AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?

ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿದೆ. ಪಾತ್ರವರ್ಗದಲ್ಲಿ ರಣಬೀರ್ ಕಪೂರ್​, ಸಾಯಿ ಪಲ್ಲವಿ ಜೊತೆ ಯಶ್ ಕೂಡ ಇದ್ದಾರೆ. ಸದ್ಯಕ್ಕಂತೂ ಯಶ್ ಅವರ ಪೂರ್ತಿ ಗಮನ ‘ಟಾಕ್ಸಿಕ್’ ಸಿನಿಮಾದ ಮೇಲಿದೆ. ಹಾಗಾದರೆ ಅವರು ‘ರಾಮಾಯಣ’ ಶೂಟಿಂಗ್ ಮಾಡುವುದು ಯಾವಾಗ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?
Yash
Follow us
ಮದನ್​ ಕುಮಾರ್​
|

Updated on: Jan 28, 2025 | 10:45 PM

‘ರಾಕಿಂಗ್ ಸ್ಟಾರ್’ ಯಶ್ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಈಗ ಅವರು ‘ಟಾಕ್ಸಿಕ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಯಶ್ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಅವರ ಬಗ್ಗೆ ಪ್ರತಿಯೊಂದು ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾಯುತ್ತಲೇ ಇರುತ್ತಾರೆ. ಬಾಲಿವುಡ್​ನ ಬಹುನಿರೀಕ್ಷಿತ ಪ್ರಾಜೆಕ್ಟ್​ ‘ರಾಮಾಯಣ’ದಲ್ಲೂ ಯಶ್ ನಟಿಸಲಿದ್ದು, ಈ ಸಿನಿಮಾದ ಶೂಟಿಂಗ್ ಬಗ್ಗೆ ಒಂದು ಮಾಹಿತಿ ಕೇಳಿಬಂದಿದೆ.

ಯಶ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾವಣದ ಪಾತ್ರ ಮಾಡಲಿದ್ದಾರೆ. ಇದು ನೆಗೆಟಿವ್ ಪಾತ್ರ ಆದ್ದರಿಂದ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಮೂಡಿದೆ. ಆರಂಭದಲ್ಲಿ ಈ ವಿಚಾರ ಗೌಪ್ಯವಾಗಿತ್ತು. ನಂತರ ಸ್ವತಃ ಯಶ್ ಅವರು ಒಂದು ಸಂದರ್ಶನದಲ್ಲಿ ಖಚಿತಪಡಿಸಿದರು. ರಾವಣನ ಪಾತ್ರ ಮಾಡಲು ತಾವು ಉತ್ಸುಕರಾಗಿರುವುದಾಗಿ ಹೇಳಿದರು. ಹಾಗಾದರೆ ಯಶ್ ಅವರು ಈ ಸಿನಿಮಾದ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದು ಯಾವಾಗ?

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ಫಿಲ್ಮ್​ಫೇರ್​ ವರದಿ ಪ್ರಕಾರ, ಯಶ್ ಅವರು ಮಾರ್ಚ್​ ತಿಂಗಳಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ. ಅವರ ಲುಕ್ ಹೇಗಿರಲಿದೆ ಎಂಬುದನ್ನು ತಿಳಿಯುವ ಕಾತರ ಅಭಿಮಾನಿಗಳಿಗೆ ಇದೆ. ಈ ಮೊದಲು ‘ರಾಮಾಯಣ’ ಶೂಟಿಂಗ್ ಸೆಟ್​ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದವು. ಹಾಗಾಗಿ ಚಿತ್ರತಂಡದವರು ಈಗ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.

ಇದನ್ನೂ ಓದಿ: ‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಅವರು ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಕಾಣಿಸಿಕೊಳ್ಳಲಿದ್ದಾರೆ. ‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. 2 ಪಾರ್ಟ್​ನಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ 2026ರ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. 2ನೇ ಪಾರ್ಟ್​ 2027ರ ದೀಪಾವಳಿ ಹಬ್ಬಕ್ಕೆ ತೆರೆ ಕಾಣಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಯಶ್, ಸಾಯಿ ಪಲ್ಲವಿ, ರಣಬೀರ್ ಕಪೂರ್​ ಅವರಂತಹ ಘಟಾನುಘಟಿಗಳು ಪಾತ್ರವರ್ಗದಲ್ಲಿ ಇರುವುದರಿಂದ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?