AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್; ದೇವಸ್ಥಾನಕ್ಕೆ ಬಂದ ನಟಿ

ರಿಯಾ ಚಕ್ರವರ್ತಿ ಮೇಲೆ ಕೇಳಿಬಂದಿದ್ದ ಆರೋಪಗಳು ಒಂದೆರಡಲ್ಲ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ರಿಯಾ ಅವರನ್ನೇ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ ಈಗ ಸಿಬಿಐ ಅಂತಿಮ ತನಿಖಾ ವರದಿ ಸಲ್ಲಿಸಿದ್ದು, ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಕ್ಲೀನ್ ಚಿಟ್ ಸಿಕ್ಕ ಬಳಿಕ ರಿಯಾ ಚಕ್ರವರ್ತಿ ಅವರು ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್; ದೇವಸ್ಥಾನಕ್ಕೆ ಬಂದ ನಟಿ
Sushant Singh Rajput, Rhea Chakraborty
ಮದನ್​ ಕುಮಾರ್​
|

Updated on:Mar 24, 2025 | 4:20 PM

Share

ನಟಿ ರಿಯಾ ಚಕ್ರವರ್ತಿ (Rhea Chakraborty) ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಸುಶಾಂತ್ ಸಿಂಗ್ ರಜಪೂತ್​ (Sushant Singh Rajput) ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿ ಮೇಲೆ ಹಲವು ಆರೋಪಗಳನ್ನು ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಈಗ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ರಿಯಾ ಚಕ್ರವರ್ತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಸುಶಾಂತ್ ಸಾವಿನಲ್ಲಿ ರಿಯಾ ಚಕ್ರವರ್ತಿ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಆದ್ದರಿಂದ ರಿಯಾ ಚಕ್ರವರ್ತಿ ಅವರಿಗೆ ಖುಷಿ ಆಗಿದೆ. ಅವರ ಕುಟುಂಬದರು, ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕ್ಲೀನ್ ಚಿಟ್ (Clean Chit) ಸಿಕ್ಕ ಕೂಡಲೇ ರಿಯಾ ಚಕ್ರವರ್ತಿ ಅವರು ದೇವರ ದರ್ಶನ ಪಡೆದಿದ್ದಾರೆ.

ಸೋಮವಾರ (ಮಾರ್ಚ್​ 24) ರಿಯಾ ಚಕ್ರವರ್ತಿ ಅವರು ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅವರ ಜೊತೆ ತಂದೆ ಇಂದ್ರಜಿತ್ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಕೂಡ ದೇವಸ್ಥಾನಕ್ಕೆ ಬಂದಿದ್ದಾರೆ. ಈ ವೇಳೆ ಅವರು ಪಾಪರಾಜಿ ಕ್ಯಾಮೆರಾ ಕಂಡು ಕೈ ಮುಗಿದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ. ಕ್ಲೀನ್ ಚಿಟ್ ಸಿಕ್ಕಿದ್ದರಿಂದ ಈ ಕುಟುಂಬದವರ ಮುಖದಲ್ಲಿ ನಗು ಮೂಡಿದೆ.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಬಾಲಿವುಡ್ ನಟ ಸುಶಾಂತ್ ರಜಪೂತ್ ಜೊತೆ ನಟಿ ರಿಯಾ ಚಕ್ರವರ್ತಿ ಲಿವ್-ಇನ್-ರಿಲೇಷನ್​ಶಿಪ್​ನಲ್ಲಿ ಇದ್ದರು. ಇಬ್ಬರ ಆಪ್ತವಾದ ಫೋಟೋಗಳು ವೈರಲ್ ಆಗಿದ್ದವು. ಆದರೆ ಸುಶಾಂತ್ ಸಿಂಗ್ ರಜಪೂತ್ ನಿಧನದ ಬಳಿಕ ರಿಯಾ ಚಕ್ರವರ್ತಿ ಮೇಲೆ ಅನುಮಾನ ಮೂಡಿತ್ತು. ಸುಶಾಂತ್ ಆತ್ಮಹತ್ಯೆಗೆ ರಿಯಾ ಚಕ್ರವರ್ತಿಯೇ ಪ್ರಚೋದನೆ ನೀಡಿದ್ದಾರೆ ಎಂದು ನಟನ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಿಯಾ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: ಬೈಕರ್ ಆದ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ

ರಿಯಾ ಚಕ್ರವರ್ತಿ ಅವರು ಎಲ್ಲರ ಟೀಕೆಗೆ ಗುರಿ ಆಗಿದ್ದರು. ಸುಶಾಂತ್ ಅವರ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹಣವನ್ನು ರಿಯಾ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೂಡ ಎದುರಾಗಿತ್ತು. ಡ್ರಗ್ಸ್ ಪೂರೈಕೆ, ಅಕ್ರಮ ಹಣ ಸಾಗಾಣಿಕೆ ಸೇರಿದಂತೆ ಹಲವು ಆಯಾಮದಿಂದಲೂ ತನಿಖೆ ನಡೆಸಲಾಗಿತ್ತು. ಈಗ ಸಿಬಿಐ ತನಿಖೆ ಪೂರ್ಣಗೊಂಡಿದ್ದು, ಸುಶಾಂತ್ ನಿಧನದಲ್ಲಿ ರಿಯಾ ಕೈವಾಡ ಇಲ್ಲ ಎಂದು ವರದಿ ಸಲ್ಲಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Mon, 24 March 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು