AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..

ರಿಂಕು ಸಿಂಗ್ ಬರೋಬ್ಬರಿ 5 ಸಿಕ್ಸ್ ಬಾರಿಸಿ ಕೆಕೆಆರ್​ಗೆ ಗೆಲುವನ್ನು ತಂದುಕೊಟ್ಟರು. ಕೆಕೆಆರ್​ ಮಾಲೀಕ ಶಾರುಖ್ ಖಾನ್, ಅವರ ಮಗ ಆರ್ಯನ್ ಖಾನ್, ರಣವೀರ್ ಸಿಂಗ್ ಹಾಗೂ ಮೊದಲಾದವರು ರಿಂಕು ಆಟವನ್ನು ಕೊಂಡಾಡಿದ್ದಾರೆ.

Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..
ಶಾರುಖ್​-ರಿಂಕು ಸಿಂಗ್
ರಾಜೇಶ್ ದುಗ್ಗುಮನೆ
|

Updated on: Apr 10, 2023 | 8:08 AM

Share

ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ನಡೆದ ಪಂದ್ಯ ಸಾಕಷ್ಟು ರೋಚಕತೆ ಮೂಡಿಸಿತ್ತು. ಕೊನೆಯ ಓವರ್​ನಲ್ಲಿ ಕೆಕೆಆರ್​​ಗೆ 29 ರನ್​ಗಳ ಅವಶ್ಯಕತೆ ಇತ್ತು. ಆಗ ಬ್ಯಾಟಿಂಗ್​ಗೆ ಇಳಿದ ರಿಂಕು ಸಿಂಗ್ ಬರೋಬ್ಬರಿ 5 ಸಿಕ್ಸ್ ಬಾರಿಸಿ ಕೆಕೆಆರ್​ಗೆ ಗೆಲುವನ್ನು ತಂದುಕೊಟ್ಟರು. ಈ ಮೂಲಕ ಕೆಕೆಆರ್​ಗೆ ಐತಿಹಾಸಿಕ ಗೆಲುವು ಸಿಕ್ಕಿತು. ರಿಂಕು ಸಿಂಗ್ (Rinku Singh) ನಿಜವಾದ ಹೀರೋ ಎನಿಸಿಕೊಂಡರು. ಕೆಕೆಆರ್​ ಮಾಲೀಕ ಶಾರುಖ್ ಖಾನ್, ಅವರ ಮಗ ಆರ್ಯನ್ ಖಾನ್, ರಣವೀರ್ ಸಿಂಗ್ ಹಾಗೂ ಮೊದಲಾದವರು ರಿಂಕು ಆಟವನ್ನು ಕೊಂಡಾಡಿದ್ದಾರೆ.

ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಬರೋಬ್ಬರಿ 204ರನ್​ ಕಲೆ ಹಾಕಿತು. ಈ ಬೃಹತ್​ ಮೊತ್ತ ಬೆನ್ನಟ್ಟಿದ ಕೆಕೆಆರ್​ಗೆ ಒಳ್ಳೆಯ ಆರಂಭ ಸಿಕ್ಕಿತು. 40 ಎಸೆತಗಳಲ್ಲಿ ವೆಂಕಟೇಶ್ ಅಯ್ಯರ್ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ 83 ರನ್ ​ಗಳಿಸಿ ಔಟಾದರು. ನಿತೀಶ್ ರಾಣಾ ಕೂಡ ತಂಡಕ್ಕೆ ಆಸರೆ ಆದರು. ಇತ್ತ ಜಿಟಿ ಬೌಲರ್ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ತೆಗೆಯುವ ಮೂಲಕ ಗುಜರಾತ್ ಟೈಟಾನ್ಸ್​ಗೆ ಗೆಲುವನ್ನು ತಂಡುಕೊಡುವ ಭರವಸೆ ಇತ್ತರು. ಆದರೆ, ರೋಚಕ ಕೊನೆಯ ಓವರ್​ನಲ್ಲಿ ಆಟದ ಗತಿಯೇ ಬದಲಾಯಿತು.

ಇದನ್ನೂ ಓದಿ: Rinku Singh: ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ರೋಚಕ ಜಯ ತಂದುಕೊಟ್ಟ ರಿಂಕು ಸಿಂಗ್

ಶಾರುಖ್ ಖಾನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಜೂಮೆ ಜೋ ಪಠಾಣ್​..’ ಬದಲು ‘ಜೂಮೆ ಜೋ ರಿಂಕು..’ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ‘ಮೈ ಬೇಬಿ ರಿಂಕು’ ಎಂದು ಕರೆದಿದ್ದಾರೆ. ರಣವೀರ್ ಸಿಂಗ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ರಿಂಕು.. ರಿಂಕು.. ರಿಂಕು..’ ಎಂದು ಚಿಯರ್ ಮಾಡಿದ್ದಾರೆ. ರಿಂಕು ಅವರ ಫೋಟೋ ಅನ್ನು ಸ್ಟೇಟಸ್​ನಲ್ಲಿ ಹಾಕಿ ‘ಬೀಸ್ಟ್​’ ಎಂದು ಆರ್ಯನ್ ಖಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2023: ಹಿಂದೆಂದೂ ಕಂಡರಿಯದ ಚೇಸಿಂಗ್: ಐಪಿಎಲ್​ನಲ್ಲಿ ದಾಖಲೆ ನಿರ್ಮಿಸಿದ ರಿಂಕು ಸಿಂಗ್

ಸಿನಿಮಾ ವಿಚಾರಕ್ಕೆ ಬರೋದಾದರೆ, ಶಾರುಖ್ ಖಾನ್ ಅವರು ‘ಪಠಾಣ್’ ಗೆಲುವಿನ ಖುಷಿಯಲ್ಲಿದ್ದಾರೆ. ‘ಜವಾನ್​’ ಹಾಗೂ ‘ಡಂಕಿ’ ಸಿನಿಮಾಗಳ ಶೂಟ್​​​ನಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಬಿಡುವು ಮಾಡಿಕೊಂಡುಬಂದು ಕೆಕೆಆರ್ ಮ್ಯಾಚ್ ವೀಕ್ಷಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು