AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್
ಆಲಿಯಾ-ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Aug 02, 2023 | 10:56 AM

Share

ನಟ ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಟಿಪಿಕಲ್ ಕರಣ್ ಜೋಹರ್ ಸಿನಿಮಾ ರೀತಿಯಲ್ಲಿ ಇದು ಮೂಡಿ ಬಂದಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಆಗಸ್ಟ್ 1) ಚಿತ್ರತಂಡ ಮುಂಬೈನಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದೆ. ಬಳಿಕ ನಡೆದ ಫೋಟೋಶೂಟ್​ ವೇಳೆ ರಣವೀರ್ ಹಾಗೂ ಆಲಿಯಾ ಭಟ್ (Alia Bhatt) ತಳ್ಳಾಡಿಕೊಂಡಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ಆಲಿಯಾ ಕೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಸೋಮವಾರ ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಮರಳಿ ಬರುವಾಗ ಪಾಪರಾಜಿಗಳು ಇವರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ರಣವೀರ್ ಅವರು ಆಲಿಯಾ ಭಟ್ ಅವರನ್ನು ತಳ್ಳಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ರಣವೀರ್ ಅವರನ್ನು ಆಲಿಯಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುವಿನ ಉತ್ತರ ನೀಡಿದ್ದಾರೆ ರಣವೀರ್ ಸಿಂಗ್. ಪಾಪರಾಜಿಗಳನ್ನು ಕಂಡ ತಕ್ಷಣ ರಣವೀರ್ ಸಿಂಗ್​ಗೆ ಜೋಶ್ ಬಂದಿದೆ. ಅವರು ಚಿತ್ರವಿಚಿತ್ರವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ಈ ವಿಡಿಯೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಆಲಿಯಾ-ರಣವೀರ್ ಸಿಂಗ್ ತುಂಬಾನೇ ಕ್ಲೋಸ್ ಆಗಿದ್ದಾರೆ. ಬಹುಶಃ ದೀಪಿಕಾ-ರಣವೀರ್ ಕೂಡ ಇಷ್ಟು ಆಪ್ತವಾಗಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಣವೀರ್ ಸಿಂಗ್ ಅವರ ವೈಬ್​ನ ಮ್ಯಾಚ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಇದು ಬಕ್ವಾಸ್ ಸಿನಿಮಾ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
ವಿಡಿಯೋ: ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ!
ವಿಡಿಯೋ: ರೌದ್ರಾವತಾರ ತಾಳಿ ಬೈಕ್​ಗಳ ಮೆಟ್ಟಿ ಪುಡಿ ಮಾಡಿದ ಕಾಡಾನೆ!
ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್
ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್
ಹೊಸ ಸಿಲಿಂಡರ್​​ ಜೋಡಣೆ ವೇಳೆ ಬೆಂಕಿ ಹೊತ್ತಿಕೊಂಡು ಭೀಕರ ಸ್ಫೋಟ!
ಹೊಸ ಸಿಲಿಂಡರ್​​ ಜೋಡಣೆ ವೇಳೆ ಬೆಂಕಿ ಹೊತ್ತಿಕೊಂಡು ಭೀಕರ ಸ್ಫೋಟ!
ದಾವಣಗೆರೆ: ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್!
ದಾವಣಗೆರೆ: ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್!
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!