AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಚಿತವಾಯ್ತು ಸುದ್ದಿ, ‘ಲಗಾನ್’ ನಿರ್ದೇಶಕನ ಸಿನಿಮಾದಲ್ಲಿ ರಿಷಬ್ ಶೆಟ್ಟಿ

Rishab Shetty: ‘ಕಾಂತಾರ’ ಸಿನಿಮಾದ ಬಳಿಕ ರಿಷಬ್​ರ ವೃತ್ತಿ ಜೀವನದ ದಿಕ್ಕೇ ಬದಲಾಗಿದೆ. ಬಾಲಿವುಡ್​ನ ಬಡಾ ನಿರ್ದೇಶಕರ ಸಿನಿಮಾದಲ್ಲಿ ನಟಿಸಲಿದ್ದಾರೆ ರಿಷಬ್.

ಖಚಿತವಾಯ್ತು ಸುದ್ದಿ, ‘ಲಗಾನ್’ ನಿರ್ದೇಶಕನ ಸಿನಿಮಾದಲ್ಲಿ ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on:Jan 12, 2024 | 8:20 PM

Share

ಕಾಂತಾರ’ (Kantara) ಸಿನಿಮಾ ರಿಷಬ್ ಶೆಟ್ಟಿಯ ಜೀವನವನ್ನು ಬದಲಾಯಿಸಿಬಿಟ್ಟಿದೆ. ರಿಷಬ್ ತಮ್ಮ ಬದುಕನ್ನು ಕಾಂತಾರಕ್ಕೆ ಮುಂಚೆ ಕಾಂತಾರಕ್ಕೆ ನಂತರ ಎಂದು ಎರಡು ಭಾಗಗಳಾಗಿ ವಿಂಗಡಿಸಬಹುದಾದು ಅಷ್ಟು ದೊಡ್ಡ ಪರಿಣಾಮವನ್ನು ‘ಕಾಂತಾರ’ ಸಿನಿಮಾದ ಯಶಸ್ಸು ರಿಷಬ್ ವೃತ್ತಿ ಬದುಕಿನ ಮೇಲೆ ಬೀರಿದೆ. ‘ಕಾಂತಾರ’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿರುವ ರಿಷಬ್​ಗೆ ಈಗ ಬಾಲಿವುಡ್​ನ ದೊಡ್ಡ ನಿರ್ದೇಶಕರ ಸಿನಿಮಾದಲ್ಲಿ ನಟಿಸುವ ಆಫರ್ ಅರಸಿ ಬಂದಿದೆ.

ಭಾರತದ ಸಿನಿಮಾ ಇತಿಹಾಸದ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾಗಿರುವ ‘ಲಗಾನ್’ ಸಿನಿಮಾವನ್ನು ನಿರ್ದೇಶನ ಮಾಡಿರುವ ಅಶುತೋಷ್ ಗೋವರೀಕರ್ ಅವರ ಹೊಸ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಹೀಗೊಂದು ಸುದ್ದಿ ಕಳೆದ ಕೆಲ ತಿಂಗಳುಗಳಿಂದ ಹರಿದಾಡುತ್ತಿತ್ತು. ಆದರೆ ಇದೀಗ ಸುದ್ದಿ ಖಚಿತವಾಗಿದೆ. ರಿಷಬ್ ಶೆಟ್ಟಿ ಇಂದು ಬಹಿರಂಗವಾಗಿ ಅಶುತೋಷ್ ಗೋವರಿಕರ್ ಜೊತೆಗೆ ಮುಂಬೈನ ಅವರ ಕಚೇರಿಯ ಮುಂದೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸ್ಪಷ್ಟ ಸುಳಿವು ನೀಡಿದ್ದಾರೆ.

ಆಶುತೋಷ್ ಗೋವರೀಕರ್ ಹಾಗೂ ರಿಷಬ್ ಶೆಟ್ಟಿ ಕಳೆದ ಕೆಲವು ತಿಂಗಳುಗಳಿಂದ ಭೇಟಿ ಆಗುತ್ತಲೇ ಇದ್ದರು. ಸಿನಿಮಾ ಬಗ್ಗೆ ಇಬ್ಬರೂ ಸಹ ಚರ್ಚೆ ನಡೆಸುತ್ತಿದ್ದರು. ಇದೀಗ ಎಲ್ಲವೂ ಫೈನಲ್ ಆಗಿದ್ದು, ಸಿನಿಮಾದ ಘೋಷಣೆಯೊಂದೆ ಬಾಕಿ ಉಳಿದಿದೆ. ಅದೇ ಕಾರಣಕ್ಕೆ ಇದೀಗ, ರಿಷಬ್ ಶೆಟ್ಟಿ ಹಾಗೂ ಆಶುತೋಷ್ ಗೋವರೀಕರ್ ಅವರು ಮುಂಬೈನಲ್ಲಿ ಒಟ್ಟಿಗೆ ಪಾಪರಾಟ್ಜಿಗಳ ಮುಂದೆ ಕಾಣಿಸಿಕೊಂಡಿದ್ದು, ಒಟ್ಟಿಗೆ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದ ಬಗ್ಗೆ ನಿರ್ಲಕ್ಷ್ಯ; ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ರಿಷಬ್ ಶೆಟ್ಟಿ ಅಸಮಾಧಾನ

‘ಬಾಲಿವುಡ್​ ಕಲ್ಚರ್’ ಸಿನಿಮಾಗಳಿಗಿಂತಲೂ ಬಹಳ ಭಿನ್ನವಾಗಿ, ನೆಲದ ಕತೆಗಳನ್ನು ಸಿನಿಮಾ ಮಾಡುವ ನಿರ್ದೇಶಕ ಆಶುತೋಷ್ ಗೋವರೀಕರ್, ಭಾರತದ ಪ್ರದೇಶವೊಂದರ ಸಂಸ್ಕೃತಿಗೆ ಸಂಬಂಧಿಸಿದ ಕತೆಯೊಂದನ್ನು ತಯಾರು ಮಾಡಿಕೊಟ್ಟುಕೊಂಡು ನಟರಿಗಾಗಿ ಹುಡುಕಾಟ ನಡೆಸಿದ್ದರಂತೆ. ‘ಕಾಂತಾರ’ ಸಿನಿಮಾನಲ್ಲಿ ರಿಷಬ್ ಶೆಟ್ಟಿಯವರ ನಟನೆ ನೋಡಿ ಮೆಚ್ಚಿ, ತಮ್ಮ ಸಿನಿಮಾದಲ್ಲಿ ನಟಿಸುವಂತೆ ರಿಷಬ್​ರನ್ನು ಕೇಳಿದ್ದಾರೆ. ಅಂತೆಯೇ ಕೆಲವು ಚರ್ಚೆಗಳ ಬಳಿಕ ರಿಷಬ್, ಅಶುತೋಷ್​ರ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಸಿನಿಮಾದ ಅಧಿಕೃತ ಘೋಷಣೆ ಆಗಲಿದ್ದು, ಸಿನಿಮಾದ ಚಿತ್ರೀಕರಣ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ. ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್​ನ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣ ಮುಗಿಸಿದ ಬಳಿಕವಷ್ಟೆ ಅಶುತೋಷ್​ರ ಸಿನಿಮಾದಲ್ಲಿ ನಟಿಸಲು ಆರಂಭಿಸಲಿದ್ದಾರೆ.

ಅಶುತೋಷ್ ಗೋವರೀಕರ್ ಅವರು ‘ಲಗಾನ್’, ‘ಸ್ವದೇಸ್’, ‘ಜೋಧಾ ಅಖ್ಬರ್’ ಅಂಥಹಾ ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ ಅಶುತೋಷ್ ನಿರ್ದೇಶನ ಮಾಡಿರುವ ಕಳೆದ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ವಿಫಲವಾಗಿವೆ. ಈಗ ರಿಷಬ್​ರಿಂದಾಗಿ ಆದರೂ ಅಶುತೋಷ್​ರ ಅದೃಷ್ಟ ಬದಲಾಗುತ್ತದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Fri, 12 January 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!