AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಸುಶಾಂತ್​ ಪ್ರೇಯಸಿ ರಿಯಾ? ಒಂದು ವಾರದ ಸಂಭಾವನೆ ಇಷ್ಟೊಂದಾ?

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು.

ಬಿಗ್​ ಬಾಸ್​ ಮನೆಗೆ ಸುಶಾಂತ್​ ಪ್ರೇಯಸಿ ರಿಯಾ? ಒಂದು ವಾರದ ಸಂಭಾವನೆ ಇಷ್ಟೊಂದಾ?
TV9 Web
| Edited By: |

Updated on:Sep 29, 2021 | 9:34 PM

Share

ಯಶಸ್ವಿಯಾಗಿ 14 ಸೀಸನ್​ಗಳನ್ನು ಪೂರ್ಣಗೊಳಿಸಿರುವ ಹಿಂದಿ ಬಿಗ್​ ಬಾಸ್​ ಈಗ 15ನೇ ಸೀಸನ್​ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಿಗ್​ ಬಾಸ್​ ಒಟಿಟಿ ಶೋ ಪೂರ್ಣಗೊಂಡಿದ್ದು, ಶೀಘ್ರವೇ ಬಿಗ್​ ಬಾಸ್​ 15ನೇ ಸೀಸನ್​ ಆರಂಭಗೊಳ್ಳಲಿದೆ. ಅಚ್ಚರಿ ವಿಚಾರ ಎಂದರೆ, ಸುಶಾಂತ್​ ಸಿಂಗ್ ಪ್ರೇಯಸಿ ಆಗಿದ್ದ ರಿಯಾ ಚಕ್ರವರ್ತಿ ಬಿಗ್​ ಬಾಸ್​ ಮನೆಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ.

ಸುಶಾಂತ್​ ಸಿಂಗ್ ಸಾವಿನ ನಂತರದಲ್ಲಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂದಿತ್ತು. ರಿಯಾ ಹಾಗೂ ಸುಶಾಂತ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇವರ ನಡುವಿನ ಪ್ರೀತಿ ಮುರಿದು ಬಿದ್ದಿತ್ತು. ಸುಶಾಂತ್​ ಸಾವಿನ ಪ್ರಕರಣದ ತನಿಖೆ ವೇಳೆ ರಿಯಾ ವಿಚಾರಣೆ ಮಾಡಲಾಗಿತ್ತು. ನಂತರ ಅವರು ಈ ಪ್ರಕರಣದಲ್ಲಿ ಅರೆಸ್ಟ್​ ಕೂಡ ಆಗಿದ್ದರು. ಅವರು ಜೈಲಿನಿಂದ ಜಾಮೀನು ಪಡೆದು ಹೊರ ಬಂದು ಹಲವು ತಿಂಗಳಾಗಿವೆ. ಈಗ ಬಿಗ್​ ಬಾಸ್ ತಂಡದವರು ರಿಯಾ ಅವರನ್ನು ಅಪ್ರೋಚ್​ ಮಾಡಿದ್ದಾರೆ ಎನ್ನಲಾಗಿದೆ.

ರಿಯಾ ಚಕ್ರವರ್ತಿ ವೈಯಕ್ತಿಕ ಜೀವನದ ಬಗ್ಗೆ ಜನರಿಗೆ ಆಸಕ್ತಿ ಇದೆ. ಸುಶಾಂತ್ ಸಿಂಗ್​ ಜತೆ ಅವರು ಹೇಗಿದ್ದರು ಎನ್ನುವ ಬಗ್ಗೆಯೂ ಅನೇಕರಿಗೆ ಕುತೂಹಲವಿದೆ. ಒಂದೊಮ್ಮೆ ರಿಯಾ ಬಿಗ್​ ಬಾಸ್​ ಮನೆ ಒಳಗೆ ಹೋದರೆ ಒಂದಷ್ಟು ವಿಚಾರಗಳು ಹೊರ ಬರಲಿವೆ. ಕುತೂಹಲದಿಂದ ಜನರು ಕೂಡ ಶೋ ವೀಕ್ಷಣೆ ಮಾಡುವ ಸಾಧ್ಯತೆ ಹೆಚ್ಚು. ಈ ಕಾರಣಕ್ಕೆ ರಿಯಾ ಅವರಿಗೆ ಮೊದಲ ಪ್ರಿಫರೆನ್ಸ್​ ನೀಡಲಾಗುತ್ತಿದೆ.

ಇನ್ನು, ರಿಯಾ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವ ಕುತೂಹಲ ಕೂಡ ಇದೆ. ಅವರು ಜೈಲಿಗೆ ಹೋಗಿ ಬಂದ ನಂತರದಲ್ಲಿ ಸ್ವಲ್ಪ ಕುಗ್ಗಿದಂತೆ ಕಾಣುತ್ತಿದ್ದಾರೆ. ಹೀಗಾಗಿ, ಮಾಧ್ಯಮಗಳ ಎದುರು ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಅವರು ಆಫರ್​ ರಿಜೆಕ್ಟ್​ ಮಾಡಬಹುದು ಅಥವಾ ಬಿಗ್​ ಬಾಸ್​ ಮನೆ ಒಳಗೆ ತೆರಳಿ ತಾವು ಯಾರು ಎಂಬುದನ್ನು ಸಾಬೀತು ಮಾಡಿಕೊಳ್ಳಲು ಶೋನಲ್ಲಿ ಭಾಗವಹಿಸೋಕೆ ಒಪ್ಪಿಕೊಳ್ಳಬಹುದು.

ರಿಯಾಗೆ ನೀಡುತ್ತಿರುವ ಸಂಭಾವನೆ ವಿಚಾರ ಕೂಡ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರಿಯಾ ಒಂದು ವಾರಕ್ಕೆ ಬರೋಬ್ಬರಿ 35 ಲಕ್ಷ ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಟಿಆರ್​ಪಿ ದೃಷ್ಟಿಯಲ್ಲಿ ರಿಯಾ ಬಹಳ ಮಹತ್ವ ಪಡೆದುಕೊಳ್ಳುತ್ತಾರೆ. ಈ ಕಾರಣಕ್ಕೆ ಅವರಿಗೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಕೊಡೋಕೆ ವಾಹಿನಿಯವರು ಒಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ನೈಜೀರಿಯಾ ನಟನ ಬಂಧನ; ಈತ ಅಣ್ಣಾಬಾಂಡ್, ಪರಮಾತ್ಮ ಸಿನಿಮಾಗಳಲ್ಲೂ ನಟಿಸಿದ್ದ!

ಹೊಸ ಫೋಟೋಶೂಟ್​​ನಲ್ಲಿ ಮಿಂಚಿದ ಬಿಗ್ ಬಾಸ್ ಪ್ರಿಯಾಂಕಾ ತಿಮ್ಮೇಶ್

Published On - 8:14 pm, Wed, 29 September 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ