AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಸಿನಿಮಾದಲ್ಲಿನ ಆ ಒಂದು ವಿಚಾರ ರಿಷಿ ಕಪೂರ್​ಗೆ ಇಷ್ಟವಾಗಲೇ ಇಲ್ಲ

ಕಾಶ್ಮೀರದಲ್ಲಿ ‘ರಾಕ್​ಸ್ಟಾರ್​’ ಸಾಂಗ್​ ಒಂದನ್ನು ಶೂಟ್​ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲಿ ಹಾಡನ್ನು ಹಾಕಲಾಯಿತು. ಹಾಡುಗಳು ಎಲ್ಲರಿಗೂ ಹಾಡು ಇಷ್ಟವಾಗಿತ್ತು. ಇಮ್ತಿಯಾಜ್​ ಕೂಡ ಹಾಡನ್ನು ಇಷ್ಟಪಟ್ಟಿದ್ದರು.

ರಣಬೀರ್​ ಸಿನಿಮಾದಲ್ಲಿನ ಆ ಒಂದು ವಿಚಾರ ರಿಷಿ ಕಪೂರ್​ಗೆ ಇಷ್ಟವಾಗಲೇ ಇಲ್ಲ
ರಣಬೀರ್​-ರಿಷಿ
TV9 Web
| Edited By: |

Updated on: Nov 12, 2021 | 9:52 PM

Share

ರಣಬೀರ್​ ಕಪೂರ್​ (Rishi Kapoor ) ನಟನೆಯ ‘ರಾಕ್​ಸ್ಟಾರ್​’ ಸಿನಿಮಾದ (Rockstar) ಹಾಡುಗಳು ಸೂಪರ್​ ಹಿಟ್​ ಆಗಿದ್ದವು. ಎ.ಆರ್​. ರೆಹಮಾನ್ (AR Rahman)​ ಸಂಗೀತ ಸಂಯೋಜನೆ ಈ ಚಿತ್ರಕ್ಕಿತ್ತು. ಸಿನಿಮಾದ ಹಾಡುಗಳನ್ನು ಕೇಳಿ ಜನರು ಇಷ್ಟಪಟ್ಟಿದ್ದರು. ಸಿನಿಮಾ ರಿಲೀಸ್​ ಆಗಿ ನವೆಂಬರ್​ 11ಕ್ಕೆ 10 ವರ್ಷ ತುಂಬಿದೆ. ಸೋಶಿಯಲ್​ ಮೀಡಿಯಾದಲ್ಲಿ ಎಲ್ಲರೂ ರಣಬೀರ್​ ಅವರಿಗೆ ಶುಭಾಶಯ ತಿಳಿಸಿದ್ದರು. ಎ.ಆರ್.​ ರೆಹಮಾನ್​, ರಣಬೀರ್​ ಕಪೂರ್​, ಸಿನಿಮಾ ನಿರ್ದೇಶಕ ಇಮ್ತಿಯಾಜ್​ ಅಲಿ ಮತ್ತು ನಟಿ ಸಂಜನಾ ಸಂಘಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಖುಷಿ ದಿನವನ್ನು ನೆನಪಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ, ಈ ಸಿನಿಮಾದ ಹಾಡುಗಳು ರಣಬೀರ್​ ಕಪೂರ್​ ತಂದೆ ರಿಷಿ ಕಪೂರ್​ಗೆ ಕೊಂಚವೂ ಇಷ್ಟವಾಗಿರಲಿಲ್ಲ. ಈ ಮಾತನ್ನು ಸ್ವತಃ ಎ.ಆರ್​. ರೆಹಮಾನ್​​ ಬಾಯ್ಬಿಟ್ಟಿದ್ದಾರೆ.

‘ಕಾಶ್ಮೀರದಲ್ಲಿ ರಾಕ್​ಸ್ಟಾರ್​ ಸಾಂಗ್​ ಒಂದನ್ನು ಶೂಟ್​ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲಿ ಹಾಡನ್ನು ಹಾಕಲಾಯಿತು. ಹಾಡುಗಳು ಎಲ್ಲರಿಗೂ ಹಾಡು ಇಷ್ಟವಾಗಿತ್ತು. ಇಮ್ತಿಯಾಜ್​ ಕೂಡ ಹಾಡನ್ನು ಇಷ್ಟಪಟ್ಟಿದ್ದರು. ಅವರು ಈ ಹಾಡನ್ನು ರಿಷಿ ಕಪೂರ್​ಗೆ ಕೇಳಿಸಿದ್ದರು. ಆದರೆ, ಅವರಿಗೆ ಕೊಂಚವೂ ಇಷ್ಟವಾಗಲಿಲ್ಲ. ಒಂದಲ್ಲ ಇಡೀ ಆಲ್ಬಮ್​ ಅವರ ಮನಸ್ಸಿಗೆ ಹತ್ತಿರವಾಗಲೇ ಇಲ್ಲ ಎಂದಿದ್ದಾರೆ’ ರೆಹ್ಮಾನ್​.

‘ನನಗೆ ಏನು ಅರ್ಥವಾಗುತ್ತಿಲ್ಲ. ನನಗೆ ಈ ಹಾಡುಗಳು ಏನು ಎಂಬುದು ತಿಳಿಯುತ್ತಿಲ್ಲ ಎಂದು ರಿಷಿ ಹೇಳಿದ್ದರು. ಆಗ ನಾನು ಏನು ಕಂಪೋಸ್​ ಮಾಡಬೇಕು ಎಂದುಕೊಂಡಿದ್ದೆನೋ ಅದನ್ನು ಮಾಡಿಲ್ಲ. ಹೊಸದನ್ನು ಮಾಡೋಕೆ ಹೋದಾಗ ಹುಟ್ಟಿದ್ದು ‘ನಾದಾನ್​ ಪರಿಂದೆ..’ ಹಾಡು. ರಿಷಿ ಅವರಿಂದ ಹಾಡು ಉತ್ತಮವಾಗಿದೆ ಎನ್ನುವ ಕಮೆಂಟ್​ ಪಡೆಯಬೇಕಿತ್ತು’ ಎಂದಿದ್ದಾರೆ ರೆಹಮಾನ್​.

‘ರಾಕ್​ಸ್ಟಾರ್’​ ಸಿನಿಮಾ 2011ರಲ್ಲಿ ತೆರೆಗೆ ಬಂದಿತ್ತು. ಕಾಲೇಜ್​ಗೆ ತೆರಳುವ ಸಾಮಾನ್ಯ ವಿದ್ಯಾರ್ಥಿ ಜನಾರ್ಧನ್ (ರಣಬೀರ್​). ಆತನಲ್ಲಿ ಕೋಪ ಹುಟ್ಟಿಕೊಳ್ಳುತ್ತದೆ. ರಾಕ್​ಸ್ಟಾರ್​ ಆಗುತ್ತಾನೆ. ತುಂಬಾನೇ ಖ್ಯಾತಿ ಸಿಗುತ್ತದೆ. ಈ ಸಿನಿಮಾದಲ್ಲಿ ಬರೋಬ್ಬರಿ 14 ಹಾಡುಗಳಿವೆ. ​ ‘ನಾದಾನ್​ ಪರಿಂದೆ..’ ‘ಜೋ ಭಿ ಮೇ.. ’ ‘ಸದಾ ಹಕ್​.. ’ ಮೊದಲಾದ ಹಾಡುಗಳು ಕೇಳುಗರಿಗೆ ಇಷ್ಟವಾದವು.

ಇದನ್ನೂ ಓದಿ: ಪ್ರೀತಿ ಒಪ್ಪಿಕೊಂಡ ಆಲಿಯಾ ಭಟ್​-ರಣಬೀರ್​ ಕಪೂರ್​; ದೀಪಾವಳಿ ಹಬ್ಬದಂದು ಗುಡ್​ ನ್ಯೂಸ್​

ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್