AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ

ಮೇ 1ರಂದು ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ರಿತೇಶ್ ದೇಶ್​ಮುಖ್ ಅವರು ನಿರ್ದೇಶನ ಮಾಡಿ, ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಟ್ರೇಲರ್ ನೋಡಿದ ಬಳಿಕ ರಿತೇಶ್ ಅವರ ಬಗ್ಗೆ ಪ್ರೇಕ್ಷಕರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ತೆರೆಕಂಡ ನಂತರ ಈ ಟೀಕೆಗಳಿಗೆ ಉತ್ತರ ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.

‘ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ’: ನೆಟ್ಟಿಗರಿಂದ ಟ್ರೋಲ್ ಆದ ನಟ
Raja Shivaji Movie Poster
ಮದನ್​ ಕುಮಾರ್​
|

Updated on: Apr 21, 2026 | 3:09 PM

Share

ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ (Riteish Deshmukh) ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ (Raja Shivaji) ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ರೆಡ್ಡಿಟ್ ಮತ್ತು ಇತರ ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಸಿನಿಪ್ರಿಯರು ರಿತೇಶ್ ಅವರ ನಟನೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ. ‘ಈ ಪಾತ್ರಕ್ಕೆ ರಿತೇಶ್ ಅವರು ಹೊಂದಿಕೆಯಾಗುತ್ತಿಲ್ಲ. ಅವರ ಧ್ವನಿಯಲ್ಲಿ ಆ ಗಾಂಭೀರ್ಯ ಮತ್ತು ಶಕ್ತಿ ಇಲ್ಲ’ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಈ ಚಿತ್ರವು ಅಕ್ಷಯ್ ಕುಮಾರ್ ಅವರ ‘ಪೃಥ್ವಿರಾಜ್ ಚೌಹಾಣ್’ ಚಿತ್ರದಂತೆ ಸೋಲಬಹುದು ಎಂಬ ಆತಂಕವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

‘ರಿತೇಶ್ ದೇಶ್‌ಮುಖ್ ಅವರ ಸಂಭಾಷಣೆ ಮತ್ತು ಹಾವಭಾವಗಳಲ್ಲಿ ಶಿವಾಜಿ ಮಹಾರಾಜರಂತಹ ಮಹಾನ್ ವೀರನ ವ್ಯಕ್ತಿತ್ವ ಕಾಣಿಸುತ್ತಿಲ್ಲ. ಮೇಕಪ್ ಮಾಡಿದರೂ ಅವರು ಆ ಪಾತ್ರಕ್ಕೆ ಜೀವ ತುಂಬಲು ವಿಫಲರಾಗಿದ್ದಾರೆ’ ಎಂಬ ಕಮೆಂಟ್ ಕೂಡ ಬಂದಿದೆ. ಶಿವಾಜಿ ಮಹಾರಾಜರ ಪಾತ್ರಕ್ಕೆ ಶರದ್ ಕೇಳ್ಕರ್ ಅವರಂತಹ ಗಂಭೀರ ಧ್ವನಿಯ ನಟ ಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ದಕ್ಷಿಣ ಭಾರತದ ನಟರಾದ ರಾಮ್ ಚರಣ್ ಅಥವಾ ರಿಷಬ್ ಶೆಟ್ಟಿ ಅವರಂತಹ ನಟರು ಈ ಪಾತ್ರಕ್ಕೆ ಹೆಚ್ಚು ಸೂಕ್ತ ಎಂದು ಹೇಳುತ್ತಿದ್ದಾರೆ.

‘ರಾಜ ಶಿವಾಜಿ’ ಸಿನಿಮಾ ಟ್ರೇಲರ್:

ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಿತೇಶ್ ದೇಶ್‌ಮುಖ್ ಅವರು ಸಾಕಷ್ಟು ಭಾವುಕರಾದರು. ಚಿತ್ರವನ್ನು ತೆರೆಗೆ ತರಲು ತಾವು ಪಟ್ಟ ಶ್ರಮವನ್ನು ನೆನೆದು ಅವರು ವೇದಿಕೆಯ ಮೇಲೆ ಕಣ್ಣೀರಿಟ್ಟರು. ಈ ಕಷ್ಟದ ಸಮಯದಲ್ಲಿ ತಮಗೆ ಬೆನ್ನೆಲುಬಾಗಿ ನಿಂತ ಪತ್ನಿ ಜೆನಿಲಿಯಾ ಮತ್ತು ನಟ ಅಭಿಷೇಕ್ ಬಚ್ಚನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಇದನ್ನೂ ಓದಿ: ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ನಾಗರಾಜ್ ವಾರ್ನಿಂಗ್

‘ರಾಜ ಶಿವಾಜಿ’ ಸಿನಿಮಾಗೆ ರಿತೇಶ್ ದೇಶ್‌ಮುಖ್ ಅವರೇ ನಿರ್ದೇಶನ ಮಾಡಿದ್ದಾರೆ. ಅಭಿಷೇಕ್ ಬಚ್ಚನ್, ಸಂಜಯ್ ದತ್, ಜೆನಿಲಿಯಾ ದೇಶ್‌ಮುಖ್, ಮಹೇಶ್ ಮಾಂಜ್ರೇಕರ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ರಿತೇಶ್ ಅವರ 10 ವರ್ಷದ ಪುತ್ರ ರಾಹಿಲ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ