AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್
ಆಲಿಯಾ-ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Aug 02, 2023 | 10:56 AM

Share

ನಟ ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಟಿಪಿಕಲ್ ಕರಣ್ ಜೋಹರ್ ಸಿನಿಮಾ ರೀತಿಯಲ್ಲಿ ಇದು ಮೂಡಿ ಬಂದಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಆಗಸ್ಟ್ 1) ಚಿತ್ರತಂಡ ಮುಂಬೈನಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದೆ. ಬಳಿಕ ನಡೆದ ಫೋಟೋಶೂಟ್​ ವೇಳೆ ರಣವೀರ್ ಹಾಗೂ ಆಲಿಯಾ ಭಟ್ (Alia Bhatt) ತಳ್ಳಾಡಿಕೊಂಡಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ಆಲಿಯಾ ಕೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಸೋಮವಾರ ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಮರಳಿ ಬರುವಾಗ ಪಾಪರಾಜಿಗಳು ಇವರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ರಣವೀರ್ ಅವರು ಆಲಿಯಾ ಭಟ್ ಅವರನ್ನು ತಳ್ಳಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ರಣವೀರ್ ಅವರನ್ನು ಆಲಿಯಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುವಿನ ಉತ್ತರ ನೀಡಿದ್ದಾರೆ ರಣವೀರ್ ಸಿಂಗ್. ಪಾಪರಾಜಿಗಳನ್ನು ಕಂಡ ತಕ್ಷಣ ರಣವೀರ್ ಸಿಂಗ್​ಗೆ ಜೋಶ್ ಬಂದಿದೆ. ಅವರು ಚಿತ್ರವಿಚಿತ್ರವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ಈ ವಿಡಿಯೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಆಲಿಯಾ-ರಣವೀರ್ ಸಿಂಗ್ ತುಂಬಾನೇ ಕ್ಲೋಸ್ ಆಗಿದ್ದಾರೆ. ಬಹುಶಃ ದೀಪಿಕಾ-ರಣವೀರ್ ಕೂಡ ಇಷ್ಟು ಆಪ್ತವಾಗಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಣವೀರ್ ಸಿಂಗ್ ಅವರ ವೈಬ್​ನ ಮ್ಯಾಚ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಇದು ಬಕ್ವಾಸ್ ಸಿನಿಮಾ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್