AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?

ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿದೆ. ಪಾತ್ರವರ್ಗದಲ್ಲಿ ರಣಬೀರ್ ಕಪೂರ್​, ಸಾಯಿ ಪಲ್ಲವಿ ಜೊತೆ ಯಶ್ ಕೂಡ ಇದ್ದಾರೆ. ಸದ್ಯಕ್ಕಂತೂ ಯಶ್ ಅವರ ಪೂರ್ತಿ ಗಮನ ‘ಟಾಕ್ಸಿಕ್’ ಸಿನಿಮಾದ ಮೇಲಿದೆ. ಹಾಗಾದರೆ ಅವರು ‘ರಾಮಾಯಣ’ ಶೂಟಿಂಗ್ ಮಾಡುವುದು ಯಾವಾಗ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?
Yash
ಮದನ್​ ಕುಮಾರ್​
|

Updated on: Jan 28, 2025 | 10:45 PM

Share

‘ರಾಕಿಂಗ್ ಸ್ಟಾರ್’ ಯಶ್ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಈಗ ಅವರು ‘ಟಾಕ್ಸಿಕ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಯಶ್ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಅವರ ಬಗ್ಗೆ ಪ್ರತಿಯೊಂದು ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾಯುತ್ತಲೇ ಇರುತ್ತಾರೆ. ಬಾಲಿವುಡ್​ನ ಬಹುನಿರೀಕ್ಷಿತ ಪ್ರಾಜೆಕ್ಟ್​ ‘ರಾಮಾಯಣ’ದಲ್ಲೂ ಯಶ್ ನಟಿಸಲಿದ್ದು, ಈ ಸಿನಿಮಾದ ಶೂಟಿಂಗ್ ಬಗ್ಗೆ ಒಂದು ಮಾಹಿತಿ ಕೇಳಿಬಂದಿದೆ.

ಯಶ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾವಣದ ಪಾತ್ರ ಮಾಡಲಿದ್ದಾರೆ. ಇದು ನೆಗೆಟಿವ್ ಪಾತ್ರ ಆದ್ದರಿಂದ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಮೂಡಿದೆ. ಆರಂಭದಲ್ಲಿ ಈ ವಿಚಾರ ಗೌಪ್ಯವಾಗಿತ್ತು. ನಂತರ ಸ್ವತಃ ಯಶ್ ಅವರು ಒಂದು ಸಂದರ್ಶನದಲ್ಲಿ ಖಚಿತಪಡಿಸಿದರು. ರಾವಣನ ಪಾತ್ರ ಮಾಡಲು ತಾವು ಉತ್ಸುಕರಾಗಿರುವುದಾಗಿ ಹೇಳಿದರು. ಹಾಗಾದರೆ ಯಶ್ ಅವರು ಈ ಸಿನಿಮಾದ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದು ಯಾವಾಗ?

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ಫಿಲ್ಮ್​ಫೇರ್​ ವರದಿ ಪ್ರಕಾರ, ಯಶ್ ಅವರು ಮಾರ್ಚ್​ ತಿಂಗಳಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ. ಅವರ ಲುಕ್ ಹೇಗಿರಲಿದೆ ಎಂಬುದನ್ನು ತಿಳಿಯುವ ಕಾತರ ಅಭಿಮಾನಿಗಳಿಗೆ ಇದೆ. ಈ ಮೊದಲು ‘ರಾಮಾಯಣ’ ಶೂಟಿಂಗ್ ಸೆಟ್​ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದವು. ಹಾಗಾಗಿ ಚಿತ್ರತಂಡದವರು ಈಗ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.

ಇದನ್ನೂ ಓದಿ: ‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಅವರು ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಕಾಣಿಸಿಕೊಳ್ಳಲಿದ್ದಾರೆ. ‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. 2 ಪಾರ್ಟ್​ನಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ 2026ರ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. 2ನೇ ಪಾರ್ಟ್​ 2027ರ ದೀಪಾವಳಿ ಹಬ್ಬಕ್ಕೆ ತೆರೆ ಕಾಣಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಯಶ್, ಸಾಯಿ ಪಲ್ಲವಿ, ರಣಬೀರ್ ಕಪೂರ್​ ಅವರಂತಹ ಘಟಾನುಘಟಿಗಳು ಪಾತ್ರವರ್ಗದಲ್ಲಿ ಇರುವುದರಿಂದ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು