AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಲಿಫ್ಟ್​ನಲ್ಲಿ ರಿತೇಶ್​ ದೇಶ್​ಮುಖ್​ಗೆ ಆಗಿತ್ತು ಅವಮಾನ; ಇಲ್ಲಿದೆ ಹಳೆಯ ಘಟನೆ

ರಿತೇಶ್ ದೇಶ್​ಮುಖ್​ ಅವರ ಜನ್ಮದಿನದಂದು, ಅವರ ಜೀವನದ ವಿವಿಧ ಅಂಶಗಳನ್ನು ಚರ್ಚಿಸಲಾಗಿದೆ. ಬೆಂಗಳೂರಿನ ಲಿಫ್ಟ್‌ನಲ್ಲಿ ಅವರಿಗೆ ಸಂಭವಿಸಿದ ಘಟನೆ ಬಗ್ಗೆ ಹೇಳಿಕೊಂಡಿದ್ದರು. ಅವರನ್ನು ಜೆನಿಲಿಯಾ ಅವರ ಪತಿ ಎಂದು ದಕ್ಷಿಣ ಭಾರತದಲ್ಲಿ ಹೆಚ್ಚು ಗುರುತಿಸಲಾಗುತ್ತದೆ ಎಂದು ಲೇಖನ ಉಲ್ಲೇಖಿಸುತ್ತದೆ. ಅವರ ಅಭಿಮಾನಿಗಳು ಹೊಸ ಸಿನಿಮಾಗಳಲ್ಲಿ ಅವರನ್ನು ನೋಡಲು ಬಯಸುತ್ತಿದ್ದಾರೆ.

ಬೆಂಗಳೂರು ಲಿಫ್ಟ್​ನಲ್ಲಿ ರಿತೇಶ್​ ದೇಶ್​ಮುಖ್​ಗೆ ಆಗಿತ್ತು ಅವಮಾನ; ಇಲ್ಲಿದೆ ಹಳೆಯ ಘಟನೆ
ಜೆನಿಲಿಯಾ-ರಿತೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 17, 2024 | 8:47 AM

Share

ರಿತೇಶ್ ದೇಶ್​ಮುಖ್ ಅವರು ಬಾಲಿವುಡ್​ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಇಂದು (ಡಿಸೆಂಬರ್ 17) ರಿತೇಶ್ ದೇಶ್​ಮುಖ್ ಅವರ ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ರಿತೇಶ್ ಅವರಿಗೆ ಈ ಮೊದಲು ಬೆಂಗಳೂರು ಲಿಫ್ಟ್​ನಲ್ಲಿ ಅವಮಾನ ಆಗಿತ್ತು. ಆ ಬಗ್ಗೆ ಹೇಳಿಕೊಂಡಿದ್ದರು. ಈ ಘಟನೆಯನ್ನು ಅವರು ಫನ್ ಆಗಿಯೇ ತೆಗೆದುಕೊಂಡಿದ್ದರು.

ರಿತೇಶ್ ಅವರು ಜೆನಿಲಿಯಾ ಅವರನ್ನು ವಿವಾಹ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಕನ್ನಡಿಗರಿಗೆ ಜೆನಿಲಿಯಾ ಪರಿಚಯ ಇದೆ. ಅವರು ಕನ್ನಡದಲ್ಲೂ ನಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ರಿತೇಶ್ ಅವರನ್ನು ಅನೇಕರು ಜೆನಿಲಿಯಾ ಪತಿ ಎಂದು ಗುರುತಿಸುವವರೇ ಹೆಚ್ಚು. ಇದೇ ರೀತಿಯ ಘಟನೆ ಬೆಂಗಳೂರಿನಲ್ಲೂ ಆಗಿತ್ತು.

ರಿತೇಶ್ ಒಮ್ಮೆ ಬೆಂಗಳೂರಿನ ಹೋಟೆಲ್​ನ ಲಿಫ್ಟ್​ನಲ್ಲಿ ಹೋಗುತ್ತಿದ್ದರು. ‘ನೀವು ಜೆನಿಲಿಯಾ ಪತಿ ಅಲ್ಲವಾ’ ಎಂದು ಅಲ್ಲಿದ್ದವರು ಕೇಳಿದರು. ಇದಕ್ಕೆ ರಿತೇಶ್​ಗೆ ಏನು ಹೇಳಬೇಕು ಎಂದು ತಿಳಿಯಲಿಲ್ಲ. ‘ನಾನು ಇಲ್ಲಿ ಜೆನಿಲಿಯಾ ಪತಿ. ಆದರೆ, ಮಹಾರಾಷ್ಟ್ರದಲ್ಲಿ ಎಲ್ಲರೂ ಜೆನಿಲಿಯಾ ಅವರನ್ನು ಗುರುತಿಸೋದು ರಿತೇಶ್ ಅವರ ಪತ್ನಿ ಎಂದು’ ಎಂಬುದಾಗಿ ರಿತೇಶ್ ಹೇಳಿದ್ದರು.

ಆಗ ಅಲ್ಲಿ ಲಿಫ್ಟ್​ನಲ್ಲಿ ಇದ್ದವರು ಸುಮ್ಮನೆ ಆಗಲಿಲ್ಲ. ‘ಅದು ಒಂದು ರಾಜ್ಯದಲ್ಲಿ ಮಾತ್ರ. ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರದಲ್ಲಿ ನೀವು ಜೆನಿಲಿಯಾ ಪತಿ ಅಷ್ಟೇ’ ಎಂದು ಉತ್ತರಿಸಿದ್ದರು. ಈ ಘಟನೆಯ ಬಗ್ಗೆ ರಿತೇಶ್ ಅನೇಕ ಬಾರಿ ಹೇಳಿದ್ದಾರೆ. ಅವರಿಗೆ ಇದು ಅವಮಾನದ ಸಂಗತಿಯೇ. ಆದರೆ, ಇದನ್ನು ಅವರು ಆ ರೀತಿಯಲ್ಲಿ ತೆಗೆದುಕೊಂಡಿಲ್ಲ. ಅವರಿಗೆ ಈ ಬಗ್ಗೆ ಖುಷಿ ಇದೆ. ‘ನನ್ನನ್ನು ಜೆನಿಲಿಯಾ ಪತಿ ಎಂದು ಗುರುತಿಸಿದಾಗ ಖುಷಿ ಆಗುತ್ತದೆ’ ಎಂದು ರಿತೇಶ್ ಹೇಳಿಕೊಂಡಿದ್ದರು.

ಇದನ್ನೂ ಓದಿ: ಜೆನಿಲಿಯಾ ಡಿಸೋಜಾ-ರಿತೇಶ್​ ದೇಶಮುಖ್​ ದಾಂಪತ್ಯಕ್ಕೆ 12 ವರ್ಷ

ರಿತೇಶ್ ಅವರು ಇತ್ತೀಚೆಗೆ ನಟನೆಯಿಂದ ದೂರ ಇದ್ದಾರೆ. ಅವರು ಅಷ್ಟಾಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಹೊಸ ಚಿತ್ರಗಳಲ್ಲಿ ನಟಿಸಿ ಅವರು ಗಮನ ಸೆಳೆಯುವ ಪ್ರಯತ್ನ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ