Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್
ಆಲಿಯಾ-ರಣವೀರ್ ಸಿಂಗ್
Follow us
ರಾಜೇಶ್ ದುಗ್ಗುಮನೆ
|

Updated on: Aug 02, 2023 | 10:56 AM

ನಟ ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಟಿಪಿಕಲ್ ಕರಣ್ ಜೋಹರ್ ಸಿನಿಮಾ ರೀತಿಯಲ್ಲಿ ಇದು ಮೂಡಿ ಬಂದಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಆಗಸ್ಟ್ 1) ಚಿತ್ರತಂಡ ಮುಂಬೈನಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದೆ. ಬಳಿಕ ನಡೆದ ಫೋಟೋಶೂಟ್​ ವೇಳೆ ರಣವೀರ್ ಹಾಗೂ ಆಲಿಯಾ ಭಟ್ (Alia Bhatt) ತಳ್ಳಾಡಿಕೊಂಡಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ಆಲಿಯಾ ಕೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಸೋಮವಾರ ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಮರಳಿ ಬರುವಾಗ ಪಾಪರಾಜಿಗಳು ಇವರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ರಣವೀರ್ ಅವರು ಆಲಿಯಾ ಭಟ್ ಅವರನ್ನು ತಳ್ಳಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ರಣವೀರ್ ಅವರನ್ನು ಆಲಿಯಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುವಿನ ಉತ್ತರ ನೀಡಿದ್ದಾರೆ ರಣವೀರ್ ಸಿಂಗ್. ಪಾಪರಾಜಿಗಳನ್ನು ಕಂಡ ತಕ್ಷಣ ರಣವೀರ್ ಸಿಂಗ್​ಗೆ ಜೋಶ್ ಬಂದಿದೆ. ಅವರು ಚಿತ್ರವಿಚಿತ್ರವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ಈ ವಿಡಿಯೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಆಲಿಯಾ-ರಣವೀರ್ ಸಿಂಗ್ ತುಂಬಾನೇ ಕ್ಲೋಸ್ ಆಗಿದ್ದಾರೆ. ಬಹುಶಃ ದೀಪಿಕಾ-ರಣವೀರ್ ಕೂಡ ಇಷ್ಟು ಆಪ್ತವಾಗಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಣವೀರ್ ಸಿಂಗ್ ಅವರ ವೈಬ್​ನ ಮ್ಯಾಚ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಇದು ಬಕ್ವಾಸ್ ಸಿನಿಮಾ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!