AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಂತೆ ನಡೆಯಲಿಲ್ಲ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಮ್ಯಾಜಿಕ್; ಮೊದಲ ದಿನದ ಕಲೆಕ್ಷನ್ ಎಷ್ಟು?

ರಣವೀರ್ ಸಿಂಗ್, ಆಲಿಯಾ ಭಟ್ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಇವರಿಬ್ಬರೂ ಒಟ್ಟಿಗೆ ನಟಿಸಿದ್ದಾರೆ ಎಂದಾಗ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ಆದರೆ, ಅಂದುಕೊಂಡಷ್ಟು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕಲೆಕ್ಷನ್ ಮಾಡಿಲ್ಲ.

ಅಂದುಕೊಂಡಂತೆ ನಡೆಯಲಿಲ್ಲ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಮ್ಯಾಜಿಕ್; ಮೊದಲ ದಿನದ ಕಲೆಕ್ಷನ್ ಎಷ್ಟು?
ರಣವೀರ್-ಆಲಿಯಾ
Follow us
ರಾಜೇಶ್ ದುಗ್ಗುಮನೆ
|

Updated on: Jul 29, 2023 | 10:46 AM

ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Kii Prem Kahaani) ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಒಂದಷ್ಟು ಮಂದಿ ಚಿತ್ರವನ್ನು ಮೆಚ್ಚಿದರೆ ಮತ್ತೊಂದಷ್ಟು ಮಂದಿ ಇದು ಟಿಪಿಕಲ್ ಬಾಲಿವುಡ್ ಸಿನಿಮಾ ಎಂದು ಕರೆದಿದ್ದಾರೆ. ಈ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಕುತೂಹಲ ಇತ್ತು. ಅದಕ್ಕೆ ಉತ್ತರ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ ಕೇವಲ 11.50 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ರಣವೀರ್ ಸಿಂಗ್, ಆಲಿಯಾ ಭಟ್ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಇವರಿಬ್ಬರೂ ಒಟ್ಟಿಗೆ ನಟಿಸಿದ್ದಾರೆ ಎಂದಾಗ ದೊಡ್ಡ ಮಟ್ಟದ ನಿರೀಕ್ಷೆ ಇರುತ್ತದೆ. ಆದರೆ, ಅಂದುಕೊಂಡಷ್ಟು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಕಲೆಕ್ಷನ್ ಮಾಡಿಲ್ಲ. ಇಂದು (ಜುಲೈ 29) ಹಾಗೂ ನಾಳೆ (ಜುಲೈ 30) ಸಿನಿಮಾ ಎಷ್ಟು ಗಳಿಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಶುಕ್ರವಾರ ಮುಂಜಾನೆ ಸಂದರ್ಭದಲ್ಲಿ ಶೇ. 12, ಸಂಜೆ ವೇಳೆಗೆ ಶೇ. 20 ಹಾಗೂ ರಾತ್ರಿವೇಳೆ ಶೇ. 36.85 ತುಂಬಿತ್ತು. ಇಂದು ಹಾಗೂ ನಾಳೆ ಈ ಚಿತ್ರವನ್ನು ಎಷ್ಟು ಮಂದಿ ಕಣ್ತುಂಬಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರೇಟಿಂಗ್ ವಿಚಾರದಲ್ಲೂ ಸಿನಿಮಾ ಹಿಂದೆ ಬಿದ್ದಿದೆ. ಶನಿವಾರ ಮುಂಜಾನೆ 10:30ರ ವೇಳೆಗೆ ಈ ಸಿನಿಮಾ ಐಎಂಡಿಬಿಯಲ್ಲಿ 6.5/10 ಹಾಗೂ ಬುಕ್​ ಮೈ ಶೋನಲ್ಲಿ 7.3/10 ರೇಟಿಂಗ್ ಪಡೆದುಕೊಂಡಿದೆ. ಇದು ಕೂಡ ಚಿತ್ರದ ಹಿನ್ನಡೆಗೆ ಕಾರಣ ಆಗಬಹುದು.

ಇದನ್ನೂ ಓದಿ: ‘ನೀವು ಸಲಿಂಗ ಕಾಮಿ ತಾನೇ?’: ನೇರ ಪ್ರಶ್ನೆಗೆ ಉತ್ತರ ನೀಡಿದ ಕರಣ್​ ಜೋಹರ್​

ಅಚ್ಚರಿಯ ವಿಚಾರ ಎಂದರೆ ಕರಣ್​ ಜೋಹರ್ ಅವರು ಈ ಚಿತ್ರವನ್ನು ಸಕ್ಸಸ್ ಸಿನಿಮಾ ಎಂದು ಘೋಷಣೆ ಮಾಡಿಕೊಂಡಾಗಿದೆ. ಜುಲೈ 28ರಂದು ಕರಣ್ ಜೋಹರ್ ಮನೆಯಲ್ಲಿ ಸಕ್ಸಸ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ರಣಬೀರ್ ಕಪೂರ್, ಮನೀಷ್ ಮಲ್ಹೋತ್ರಾ ಮೊದಲಾದವರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್