AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ತೆಲುಗು ಸಿನಿಮಾ ಆಯ್ದುಕೊಂಡ ರಿತೇಶ್ ದೇಶ್​ಮುಖ್

Riteish Deshmukh: ಬಾಲಿವುಡ್ ನಟ ರಿತೇಶ್ ದೇಶ್​ಮುಖ್ ಮತ್ತೊಮ್ಮೆ ತೆಲುಗು ಚಿತ್ರರಂಗದ ಮಾಲು ಎತ್ತಿಕೊಳ್ಳುವ ಯೋಜನೆಯಲ್ಲಿದ್ದಾರೆ!

ಮತ್ತೊಮ್ಮೆ ತೆಲುಗು ಸಿನಿಮಾ ಆಯ್ದುಕೊಂಡ ರಿತೇಶ್ ದೇಶ್​ಮುಖ್
ರಿತೇಶ್ ದೇಶ್​ಮುಖ್
ಮಂಜುನಾಥ ಸಿ.
|

Updated on: Feb 24, 2024 | 7:53 PM

Share

ಬಾಲಿವುಡ್ ನಟ ರಿತೇಶ್ ದೇಶ್​ಮುಖ್ (Ritesh Deshmukh) ಆಗೊಮ್ಮೆ ಈಗೊಮ್ಮೆ ಮರಾಠಿ ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ. ಈ ವರೆಗೆ ಕೇವಲ ಎರಡು ಮರಾಠಿ ಸಿನಿಮಾಗಳಲ್ಲಿ ಮಾತ್ರವೇ ಪೂರ್ಣ ಪ್ರಮಾಣದಲ್ಲಿ ರಿತೇಶ್ ದೇಶ್​ಮುಖ್ ನಟಿಸಿದ್ದಾರೆ. ಒಂದರಲ್ಲಿ ವಿಲನ್ ಆಗಿ ಮತ್ತೊಂದರಲ್ಲಿ ಹೀರೋ ಆಗಿ. ಎರಡೂ ಸಿನಿಮಾಗಳೂ ಸೂಪರ್ ಹಿಟ್ ಆಗಿವೆ. ಅದರಲ್ಲಿಯೂ ಹೀರೋ ಆಗಿ ನಟಿಸಿದ್ದ ‘ವೇದ್’ ಸಿನಿಮಾ ಅಂತೂ ಮರಾಠಿ ಬಾಕ್ಸ್ ಆಫೀಸ್​ನಲ್ಲಿ ದಾಖಲೆಯನ್ನೇ ಮಾಡಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಿತೇಶ್ ದೇಶ್​ಮುಖ್ ಪತ್ನಿ ಜೆನಿಲಿಯಾ ನಟಿಸಿದ್ದಾರೆ.

ಮರಾಠಿ ಚಿತ್ರರಂಗದಲ್ಲಿ ದಾಖಲೆಗಳನ್ನು ಬರೆದ ‘ವೇದ್’ ಸಿನಿಮಾ ತೆಲುಗಿನ ‘ಮಜಿಲಿ’ ಸಿನಿಮಾದ ರೀಮೇಕ್ ಆಗಿತ್ತು. ಮೂಲ ಸಿನಿಮಾದಲ್ಲಿಯೂ ನಿಜ ಜೀವನದಲ್ಲಿ ಆಗ ಪತಿ-ಪತ್ನಿಯರಾಗಿದ್ದ ಸಮಂತಾ ಹಾಗೂ ನಾಗಚೈತನ್ಯ ನಟಿಸಿದ್ದರು. ಆ ಸಿನಿಮಾದ ಮರಾಠಿ ರೀಮೇಕ್​ನಲ್ಲಿಯೂ ಸಹ ನಿಜ ಜೀವನದ ಪತಿ-ಪತ್ನಿಯರಾದ ರಿತೇಶ್ ಹಾಗೂ ಜೆನಿಲಿಯಾ ನಟಿಸಿದ್ದರು. ಮತ್ತೊಂದು ವಿಶೇಷವೆಂದರೆ ‘ವೇದ್’ ಸಿನಿಮಾಕ್ಕೆ ಚಿತ್ರಕತೆ, ಸಂಭಾಷಣೆ, ನಿರ್ದೇಶನ, ನಿರ್ಮಾಣ ಮಾಡಿದ್ದು ಸಹ ರಿತೇಶ್ ದೇಶ್​ಮುಖ್ ಅವರೇ.

ಇದನ್ನೂ ಓದಿ:ನಟ ಕಿಚ್ಚ ಸುದೀಪ್ ಮನೆಯಲ್ಲಿ ಭೋಜನ ಸವಿದ ಬಾಲಿವುಡ್ ಕ್ಯೂಟ್ ಕಪಲ್

ಇದೀಗ ಮತ್ತೊಂದು ಸಿನಿಮಾವನ್ನು ಮರಾಠಿಯಲ್ಲಿ ಮಾಡಲು ರಿತೇಶ್ ದೇಶ್​ಮುಖ್ ಮುಂದಾಗಿದ್ದಾರೆ. ಈ ಬಾರಿಯೂ ಸಹ ತೆಲುಗು ಚಿತ್ರರಂಗದಿಂದಲೇ ಸಿನಿಮಾ ಒಂದನ್ನು ರೀಮೇಕ್​ಗಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ಸುದ್ದಿಗಳ ಪ್ರಕಾರ, ನಾನಿ ನಟಿಸಿರುವ ‘ಹಾಯ್ ನಾನ್ನ’ ಸಿನಿಮಾವನ್ನು ರಿತೇಶ್ ದೇಶ್​ಮುಖ್ ಮರಾಠಿಗೆ ರೀಮೇಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ರಿತೇಶ್ ದೇಶ್​ಮುಖ್​ಗೆ ಇತ್ತೀಚೆಗೆ ಬಾಲಿವುಡ್​ನಲ್ಲಿ ಅವಕಾಶಗಳು ತುಸು ಕಡಿಮೆಯಾಗಿವೆ. ಪೋಷಕ ಪಾತ್ರ, ಯುವ ನಾಯಕ ನಟರ ಅಣ್ಣನ ಪಾತ್ರ, ಕಡಿಮೆ ದರ್ಜೆಯ ಹಾಸ್ಯ ಪಾತ್ರಗಳು ಇಂಥಹುವೇ ಬರುತ್ತಿವೆ ಹಾಗಾಗಿ ರಿತೇಶ್ ತಮ್ಮ ಗಮನವನ್ನು ಮರಾಠಿ ಚಿತ್ರರಂಗದ ಕಡೆಗೆ ಸಂಪೂರ್ಣವಾಗಿ ತಿರುಗಿಸುವ ಯೋಚನೆಯಲ್ಲಿದ್ದಾರೆ. ಇದರ ಭಾಗವಾಗಿಯೇ ಈಗ ಮತ್ತೊಂದು ತೆಲುಗು ಸಿನಿಮಾವನ್ನು ಮರಾಠಿಗೆ ಕೊಂಡೊಯ್ಯುವ ಪ್ರಯಾಸದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ