AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಗೆ ಖುಲಾಯಿಸಿದ ಅದೃಷ್ಟ, ‘ಲಗಾನ್’ ನಿರ್ದೇಶಕನ ಸಿನಿಮಾದಲ್ಲಿ ನಾಯಕ?

Kantara: 'ಕಾಂತಾರ' ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಅವರ ಅದೃಷ್ಟ ಖುಲಾಯಿಸಿದೆ. ಬಾಲಿವುಡ್​ನ ಬಹುದೊಡ್ಡ ನಿರ್ದೇಶಕರೊಬ್ಬರು, ರಿಷಬ್​ರನ್ನು ತಮ್ಮ ಸಿನಿಮಾಕ್ಕೆ ಆಯ್ಕೆ ಮಾಡಿದ್ದಾರೆ. 'ಕಾಂತಾರ 2' ಸಿನಿಮಾದ ಬಳಿಕ ರಿಷಬ್​ರ ಹಿಂದಿ ಸಿನಿಮಾ ಆರಂಭವಾಗಲಿದೆ.

ರಿಷಬ್ ಶೆಟ್ಟಿಗೆ ಖುಲಾಯಿಸಿದ ಅದೃಷ್ಟ, 'ಲಗಾನ್' ನಿರ್ದೇಶಕನ ಸಿನಿಮಾದಲ್ಲಿ ನಾಯಕ?
ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Sep 03, 2023 | 10:13 PM

Share

ಒಂದು ಸಿನಿಮಾ ಸಾಕು ಅದೃಷ್ಟ ಖುಲಾಯಿಸಲು. ರಿಷಬ್ ಶೆಟ್ಟಿ (Rishab Shetty) ಪಾಲಿಗೆ ಆ ಒಂದು ಸಿನಿಮಾ ‘ಕಾಂತಾರ’. ನಾಯಕನಾಗಿ ನಟಿಸಿ, ನಿರ್ದೇಶಕ ಮಾಡಿದ್ದ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಕರ್ನಾಕಟದಲ್ಲಷ್ಟೆ ಪರಿಚಿತವಾಗಿದ್ದ ರಿಷಬ್ ರ ಪ್ರತಿಭೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿದೆ. ರಾಷ್ಟ್ರಮಟ್ಟದಲ್ಲಿ ಗೌರವ ಆದರಗಳನ್ನು ಕೊಡಿಸಿದೆ. ಹಲವು ಹೊಸ ಅವಕಾಶಗಳನ್ನು ಸಹ ತಂದು ಕೊಡುತ್ತಿದೆ. ‘ಕಾಂತಾರ’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ (Pan India) ಸ್ಟಾರ್ ಆಗಿರುವ ರಿಷಬ್, ಈಗ ಬಾಲಿವುಡ್​ನ ಬಹು ಜನಪ್ರಿಯ ನಿರ್ದೇಶಕರ ಸಿನಿಮಾದಲ್ಲಿ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಆಸ್ಕರ್​ಗೆ ನಾಮಿನೇಟ್ ಆಗಿದ್ದ ಭಾರತದ ಮೂರು ಸಿನಿಮಾಗಳಲ್ಲಿ ಒಂದಾದ ‘ಲಗಾನ್’ ಅನ್ನು ನಿರ್ದೇಶನ ಮಾಡಿರುವ ಅಶುತೋಶ್ ಗೋವರಿಕರ್ ಅವರ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಕುರಿತಾಗಿ ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆಯೂ ನಡೆದಿದ್ದು, ‘ಕಾಂತಾರ 2’ ಸಿನಿಮಾದ ಬಳಿಕ ರಿಷಬ್​ ಹಾಗೂ ಅಶುತೋಷ್​ರ ಸಿನಿಮಾ ಪ್ರಾರಂಭವಾಗಲಿದೆ.

ಅಶುತೋಷ್ ಗೋವರಿಕರ್, ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಕತೆ ರೆಡಿ ಮಾಡಿಕೊಂಡಿದ್ದಾರೆ. ಸಿನಿಮಾದ ಕತೆಯು ಧಾರ್ಮಿಕ ಆಚರಣೆ ವಿಚಾರಗಳನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಿಷಬ್ ಶೆಟ್ಟಿಯನ್ನು ಈ ಸಿನಿಮಾಕ್ಕೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸಿನಿಮಾದಲ್ಲಿ ಇನ್ನೂ ಕೆಲವು ಪ್ರಮುಖ ನಟರು ಇರಲಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನಟಿಯನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಇದನ್ನೂ ಓದಿ:ಗೆಳೆಯನ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ

‘ಲಗಾನ್’ ಸಿನಿಮಾ ಮಾತ್ರವೇ ಅಲ್ಲದೆ ಹೃತಿಕ್ ರೋಷನ್-ಐಶ್ವರ್ಯಾ ರೈ ನಟಿಸಿರುವ ಐತಿಹಾಸಿಕ ಸಿನಿಮಾ ‘ಜೋಧಾ ಅಕ್ಬರ್’, ಶಾರುಖ್ ಖಾನ್ ನಟನೆಯ ‘ಸ್ವದೇಸ್’ ಸಿನಿಮಾ. ಹೃತಿಕ್ ನಟನೆಯ ‘ಮೊಹಂಜೊದಾರೋ’, ‘ಪಾಣಿಪತ್’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅಶುತೋಷ್ ಗೋವರಿಕರ್, ಭಾರತದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ಅಶುತೋಷ್ ಅವರ ಸಿನಿಮಾಗಳಲ್ಲಿ ನಟಿಸಲು ಬಾಲಿವುಡ್​ನ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ಅದರಲ್ಲಿ ರಿಷಬ್​ಗೆ ಆ ಅವಕಾಶ ಲಭಿಸಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಸಿನಿಮಾದ ಕತೆ ಫೈನಲ್ ಆಗಿದ್ದು, ಪಾತ್ರಗಳ ಆಯ್ಕೆ, ಲೊಕೇಶನ್ ಇನ್ನಿತರೆಗಳು ಚಾಲ್ತಿಯಲ್ಲಿದೆ. ‘ಕಾಂತಾರ 2’ ಸಿನಿಮಾವನ್ನು ಭಾರಿ ಬಜೆಟ್​ನಲ್ಲಿ ಚಿತ್ರೀಕರಿಸಲಾಗುತ್ತದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ವಿವಿಧ ಭಾಷೆಯ ದೊಡ್ಡ ನಟರು ಸಹ ನಟಿಸಲಿದ್ದಾರೆ. ಶೀಘ್ರವೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು