AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್

ಖ್ಯಾತ ನಟ ರಿಷಬ್ ಶೆಟ್ಟಿ ಅವರು ಅಭಿನಯಿಸುತ್ತಿರುವ ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾವನ್ನು ಎರಡು ಭಾಗದಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಹೊಸ ಪ್ಲಾನ್ ಪ್ರಕಾರ, ಮೊದಲ ಭಾಗ 2028ರಲ್ಲಿ ತೆರೆಕಾಣಲಿದೆ. ಎರಡನೇ ಭಾಗ 2029ರಲ್ಲಿ ಬಿಡುಗಡೆಯಾಗಲಿದೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್
Rishab Shetty
ಮದನ್​ ಕುಮಾರ್​
|

Updated on: Jun 18, 2026 | 4:31 PM

Share

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ ತೆರೆಗೆ ಬರಲು ಸಿದ್ಧವಾಗುತ್ತಿದೆ.

‘ವೆರೈಟಿ ಇಂಡಿಯಾ’ ವರದಿಯ ಪ್ರಕಾರ, ಮೊದಲು ಒಂದೇ ಭಾಗದಲ್ಲಿ ತೆರೆಗೆ ಬರಬೇಕಿದ್ದ ಈ ಐತಿಹಾಸಿಕ ಸಿನಿಮಾವನ್ನು ಈಗ ದೊಡ್ಡ ಮಟ್ಟದಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದ ಬಜೆಟ್ ಬರೋಬ್ಬರಿ 500 ಕೋಟಿ ರೂಪಾಯಿ ದಾಟಲಿದ್ದು, ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಐತಿಹಾಸಿಕ ಚಿತ್ರಗಳಲ್ಲಿ ಒಂದಾಗಿ ಇದು ಮೂಡಿಬರಲಿದೆ.

ಸಂದೀಪ್ ಸಿಂಗ್ ನಿರ್ದೇಶನದ ಈ ಸಿನಿಮಾವನ್ನು ಕೇವಲ ಮೂರು ಗಂಟೆಗಳ ಒಂದೇ ಚಿತ್ರವಾಗಿ ಕಟ್ಟಿ ಕೊಡುವುದು ಕಷ್ಟ ಎಂದು ನಿರ್ಮಾಪಕರು ಭಾವಿಸಿದ್ದಾರೆ. ಶಿವಾಜಿ ಮಹಾರಾಜ್ ಅವರ ನಾಯಕತ್ವ, ರಾಜತಾಂತ್ರಿಕ ನಡೆ ಮತ್ತು ಅವರ ಸಾಮ್ರಾಜ್ಯದ ಇತಿಹಾಸವನ್ನು ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಿಸಲು ಎರಡು ಭಾಗಗಳಾಗಿ ಮಾಡಲು ತೀರ್ಮಾನಿಸಲಾಗಿದೆ.

ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನದ ಪ್ರಮುಖ ಘಟನೆಗಳು ನಡೆದ ಮಹಾರಾಷ್ಟ್ರದ ನೈಜ ತಾಣಗಳಲ್ಲೇ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ರೂಪಿಸಿದೆ. ಬಾಲಿವುಡ್‌ನ ಖ್ಯಾತ ನಟ ಅರ್ಜುನ್ ರಾಂಪಾಲ್ ಈ ಚಿತ್ರದಲ್ಲಿ ಪ್ರಮುಖ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೆಫಾಲಿ ಶಾ ಅವರು ರಾಜಮಾತೆ ಜೀಜಾಬಾಯಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪ್ರೀತಮ್ ಅವರ ಸಂಗೀತ ಹಾಗೂ ರವಿವರ್ಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಇದನ್ನೂ ಓದಿ: ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ

ಸದ್ಯಕ್ಕೆ ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದಲ್ಲಿ ಹನುಮಂತನ ಪಾತ್ರವನ್ನು ಮಾಡುತ್ತಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದ ಕೆಲಸ ಮುಗಿದ ನಂತರವೇ ರಿಷಬ್ ಅವರು ‘ಛತ್ರಪತಿ ಶಿವಾಜಿ ಮಹಾರಾಜ್’ ಸೆಟ್‌ಗೆ ಬರಲಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ದೊಡ್ಡ ಕಥೆಗಳನ್ನು ಎರಡು ಭಾಗಗಳಲ್ಲಿ ಹೇಳುವ ಟ್ರೆಂಡ್ ಹೆಚ್ಚಾಗಿದ್ದು, ಈಗ ಅದೇ ಹಾದಿಯಲ್ಲಿ ರಿಷಬ್ ಶೆಟ್ಟಿ ಅವರ ಈ ಸಿನಿಮಾ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us