AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rituraj Singh: ಹೃದಯಾಘಾತದಿಂದ ಖ್ಯಾತ ನಟ ರಿತುರಾಜ್​ ಸಿಂಗ್ ನಿಧನ; ಕಂಬನಿ ಮಿಡಿದ ಬಾಲಿವುಡ್​

ಅನೇಕ ಸೀರಿಯಲ್​ ಮತ್ತು ಸಿನಿಮಾಗಳಲ್ಲಿ ನಟಿಸಿದ್ದ ರಿತುರಾಜ್​ ಸಿಂಗ್ ಅವರು ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಶಾಕ್​ ಆಗಿದೆ. ಚಿತ್ರರಂಗದಲ್ಲಿ ಮತ್ತು ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದ ಅವರ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

Rituraj Singh: ಹೃದಯಾಘಾತದಿಂದ ಖ್ಯಾತ ನಟ ರಿತುರಾಜ್​ ಸಿಂಗ್ ನಿಧನ; ಕಂಬನಿ ಮಿಡಿದ ಬಾಲಿವುಡ್​
ರಿತುರಾಜ್​ ಸಿಂಗ್​
ಮದನ್​ ಕುಮಾರ್​
|

Updated on: Feb 20, 2024 | 3:23 PM

Share

ಹಿಂದಿ ಕಿರುತೆರೆ ಮತ್ತು ಬಾಲಿವುಡ್​ನಲ್ಲಿ ಖ್ಯಾತಿ ಪಡೆದಿದ್ದ ಹಿರಿಯ ನಟ ರಿತುರಾಜ್​ ಸಿಂಗ್ (Rituraj Singh) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬುದು ತಿಳಿದುಬಂದಿದೆ. ರಿತುರಾಜ್​ ಸಿಂಗ್ ಅವರ ನಿಧನದ (Rituraj Singh Death) ಸುದ್ದಿಯನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ. ‘ಅನುಪಮಾ’, ‘ಕುಲವಧು’, ‘ಕುಟುಂಬ್​’, ‘ಸಿಐಡಿ’, ‘ಅದಾಲತ್​’ ಮುಂತಾದ ಸೀರಿಯಲ್​ಗಳಲ್ಲಿ ರಿತುರಾಜ್ ಸಿಂಗ್​ ಅಭಿನಯಿಸಿದ್ದರು. ಅವರ ನಿಧನಕ್ಕೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ರಿತುರಾಜ್ ಸಿಂಗ್​ ಅವರಿಗೆ 59 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.

ಮುಂಬೈನ ತಮ್ಮ ನಿವಾಸದಲ್ಲೇ ರಿತುರಾಜ್ ಸಿಂಗ್​ ಅವರಿಗೆ ಹೃದಯಾಘಾತ ಆಗಿದೆ. ‘ಅನಾರೋಗ್ಯದ ಕಾರಣದಿಂದ ಕೆಲವೇ ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗುಣಮುಖರಾದ ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಮನೆಯಲ್ಲೇ ಅವರಿಗೆ ಮಧ್ಯರಾತ್ರಿ 12.30ಕ್ಕೆ ಹೃದಯಾಘಾತ ಆಯಿತು’ ಎಂದು ಅವರ ಆಪ್ತರಾದ ಅಮಿತ್​ ಬೆಹ್ಲ್​ ಅವರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ

ರಿತುರಾಜ್ ಸಿಂಗ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಪ್ರಾರ್ಥಿಸಿದ್ದಾರೆ. ಕಿರುತೆರೆಯ ಧಾರಾವಾಹಿಗಳು ಮಾತ್ರವಲ್ಲದೇ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡುವ ಮೂಲಕ ರಿತುರಾಜ್​ ಸಿಂಗ್​ ಅವರು ಜನಪ್ರಿಯತೆ ಪಡೆದಿದ್ದರು. ಒಟಿಟಿಯಲ್ಲಿ ಪ್ರಸಾರವಾದ ವೆಬ್​ ಸರಣಿಗಳಲ್ಲೂ ನಟಿಸಿ ಮೆಚ್ಚುಗೆ ಗಳಿಸಿದ್ದರು. ‘ಬಂದಿಶ್​ ಬ್ಯಾಂಡಿಟ್ಸ್​’, ‘ಮೇಡ್​ ಇನ್​ ಹೆವೆನ್​’, ‘ಇಂಡಿಯನ್​ ಪೊಲೀಸ್​ ಫೋರ್ಸ್​’ ವೆಬ್​ಸೀರಿಸ್​ಗಳಲ್ಲಿ ರಿತುರಾಜ್​ ಸಿಂಗ್​ ನಟಿಸಿದ್ದರು.

‘ಬದ್ರಿನಾಥ್​ ಕಿ ದುಲ್ಹನಿಯಾ’, ‘ಸತ್ಯಮೇವ ಜಯತೆ 2’ ಮುಂತಾದ ಸಿನಿಮಾಗಳಲ್ಲಿ ರಿತುರಾಜ್​ ಸಿಂಗ್​ ಅವರು ಪೋಷಕ ಪಾತ್ರಗಳನ್ನು ಮಾಡಿದ್ದರು. ನಿರ್ದೇಶಕರಾದ ಹನ್ಸಲ್​ ಮೆಹ್ತಾ, ವಿವೇಕ್​ ಅಗ್ನಿಹೋತ್ರಿ, ನಟರಾದ ಸೋನು ಸೋದ್​, ಅರ್ಷದ್​ ವಾರ್ಸಿ, ಸೋನು ಸೂದ್​ ಮುಂತಾದವರು ರಿತುರಾಜ್​ ಸಿಂಗ್​ ನಿಧನಕ್ಕೆ ಕಂಬನಿ ಮಿಡಿದ್ದಾರೆ.

‘ಕಲಾವಿದ ಎಂದಿಗೂ ಸಾಯುವುದಿಲ್ಲ. ಓಂ ಶಾಂತಿ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಪೋಸ್ಟ್​ ಮಾಡಿದ್ದಾರೆ. ರಿತುರಾಜ್​ ಸಿಂಗ್​ ಅವರ ಜೊತೆಗಿನ ಒಡನಾಟವನ್ನು ಹನ್ಸಲ್​ ಮೆಹ್ತಾ ಅವರು ಮೆಲುಕು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ