AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಂತೆ ನಡೆಯಲಿಲ್ಲ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಮ್ಯಾಜಿಕ್; ಮೊದಲ ದಿನದ ಕಲೆಕ್ಷನ್ ಎಷ್ಟು?

ರಣವೀರ್ ಸಿಂಗ್, ಆಲಿಯಾ ಭಟ್ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಇವರಿಬ್ಬರೂ ಒಟ್ಟಿಗೆ ನಟಿಸಿದ್ದಾರೆ ಎಂದಾಗ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ಆದರೆ, ಅಂದುಕೊಂಡಷ್ಟು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕಲೆಕ್ಷನ್ ಮಾಡಿಲ್ಲ.

ಅಂದುಕೊಂಡಂತೆ ನಡೆಯಲಿಲ್ಲ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಮ್ಯಾಜಿಕ್; ಮೊದಲ ದಿನದ ಕಲೆಕ್ಷನ್ ಎಷ್ಟು?
ರಣವೀರ್-ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Jul 29, 2023 | 10:46 AM

Share

ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Kii Prem Kahaani) ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಒಂದಷ್ಟು ಮಂದಿ ಚಿತ್ರವನ್ನು ಮೆಚ್ಚಿದರೆ ಮತ್ತೊಂದಷ್ಟು ಮಂದಿ ಇದು ಟಿಪಿಕಲ್ ಬಾಲಿವುಡ್ ಸಿನಿಮಾ ಎಂದು ಕರೆದಿದ್ದಾರೆ. ಈ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಕುತೂಹಲ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ ಕೇವಲ 11.50 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ರಣವೀರ್ ಸಿಂಗ್, ಆಲಿಯಾ ಭಟ್ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಇವರಿಬ್ಬರೂ ಒಟ್ಟಿಗೆ ನಟಿಸಿದ್ದಾರೆ ಎಂದಾಗ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ಆದರೆ, ಅಂದುಕೊಂಡಷ್ಟು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕಲೆಕ್ಷನ್ ಮಾಡಿಲ್ಲ. ಇಂದು (ಜುಲೈ 29) ಹಾಗೂ ನಾಳೆ (ಜುಲೈ 30) ಸಿನಿಮಾ ಎಷ್ಟು ಗಳಿಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಶುಕ್ರವಾರ ಮುಂಜಾನೆ ಸಂದರ್ಭದಲ್ಲಿ ಶೇ. 12, ಸಂಜೆ ವೇಳೆಗೆ ಶೇ. 20 ಹಾಗೂ ರಾತ್ರಿವೇಳೆ ಶೇ. 36.85 ತುಂಬಿತ್ತು. ಇಂದು ಹಾಗೂ ನಾಳೆ ಈ ಚಿತ್ರವನ್ನು ಎಷ್ಟು ಮಂದಿ ಕಣ್ತುಂಬಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರೇಟಿಂಗ್ ವಿಚಾರದಲ್ಲೂ ಸಿನಿಮಾ ಹಿಂದೆ ಬಿದ್ದಿದೆ. ಶನಿವಾರ ಮುಂಜಾನೆ 10:30ರ ವೇಳೆಗೆ ಈ ಸಿನಿಮಾ ಐಎಂಡಿಬಿಯಲ್ಲಿ 6.5/10 ಹಾಗೂ ಬುಕ್​ ಮೈ ಶೋನಲ್ಲಿ 7.3/10 ರೇಟಿಂಗ್ ಪಡೆದುಕೊಂಡಿದೆ. ಇದು ಕೂಡ ಚಿತ್ರದ ಹಿನ್ನಡೆಗೆ ಕಾರಣ ಆಗಬಹುದು.

ಇದನ್ನೂ ಓದಿ: ‘ನೀವು ಸಲಿಂಗ ಕಾಮಿ ತಾನೇ?’: ನೇರ ಪ್ರಶ್ನೆಗೆ ಉತ್ತರ ನೀಡಿದ ಕರಣ್​ ಜೋಹರ್​

ಅಚ್ಚರಿಯ ವಿಚಾರ ಎಂದರೆ ಕರಣ್​ ಜೋಹರ್ ಅವರು ಈ ಚಿತ್ರವನ್ನು ಸಕ್ಸಸ್ ಸಿನಿಮಾ ಎಂದು ಘೋಷಣೆ ಮಾಡಿಕೊಂಡಾಗಿದೆ. ಜುಲೈ 28ರಂದು ಕರಣ್ ಜೋಹರ್ ಮನೆಯಲ್ಲಿ ಸಕ್ಸಸ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ರಣಬೀರ್ ಕಪೂರ್, ಮನೀಷ್ ಮಲ್ಹೋತ್ರಾ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು