ್ಲಿ ಅನಿಲ್ ಕಪೂರ್, ವಿಜಯ್ ವರ್ಮಾ, ನೇಹಾ ಧೂಪಿಯಾ ಮತ್ತು ಧ್ರುವ್ ಸೆಹಗಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ. 2021ರಲ್ಲಿ ಅಮಿತಾಭ್ ಬಚ್ಚನ್ ಜೊತೆ ನಟಿಸಿದ್ದ ‘ಚೆಹ್ರೆ’ ಚಿತ್ರದ ನಂತರ ರಿಯಾ ಅವರು ನಟನೆಗೆ ಮರಳುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್; ದೇವಸ್ಥಾನಕ್ಕೆ ಬಂದ ನಟಿ

ಇತ್ತೀಚೆಗಷ್ಟೇ ರಿಯಾ ಚಕ್ರವರ್ತಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ನ್ಯಾಯಾಲಯವು ಅವರ ಬ್ಯಾಂಕ್ ಖಾತೆಗಳನ್ನು ಬಳಸಲು ಅನುಮತಿ ನೀಡಿದೆ. 2020ರಲ್ಲಿ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಮಾದಕವಸ್ತು ನಿಯಂತ್ರಣ ದಳವು ರಿಯಾ ಅವರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿತ್ತು. ವರ್ಷಗಟ್ಟಲೆ ಖಾತೆಗಳನ್ನು ಫ್ರೀಜ್ ಮಾಡಿಟ್ಟಿರುವುದರಿಂದ ತಮಗೆ ಆರ್ಥಿಕ ಸಂಕಷ್ಟ ಎದುರಾಗಿದೆ ಮತ್ತು ಇನ್ನು ಮುಂದೆ ಅದನ್ನು ಮುಂದುವರಿಸುವುದು ಸರಿಯಲ್ಲ ಎಂಬ ರಿಯಾ ಅವರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?