AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಸಿನಿಮಾದಲ್ಲಿನ ಆ ಒಂದು ವಿಚಾರ ರಿಷಿ ಕಪೂರ್​ಗೆ ಇಷ್ಟವಾಗಲೇ ಇಲ್ಲ

ಕಾಶ್ಮೀರದಲ್ಲಿ ‘ರಾಕ್​ಸ್ಟಾರ್​’ ಸಾಂಗ್​ ಒಂದನ್ನು ಶೂಟ್​ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲಿ ಹಾಡನ್ನು ಹಾಕಲಾಯಿತು. ಹಾಡುಗಳು ಎಲ್ಲರಿಗೂ ಹಾಡು ಇಷ್ಟವಾಗಿತ್ತು. ಇಮ್ತಿಯಾಜ್​ ಕೂಡ ಹಾಡನ್ನು ಇಷ್ಟಪಟ್ಟಿದ್ದರು.

ರಣಬೀರ್​ ಸಿನಿಮಾದಲ್ಲಿನ ಆ ಒಂದು ವಿಚಾರ ರಿಷಿ ಕಪೂರ್​ಗೆ ಇಷ್ಟವಾಗಲೇ ಇಲ್ಲ
ರಣಬೀರ್​-ರಿಷಿ
TV9 Web
| Edited By: |

Updated on: Nov 12, 2021 | 9:52 PM

Share

ರಣಬೀರ್​ ಕಪೂರ್​ (Rishi Kapoor ) ನಟನೆಯ ‘ರಾಕ್​ಸ್ಟಾರ್​’ ಸಿನಿಮಾದ (Rockstar) ಹಾಡುಗಳು ಸೂಪರ್​ ಹಿಟ್​ ಆಗಿದ್ದವು. ಎ.ಆರ್​. ರೆಹಮಾನ್ (AR Rahman)​ ಸಂಗೀತ ಸಂಯೋಜನೆ ಈ ಚಿತ್ರಕ್ಕಿತ್ತು. ಸಿನಿಮಾದ ಹಾಡುಗಳನ್ನು ಕೇಳಿ ಜನರು ಇಷ್ಟಪಟ್ಟಿದ್ದರು. ಸಿನಿಮಾ ರಿಲೀಸ್​ ಆಗಿ ನವೆಂಬರ್​ 11ಕ್ಕೆ 10 ವರ್ಷ ತುಂಬಿದೆ. ಸೋಶಿಯಲ್​ ಮೀಡಿಯಾದಲ್ಲಿ ಎಲ್ಲರೂ ರಣಬೀರ್​ ಅವರಿಗೆ ಶುಭಾಶಯ ತಿಳಿಸಿದ್ದರು. ಎ.ಆರ್.​ ರೆಹಮಾನ್​, ರಣಬೀರ್​ ಕಪೂರ್​, ಸಿನಿಮಾ ನಿರ್ದೇಶಕ ಇಮ್ತಿಯಾಜ್​ ಅಲಿ ಮತ್ತು ನಟಿ ಸಂಜನಾ ಸಂಘಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಖುಷಿ ದಿನವನ್ನು ನೆನಪಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ, ಈ ಸಿನಿಮಾದ ಹಾಡುಗಳು ರಣಬೀರ್​ ಕಪೂರ್​ ತಂದೆ ರಿಷಿ ಕಪೂರ್​ಗೆ ಕೊಂಚವೂ ಇಷ್ಟವಾಗಿರಲಿಲ್ಲ. ಈ ಮಾತನ್ನು ಸ್ವತಃ ಎ.ಆರ್​. ರೆಹಮಾನ್​​ ಬಾಯ್ಬಿಟ್ಟಿದ್ದಾರೆ.

‘ಕಾಶ್ಮೀರದಲ್ಲಿ ರಾಕ್​ಸ್ಟಾರ್​ ಸಾಂಗ್​ ಒಂದನ್ನು ಶೂಟ್​ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲಿ ಹಾಡನ್ನು ಹಾಕಲಾಯಿತು. ಹಾಡುಗಳು ಎಲ್ಲರಿಗೂ ಹಾಡು ಇಷ್ಟವಾಗಿತ್ತು. ಇಮ್ತಿಯಾಜ್​ ಕೂಡ ಹಾಡನ್ನು ಇಷ್ಟಪಟ್ಟಿದ್ದರು. ಅವರು ಈ ಹಾಡನ್ನು ರಿಷಿ ಕಪೂರ್​ಗೆ ಕೇಳಿಸಿದ್ದರು. ಆದರೆ, ಅವರಿಗೆ ಕೊಂಚವೂ ಇಷ್ಟವಾಗಲಿಲ್ಲ. ಒಂದಲ್ಲ ಇಡೀ ಆಲ್ಬಮ್​ ಅವರ ಮನಸ್ಸಿಗೆ ಹತ್ತಿರವಾಗಲೇ ಇಲ್ಲ ಎಂದಿದ್ದಾರೆ’ ರೆಹ್ಮಾನ್​.

‘ನನಗೆ ಏನು ಅರ್ಥವಾಗುತ್ತಿಲ್ಲ. ನನಗೆ ಈ ಹಾಡುಗಳು ಏನು ಎಂಬುದು ತಿಳಿಯುತ್ತಿಲ್ಲ ಎಂದು ರಿಷಿ ಹೇಳಿದ್ದರು. ಆಗ ನಾನು ಏನು ಕಂಪೋಸ್​ ಮಾಡಬೇಕು ಎಂದುಕೊಂಡಿದ್ದೆನೋ ಅದನ್ನು ಮಾಡಿಲ್ಲ. ಹೊಸದನ್ನು ಮಾಡೋಕೆ ಹೋದಾಗ ಹುಟ್ಟಿದ್ದು ‘ನಾದಾನ್​ ಪರಿಂದೆ..’ ಹಾಡು. ರಿಷಿ ಅವರಿಂದ ಹಾಡು ಉತ್ತಮವಾಗಿದೆ ಎನ್ನುವ ಕಮೆಂಟ್​ ಪಡೆಯಬೇಕಿತ್ತು’ ಎಂದಿದ್ದಾರೆ ರೆಹಮಾನ್​.

‘ರಾಕ್​ಸ್ಟಾರ್’​ ಸಿನಿಮಾ 2011ರಲ್ಲಿ ತೆರೆಗೆ ಬಂದಿತ್ತು. ಕಾಲೇಜ್​ಗೆ ತೆರಳುವ ಸಾಮಾನ್ಯ ವಿದ್ಯಾರ್ಥಿ ಜನಾರ್ಧನ್ (ರಣಬೀರ್​). ಆತನಲ್ಲಿ ಕೋಪ ಹುಟ್ಟಿಕೊಳ್ಳುತ್ತದೆ. ರಾಕ್​ಸ್ಟಾರ್​ ಆಗುತ್ತಾನೆ. ತುಂಬಾನೇ ಖ್ಯಾತಿ ಸಿಗುತ್ತದೆ. ಈ ಸಿನಿಮಾದಲ್ಲಿ ಬರೋಬ್ಬರಿ 14 ಹಾಡುಗಳಿವೆ. ​ ‘ನಾದಾನ್​ ಪರಿಂದೆ..’ ‘ಜೋ ಭಿ ಮೇ.. ’ ‘ಸದಾ ಹಕ್​.. ’ ಮೊದಲಾದ ಹಾಡುಗಳು ಕೇಳುಗರಿಗೆ ಇಷ್ಟವಾದವು.

ಇದನ್ನೂ ಓದಿ: ಪ್ರೀತಿ ಒಪ್ಪಿಕೊಂಡ ಆಲಿಯಾ ಭಟ್​-ರಣಬೀರ್​ ಕಪೂರ್​; ದೀಪಾವಳಿ ಹಬ್ಬದಂದು ಗುಡ್​ ನ್ಯೂಸ್​

ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?