AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..

ರಿಂಕು ಸಿಂಗ್ ಬರೋಬ್ಬರಿ 5 ಸಿಕ್ಸ್ ಬಾರಿಸಿ ಕೆಕೆಆರ್​ಗೆ ಗೆಲುವನ್ನು ತಂದುಕೊಟ್ಟರು. ಕೆಕೆಆರ್​ ಮಾಲೀಕ ಶಾರುಖ್ ಖಾನ್, ಅವರ ಮಗ ಆರ್ಯನ್ ಖಾನ್, ರಣವೀರ್ ಸಿಂಗ್ ಹಾಗೂ ಮೊದಲಾದವರು ರಿಂಕು ಆಟವನ್ನು ಕೊಂಡಾಡಿದ್ದಾರೆ.

Rinku Singh: ರಿಂಕು ಸಿಂಗ್ ಆಟ ನೋಡಿ ಶಾರುಖ್​, ರಣವೀರ್, ಆರ್ಯನ್ ಹೇಳಿದ್ದೇನು ನೋಡಿ..
ಶಾರುಖ್​-ರಿಂಕು ಸಿಂಗ್
ರಾಜೇಶ್ ದುಗ್ಗುಮನೆ
|

Updated on: Apr 10, 2023 | 8:08 AM

Share

ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ನಡೆದ ಪಂದ್ಯ ಸಾಕಷ್ಟು ರೋಚಕತೆ ಮೂಡಿಸಿತ್ತು. ಕೊನೆಯ ಓವರ್​ನಲ್ಲಿ ಕೆಕೆಆರ್​​ಗೆ 29 ರನ್​ಗಳ ಅವಶ್ಯಕತೆ ಇತ್ತು. ಆಗ ಬ್ಯಾಟಿಂಗ್​ಗೆ ಇಳಿದ ರಿಂಕು ಸಿಂಗ್ ಬರೋಬ್ಬರಿ 5 ಸಿಕ್ಸ್ ಬಾರಿಸಿ ಕೆಕೆಆರ್​ಗೆ ಗೆಲುವನ್ನು ತಂದುಕೊಟ್ಟರು. ಈ ಮೂಲಕ ಕೆಕೆಆರ್​ಗೆ ಐತಿಹಾಸಿಕ ಗೆಲುವು ಸಿಕ್ಕಿತು. ರಿಂಕು ಸಿಂಗ್ (Rinku Singh) ನಿಜವಾದ ಹೀರೋ ಎನಿಸಿಕೊಂಡರು. ಕೆಕೆಆರ್​ ಮಾಲೀಕ ಶಾರುಖ್ ಖಾನ್, ಅವರ ಮಗ ಆರ್ಯನ್ ಖಾನ್, ರಣವೀರ್ ಸಿಂಗ್ ಹಾಗೂ ಮೊದಲಾದವರು ರಿಂಕು ಆಟವನ್ನು ಕೊಂಡಾಡಿದ್ದಾರೆ.

ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಬರೋಬ್ಬರಿ 204ರನ್​ ಕಲೆ ಹಾಕಿತು. ಈ ಬೃಹತ್​ ಮೊತ್ತ ಬೆನ್ನಟ್ಟಿದ ಕೆಕೆಆರ್​ಗೆ ಒಳ್ಳೆಯ ಆರಂಭ ಸಿಕ್ಕಿತು. 40 ಎಸೆತಗಳಲ್ಲಿ ವೆಂಕಟೇಶ್ ಅಯ್ಯರ್ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ 83 ರನ್ ​ಗಳಿಸಿ ಔಟಾದರು. ನಿತೀಶ್ ರಾಣಾ ಕೂಡ ತಂಡಕ್ಕೆ ಆಸರೆ ಆದರು. ಇತ್ತ ಜಿಟಿ ಬೌಲರ್ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ತೆಗೆಯುವ ಮೂಲಕ ಗುಜರಾತ್ ಟೈಟಾನ್ಸ್​ಗೆ ಗೆಲುವನ್ನು ತಂಡುಕೊಡುವ ಭರವಸೆ ಇತ್ತರು. ಆದರೆ, ರೋಚಕ ಕೊನೆಯ ಓವರ್​ನಲ್ಲಿ ಆಟದ ಗತಿಯೇ ಬದಲಾಯಿತು.

ಇದನ್ನೂ ಓದಿ: Rinku Singh: ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ರೋಚಕ ಜಯ ತಂದುಕೊಟ್ಟ ರಿಂಕು ಸಿಂಗ್

ಶಾರುಖ್ ಖಾನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಜೂಮೆ ಜೋ ಪಠಾಣ್​..’ ಬದಲು ‘ಜೂಮೆ ಜೋ ರಿಂಕು..’ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ‘ಮೈ ಬೇಬಿ ರಿಂಕು’ ಎಂದು ಕರೆದಿದ್ದಾರೆ. ರಣವೀರ್ ಸಿಂಗ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ರಿಂಕು.. ರಿಂಕು.. ರಿಂಕು..’ ಎಂದು ಚಿಯರ್ ಮಾಡಿದ್ದಾರೆ. ರಿಂಕು ಅವರ ಫೋಟೋ ಅನ್ನು ಸ್ಟೇಟಸ್​ನಲ್ಲಿ ಹಾಕಿ ‘ಬೀಸ್ಟ್​’ ಎಂದು ಆರ್ಯನ್ ಖಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2023: ಹಿಂದೆಂದೂ ಕಂಡರಿಯದ ಚೇಸಿಂಗ್: ಐಪಿಎಲ್​ನಲ್ಲಿ ದಾಖಲೆ ನಿರ್ಮಿಸಿದ ರಿಂಕು ಸಿಂಗ್

ಸಿನಿಮಾ ವಿಚಾರಕ್ಕೆ ಬರೋದಾದರೆ, ಶಾರುಖ್ ಖಾನ್ ಅವರು ‘ಪಠಾಣ್’ ಗೆಲುವಿನ ಖುಷಿಯಲ್ಲಿದ್ದಾರೆ. ‘ಜವಾನ್​’ ಹಾಗೂ ‘ಡಂಕಿ’ ಸಿನಿಮಾಗಳ ಶೂಟ್​​​ನಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಬಿಡುವು ಮಾಡಿಕೊಂಡುಬಂದು ಕೆಕೆಆರ್ ಮ್ಯಾಚ್ ವೀಕ್ಷಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ