AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಲಿಫ್ಟ್​ನಲ್ಲಿ ರಿತೇಶ್​ ದೇಶ್​ಮುಖ್​ಗೆ ಆಗಿತ್ತು ಅವಮಾನ; ಇಲ್ಲಿದೆ ಹಳೆಯ ಘಟನೆ

ರಿತೇಶ್ ದೇಶ್​ಮುಖ್​ ಅವರ ಜನ್ಮದಿನದಂದು, ಅವರ ಜೀವನದ ವಿವಿಧ ಅಂಶಗಳನ್ನು ಚರ್ಚಿಸಲಾಗಿದೆ. ಬೆಂಗಳೂರಿನ ಲಿಫ್ಟ್‌ನಲ್ಲಿ ಅವರಿಗೆ ಸಂಭವಿಸಿದ ಘಟನೆ ಬಗ್ಗೆ ಹೇಳಿಕೊಂಡಿದ್ದರು. ಅವರನ್ನು ಜೆನಿಲಿಯಾ ಅವರ ಪತಿ ಎಂದು ದಕ್ಷಿಣ ಭಾರತದಲ್ಲಿ ಹೆಚ್ಚು ಗುರುತಿಸಲಾಗುತ್ತದೆ ಎಂದು ಲೇಖನ ಉಲ್ಲೇಖಿಸುತ್ತದೆ. ಅವರ ಅಭಿಮಾನಿಗಳು ಹೊಸ ಸಿನಿಮಾಗಳಲ್ಲಿ ಅವರನ್ನು ನೋಡಲು ಬಯಸುತ್ತಿದ್ದಾರೆ.

ಬೆಂಗಳೂರು ಲಿಫ್ಟ್​ನಲ್ಲಿ ರಿತೇಶ್​ ದೇಶ್​ಮುಖ್​ಗೆ ಆಗಿತ್ತು ಅವಮಾನ; ಇಲ್ಲಿದೆ ಹಳೆಯ ಘಟನೆ
ಜೆನಿಲಿಯಾ-ರಿತೇಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 17, 2024 | 8:47 AM

Share

ರಿತೇಶ್ ದೇಶ್​ಮುಖ್ ಅವರು ಬಾಲಿವುಡ್​ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಇಂದು (ಡಿಸೆಂಬರ್ 17) ರಿತೇಶ್ ದೇಶ್​ಮುಖ್ ಅವರ ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ರಿತೇಶ್ ಅವರಿಗೆ ಈ ಮೊದಲು ಬೆಂಗಳೂರು ಲಿಫ್ಟ್​ನಲ್ಲಿ ಅವಮಾನ ಆಗಿತ್ತು. ಆ ಬಗ್ಗೆ ಹೇಳಿಕೊಂಡಿದ್ದರು. ಈ ಘಟನೆಯನ್ನು ಅವರು ಫನ್ ಆಗಿಯೇ ತೆಗೆದುಕೊಂಡಿದ್ದರು.

ರಿತೇಶ್ ಅವರು ಜೆನಿಲಿಯಾ ಅವರನ್ನು ವಿವಾಹ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಕನ್ನಡಿಗರಿಗೆ ಜೆನಿಲಿಯಾ ಪರಿಚಯ ಇದೆ. ಅವರು ಕನ್ನಡದಲ್ಲೂ ನಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ರಿತೇಶ್ ಅವರನ್ನು ಅನೇಕರು ಜೆನಿಲಿಯಾ ಪತಿ ಎಂದು ಗುರುತಿಸುವವರೇ ಹೆಚ್ಚು. ಇದೇ ರೀತಿಯ ಘಟನೆ ಬೆಂಗಳೂರಿನಲ್ಲೂ ಆಗಿತ್ತು.

ರಿತೇಶ್ ಒಮ್ಮೆ ಬೆಂಗಳೂರಿನ ಹೋಟೆಲ್​ನ ಲಿಫ್ಟ್​ನಲ್ಲಿ ಹೋಗುತ್ತಿದ್ದರು. ‘ನೀವು ಜೆನಿಲಿಯಾ ಪತಿ ಅಲ್ಲವಾ’ ಎಂದು ಅಲ್ಲಿದ್ದವರು ಕೇಳಿದರು. ಇದಕ್ಕೆ ರಿತೇಶ್​ಗೆ ಏನು ಹೇಳಬೇಕು ಎಂದು ತಿಳಿಯಲಿಲ್ಲ. ‘ನಾನು ಇಲ್ಲಿ ಜೆನಿಲಿಯಾ ಪತಿ. ಆದರೆ, ಮಹಾರಾಷ್ಟ್ರದಲ್ಲಿ ಎಲ್ಲರೂ ಜೆನಿಲಿಯಾ ಅವರನ್ನು ಗುರುತಿಸೋದು ರಿತೇಶ್ ಅವರ ಪತ್ನಿ ಎಂದು’ ಎಂಬುದಾಗಿ ರಿತೇಶ್ ಹೇಳಿದ್ದರು.

ಆಗ ಅಲ್ಲಿ ಲಿಫ್ಟ್​ನಲ್ಲಿ ಇದ್ದವರು ಸುಮ್ಮನೆ ಆಗಲಿಲ್ಲ. ‘ಅದು ಒಂದು ರಾಜ್ಯದಲ್ಲಿ ಮಾತ್ರ. ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರದಲ್ಲಿ ನೀವು ಜೆನಿಲಿಯಾ ಪತಿ ಅಷ್ಟೇ’ ಎಂದು ಉತ್ತರಿಸಿದ್ದರು. ಈ ಘಟನೆಯ ಬಗ್ಗೆ ರಿತೇಶ್ ಅನೇಕ ಬಾರಿ ಹೇಳಿದ್ದಾರೆ. ಅವರಿಗೆ ಇದು ಅವಮಾನದ ಸಂಗತಿಯೇ. ಆದರೆ, ಇದನ್ನು ಅವರು ಆ ರೀತಿಯಲ್ಲಿ ತೆಗೆದುಕೊಂಡಿಲ್ಲ. ಅವರಿಗೆ ಈ ಬಗ್ಗೆ ಖುಷಿ ಇದೆ. ‘ನನ್ನನ್ನು ಜೆನಿಲಿಯಾ ಪತಿ ಎಂದು ಗುರುತಿಸಿದಾಗ ಖುಷಿ ಆಗುತ್ತದೆ’ ಎಂದು ರಿತೇಶ್ ಹೇಳಿಕೊಂಡಿದ್ದರು.

ಇದನ್ನೂ ಓದಿ: ಜೆನಿಲಿಯಾ ಡಿಸೋಜಾ-ರಿತೇಶ್​ ದೇಶಮುಖ್​ ದಾಂಪತ್ಯಕ್ಕೆ 12 ವರ್ಷ

ರಿತೇಶ್ ಅವರು ಇತ್ತೀಚೆಗೆ ನಟನೆಯಿಂದ ದೂರ ಇದ್ದಾರೆ. ಅವರು ಅಷ್ಟಾಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಹೊಸ ಚಿತ್ರಗಳಲ್ಲಿ ನಟಿಸಿ ಅವರು ಗಮನ ಸೆಳೆಯುವ ಪ್ರಯತ್ನ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ