AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್
ಆಲಿಯಾ-ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Aug 02, 2023 | 10:56 AM

Share

ನಟ ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಟಿಪಿಕಲ್ ಕರಣ್ ಜೋಹರ್ ಸಿನಿಮಾ ರೀತಿಯಲ್ಲಿ ಇದು ಮೂಡಿ ಬಂದಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಆಗಸ್ಟ್ 1) ಚಿತ್ರತಂಡ ಮುಂಬೈನಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದೆ. ಬಳಿಕ ನಡೆದ ಫೋಟೋಶೂಟ್​ ವೇಳೆ ರಣವೀರ್ ಹಾಗೂ ಆಲಿಯಾ ಭಟ್ (Alia Bhatt) ತಳ್ಳಾಡಿಕೊಂಡಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ಆಲಿಯಾ ಕೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಸೋಮವಾರ ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಮರಳಿ ಬರುವಾಗ ಪಾಪರಾಜಿಗಳು ಇವರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ರಣವೀರ್ ಅವರು ಆಲಿಯಾ ಭಟ್ ಅವರನ್ನು ತಳ್ಳಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ರಣವೀರ್ ಅವರನ್ನು ಆಲಿಯಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುವಿನ ಉತ್ತರ ನೀಡಿದ್ದಾರೆ ರಣವೀರ್ ಸಿಂಗ್. ಪಾಪರಾಜಿಗಳನ್ನು ಕಂಡ ತಕ್ಷಣ ರಣವೀರ್ ಸಿಂಗ್​ಗೆ ಜೋಶ್ ಬಂದಿದೆ. ಅವರು ಚಿತ್ರವಿಚಿತ್ರವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ಈ ವಿಡಿಯೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಆಲಿಯಾ-ರಣವೀರ್ ಸಿಂಗ್ ತುಂಬಾನೇ ಕ್ಲೋಸ್ ಆಗಿದ್ದಾರೆ. ಬಹುಶಃ ದೀಪಿಕಾ-ರಣವೀರ್ ಕೂಡ ಇಷ್ಟು ಆಪ್ತವಾಗಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಣವೀರ್ ಸಿಂಗ್ ಅವರ ವೈಬ್​ನ ಮ್ಯಾಚ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಇದು ಬಕ್ವಾಸ್ ಸಿನಿಮಾ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ