AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾದ ಪೋಸ್ಟರ್ ಬಿಡುಗಡೆ

Rishab Shetty: ‘ಕಾಂತಾರ’ ಸಿನಿಮಾದಿಂದಾಗಿ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಇದೀಗ ತೆಲುಗಿನಲ್ಲಿ ಒಂದು ಹಾಗೂ ಹಿಂದಿಯ ಒಂದು ಭಾರಿ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಛತ್ರಪತಿ ಶಿವಾಜಿ ಜೀವನ ಕುರಿತಾದ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿತ್ತು. ಇದೀಗ ಹೊಸದೊಂದು ಪೋಸ್ಟರ್ ಬಿಡುಗಡೆ ಆಗಿದೆ.

ರಿಷಬ್ ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾದ ಪೋಸ್ಟರ್ ಬಿಡುಗಡೆ
Shivaji Maharaj12
ಮಂಜುನಾಥ ಸಿ.
|

Updated on: Feb 19, 2025 | 1:46 PM

Share

‘ಕಾಂತಾರ’ ಸಿನಿಮಾದಿಂದ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ಅವರಿಗೆ ದೊಡ್ಡ ಮಟ್ಟದ ಗೌರವ, ಐಶ್ವರ್ಯ ಮತ್ತು ಅವಕಾಶಗಳನ್ನು ತಂದುಕೊಂಡಿದೆ. ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ನಿರ್ದೇಶನ ಮತ್ತು ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಪರಭಾಷೆಗಳಿಂದಲೂ ರಿಷಬ್ ಶೆಟ್ಟಿ ಅವರಿಗೆ ದೊಡ್ಡ ದೊಡ್ಡ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ತೆಲುಗಿನ ‘ಜೈ ಹನುಮಾನ್’ ಪ್ಯಾನ್ ಇಂಡಿಯಾ ಸಿನಿಮಾನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಅದರ ಜೊತೆಗೆ ಬಾಲಿವುಡ್ ಸಿನಿಮಾದ ಅವಕಾಶವೂ ರಿಷಬ್​ಗೆ ಬಂದಿದ್ದು, ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ.

ತೆಲುಗಿನಲ್ಲಿ ಫ್ಯಾಂಟಸಿ ಸಿನಿಮಾ ಆಗಿರುವ ‘ಜೈ ಹನುಮಾನ್’ನಲ್ಲಿ ಆಂಜನೇಯನ ಪಾತ್ರದಲ್ಲಿ ನಟಿಸುತ್ತಿರುವ ರಿಷಬ್ ಶೆಟ್ಟಿ, ಹಿಂದಿ ಸಿನಿಮಾದಲ್ಲಿ ಛತ್ರಪತಿ ಶಿವಾಜಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಒಂದು ಪೋಸ್ಟರ್ ಈ ಹಿಂದೆಯೇ ಬಿಡುಗಡೆ ಆಗಿತ್ತು. ಇದೀಗ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್​ನಲ್ಲಿ ಶಿವಾಜಿ ಮಹಾರಾಜ ಪಾತ್ರಧಾರಿ ರಿಷಬ್ ಶೆಟ್ಟಿ ದೇವಿಯ ಬೃಹತ್ ವಿಗ್ರಹದ ಮುಂದೆ ನಿಂತಿರುವ ಚಿತ್ರವಿದೆ. ಶಿವಾಜಿ ಮಹಾರಾಜರ 395ನೇ ಜಯಂತಿಯ ಪ್ರಯುಕ್ತ ಈ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಸಿನಿಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದು, ಗಟ್ಟಿ ತಂಡವನ್ನೇ ಜೊತೆಗೆ ಕಟ್ಟಿಕೊಂಡಿದ್ದಾರೆ. ಹಲವು ರಾಷ್ಟ್ರಪ್ರಶಸ್ತಿ ವಿಜೇತರು ಮತ್ತು ಆಸ್ಕರ್ ವಿಜೇತರು ಸಹ ಚಿತ್ರತಂಡದಲ್ಲಿ ಇದ್ದಾರೆ. ಆಸ್ಕರ್ ವಿಜೇತ ರಸೂಲ್ ಪೂಕಟ್ಟಿ ಸೌಂಡ್ ಡಿಸೈನ್ ಮಾಡಲಿದ್ದಾರೆ. ಗೀತ ಸಾಹಿತಿ ಪ್ರಸೂನ್ ಜೋಶಿ, ಸಿನಿಮಾಟೊಗ್ರಾಫರ್ ರವಿವರ್ಮಾ, ಆಕ್ಷನ್ ನಿರ್ದೇಶನವನ್ನು ಹಾಲಿವುಡ್​ನ ಕ್ರೇಗ್, ಎಡಿಟಿಂಗ್ ಫಿಲೋಮಿನ್ ರಾಜ, ಸಂಗೀತವನ್ನು ಪ್ರೀತಮ್ ನೀಡಲಿದ್ದಾರೆ ಇನ್ನಿತರೆ ಪ್ರತಿಭಾವಂತರು ಈ ಸಿನಿಮಾಕ್ಕೆ ಕೆಲಸ ಮಾಡಲಿದ್ದಾರೆ.

ಇದನ್ನೂ ಓದಿ:ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

‘ಕಾಂತಾರ 2’ ಸಿನಿಮಾದ ಬಳಿಕ ‘ಶಿವಾಜಿ’ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಈ ಸಿನಿಮಾ 2027ರ ಜನವರಿ 21ಕ್ಕೆ ಬಿಡುಗಡೆ ಆಗಲಿದೆ. ರಿಷಬ್ ಶೆಟ್ಟಿಯವರು ಶಿವಾಜಿ ಕುರಿತಾದ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೆಲ್ಲ ಸೊಪ್ಪು ಹಾಕದ ರಿಷಬ್ ಶೆಟ್ಟಿ, ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಮೇಲೆ ನೂರು ಕೋಟಿಗೂ ಹೆಚ್ಚು ಬಜೆಟ್ ಹಾಕಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೆ ಶಿವಾಜಿಯ ಪುತ್ರ ಸಾಂಬಾಜಿಯ ಕುರಿತಾದ ಕತೆಯನ್ನು ‘ಛಾವಾ’ ಹೆಸರಲ್ಲಿ ಸಿನಿಮಾ ಮಾಡಲಾಗಿದ್ದು, ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ‘ಛಾವಾ’ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಶಿವಾಜಿ ಸಿನಿಮಾದ ಮೇಲೆ ನಿರೀಕ್ಷೆಯ ಭಾರ ಹೆಚ್ಚಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ