AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಯ ಎದುರು ಮತ್ತೊಂದು ಶಿವಾಜಿ ಸಿನಿಮಾ, ಗೆಲುವು ಯಾರಿಗೆ?

Raja Shivaji: ಬಾಲಿವುಡ್​ನಲ್ಲಿ ಈಗಾಗಲೇ ಒಂದು ಶಿವಾಜಿ ಜೀವನ ಆಧರಿಸಿದ ಸಿನಿಮಾ ಘೋಷಿಸಲಾಗಿದ್ದು ಸಿನಿಮಾನಲ್ಲಿ ಕನ್ನಡದ ನಟ ರಿಷಬ್ ಶೆಟ್ಟಿ ಶಿವಾಜಿ ಪಾತ್ರದಲ್ಲಿ ನಟಿಸಲಿದ್ದಾರೆ. ಇದೀಗ ಶಿವಾಜಿ ಬಗೆಗಿನ ಮತ್ತೊಂದು ಸಿನಿಮಾ ಬಾಲಿವುಡ್​ನಿಂದಲೇ ಘೋಷಣೆ ಆಗಿದೆ. ಖ್ಯಾತ ನಟ ರಿತೇಶ್ ದೇಶ್​ಮುಖ್ ಈ ಸಿನಿಮಾ ನಿರ್ದೇಶಿಸಿ ನಟಿಸಲಿದ್ದಾರೆ. ಹಲವು ಸ್ಟಾರ್ ನಟರು ಈ ಸಿನಿಮಾನಲ್ಲಿದ್ದಾರೆ.

ರಿಷಬ್ ಶೆಟ್ಟಿಯ ಎದುರು ಮತ್ತೊಂದು ಶಿವಾಜಿ ಸಿನಿಮಾ, ಗೆಲುವು ಯಾರಿಗೆ?
Raaja Shivaji
ಮಂಜುನಾಥ ಸಿ.
|

Updated on: May 23, 2025 | 5:11 PM

Share

ರಿಷಬ್ ಶೆಟ್ಟಿ (Rishab Shetty) ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದೂ ಛತ್ರಪತಿ ಶಿವಾಜಿ ಪಾತ್ರದಲ್ಲಿ. ಈ ಬಗ್ಗೆ ಕರ್ನಾಟಕದಲ್ಲಿ ಈಗಾಗಲೆ ಚರ್ಚೆಗಳು ಪ್ರಾರಂಭವಾಗಿವೆ. ರಿಷಬ್ ಶೆಟ್ಟಿ, ಮರಾಠ ರಾಜ ಶಿವಾಜಿಯ ಪಾತ್ರದಲ್ಲಿ ನಟಿಸಬಾರದು ಎಂದು ಕೆಲ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಸಿನಿಮಾದ ಪೋಸ್ಟರ್ ಮಾತ್ರವೇ ಪ್ರಸ್ತುತ ಬಿಡುಗಡೆ ಆಗಿದ್ದು, ಸಿನಿಮಾದ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲ. ಅಷ್ಟರಲ್ಲಾಗಲೇ ಬಾಲಿವುಡ್​ನಲ್ಲಿ ಮತ್ತೊಂದು ಶಿವಾಜಿ ಸಿನಿಮಾ ಸೆಟ್ಟೇರಿದೆ.

ರಿಷಬ್ ಶೆಟ್ಟಿ ನಟಿಸುತ್ತಿರುವ ಸಿನಿಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮತ್ತು ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಶಿವಾಜಿ ಜೀವನ ಆಧರಿಸಿದ ಮತ್ತೊಂದು ಬಾಲಿವುಡ್ ಸಿನಿಮಾ ಘೋಷಣೆಯಾಗಿದೆ. ಸಿನಿಮಾ ಘೋಷಣೆ ಮಾಡಿರುವುದು ನಟ ರಿತೇಶ್​ ದೇಶ್​ಮುಖ್, ಆದರೆ ಶಿವಾಜಿ ಪಾತ್ರದಲ್ಲಿ ನಟಿಸಲಿರುವುದು ಖ್ಯಾತ ಬಾಲಿವುಡ್ ನಟ ಅಭಿಷೇಕ್ ಬಚ್ಚನ್.

ರಾಜಕಾರಣಿ ಕುಟುಂಬದವರೂ ಆಗಿರುವ ರಿತೇಶ್ ದೇಶ್​ಮುಖ್ (ಮಾಜಿ ಸಿಎಂ ವಿಲಾಸ್​ ರಾವ್ ದೇಶ್​ಮುಖ್ ಪುತ್ರ) ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದಲೂ ನಟರಾಗಿ ಗುರುತಿಸಿಕೊಂಡಿದ್ದು, ಇದೀಗ ಮೊದಲ ಬಾರಿಗೆ ಶಿವಾಜಿ ಸಿನಿಮಾ ಮೂಲಕ ನಿರ್ದೇಶಕನಾಗಿ ಪರಿಚಯಗೊಳ್ಳುತ್ತಿದ್ದಾರೆ. ಶಿವಾಜಿ ಜೀವನ ಕುರಿತ ಸಿನಿಮಾವನ್ನು ರಿತೇಶ್​ ದೇಶ್​ಮುಕ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ರಿತೇಶ್ ಅವರ ಪತ್ನಿ ಜೆನಿಲಿಯಾ ದೇಶ್​ಮುಖ್ ಮತ್ತು ಖ್ಯಾತ ನಿರ್ಮಾಪಕಿ ಮತ್ತು ಉದ್ಯಮಿ ಜ್ಯೋತಿ ದೇಶ್​ಪಾಂಡೆ.

ಇದನ್ನೂ ಓದಿ:ಮತ್ತೊಮ್ಮೆ ತೆಲುಗು ಸಿನಿಮಾ ಆಯ್ದುಕೊಂಡ ರಿತೇಶ್ ದೇಶ್​ಮುಖ್

ಸಿನಿಮಾನಲ್ಲಿ ರಿತೇಶ್ ದೇಶ್​ಮುಖ್ ಮತ್ತು ಅಭಿಷೇಕ್ ಬಚ್ಚನ್ ಇಬ್ಬರೂ ಸಹ ಛತ್ರಪತಿ ಶಿವಾಜಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಿತೇಶ್​ ದೇಶ್​ಮುಖ್ ಯುವ ಶಿವಾಜಿಯ ಪಾತ್ರದಲ್ಲಿ ನಟಿಸಿದರೆ ಅಭಿಷೇಕ್ ಬಚ್ಚನ್ ಹಿರಿಯ ಶಿವಾಜಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜಯ್ ದತ್ ಮೊಘಲ್ ಔರಂಗಾಜೇಬನ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ರಿತೇಶ್, ಅಭಿಷೇಕ್, ಸಂಜಯ್ ದತ್ ಮಾತ್ರವಲ್ಲದೆ ಸಿನಿಮಾನಲ್ಲಿ ಭಾಗ್ಯಶ್ರೀ ಬೊರ್ಸೆ, ಸಚಿನ್ ಖೇಡ್ಕರ್, ಮಹೇಶ್ ಮಂಜ್ರೇಕರ್, ಫರ್ದೀನ್ ಖಾನ್, ಅಮೋಲ್ ಗೊಪ್ತೆ, ಜೆನಿಲಿಯಾ, ಜಿತೇಂದ್ರ ಜೋಶಿ ಅವರುಗಳು ನಟಿಸಲಿದ್ದಾರೆ. ಸಿನಿಮಾಕ್ಕೆ ಸಂತೋಷ್ ಶಿವನ್ ಸಿನಿಮಾಟಾಗ್ರಫಿ ಮಾಡಲಿದ್ದಾರೆ. ಅಜಯ್ ಅತುಲ್ ಅವರು ಸಂಗೀತ ನೀಡಲಿದ್ದಾರೆ. ಸಿನಿಮಾವು ಮುಂದಿನ ವರ್ಷ ಮಹಾರಾಷ್ಟ್ರ ದಿನದಂದು ಅಂದರೆ ಮೇ 1 ಕ್ಕೆ ಆರು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ‘ರಾಜಾ ಶಿವಾಜಿ’ ಎಂದು ಹೆಸರಿಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು