AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಿಯಾಲಿಟಿ ಹೋಸ್ಟ್ ಮಾಡಲು 16 ಕೋಟಿ ರೂಪಾಯಿ ಪಡೆದ ರೋಹಿತ್ ಶೆಟ್ಟಿ; ಇರಲಿದ್ದಾರೆ ಬಿಗ್ ಬಾಸ್ ವಿನ್ನರ್

ರೋಹಿತ್ ಶೆಟ್ಟಿ ಅವರು ಈ ಮೊದಲೂ ‘ಖತ್ರೋ ಕೆ ಖಿಲಾಡಿ’ ಶೋ ನಡೆಸಿಕೊಟ್ಟಿದ್ದಾರೆ. ಅವರು ಪ್ರತಿ ಎಪಿಸೋಡ್​ಗೆ 50 ಲಕ್ಷ ರೂಪಾಯಿ ಪಡೆಯುತ್ತಿದ್ದರು. ಈಗ ಇದನ್ನು 60-70 ಲಕ್ಷ ರೂಪಾಯಿಗೆ ಏರಿಕೆ ಮಾಡಿಕೊಂಡಿದ್ದಾರೆ. ಇದನ್ನು ಲೆಕ್ಕ ಹಾಕಿದರೆ ಅವರು 14ನೇ ಸೀಸನ್​ಗೆ 16 ಕೋಟಿ ರೂಪಾಯಿಗೂ ಅಧಿಕ ಹಣ ಪಡೆಯುತ್ತಿದ್ದಾರೆ.  

ಹೊಸ ರಿಯಾಲಿಟಿ ಹೋಸ್ಟ್ ಮಾಡಲು 16 ಕೋಟಿ ರೂಪಾಯಿ ಪಡೆದ ರೋಹಿತ್ ಶೆಟ್ಟಿ; ಇರಲಿದ್ದಾರೆ ಬಿಗ್ ಬಾಸ್ ವಿನ್ನರ್
ರೋಹಿತ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 13, 2024 | 12:39 PM

Share

ಕಲರ್ಸ್ ಟಿವಿಯಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿರುತ್ತವೆ. ಈ ಪೈಕಿ ‘ಖತ್ರೋ ಕೆ ಖಿಲಾಡಿ’ ರಿಯಾಲಿಟಿ ಶೋ ಕೂಡ ಗಮನ ಸೆಳೆದಿದೆ. ಈಗಾಗಲೇ 13 ಸೀಸನ್​ಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, 14ನೇ ಸೀಸನ್​ಗೆ ದಿನಗಣನೆ ಆರಂಭ ಆಗಿದೆ. ರೋಹಿತ್ ಶೆಟ್ಟಿ (Rohit Shetty) ಅವರು ಇದನ್ನು ನಡೆಸಿಕೊಡಲಿದ್ದಾರೆ. ಸ್ಟಂಟ್​ ಆಧರಿಸಿದ ರಿಯಾಲಿಟಿ ಶೋ ಆಗಿರುವುದರಿಂದ ರೋಹಿತ್ ಶೆಟ್ಟಿ ಅವರು ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅವರ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಹಾಗೂ ಸ್ಟಂಟ್​ಗಳು ಇರುತ್ತವೆ. ಅವರು ಈ ಶೋಗಾಗಿ ಬರೋಬ್ಬರಿ 16 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಿದ್ದಾರೆ.

ರೋಹಿತ್ ಶೆಟ್ಟಿ ಅವರು ಈ ಮೊದಲೂ ‘ಖತ್ರೋ ಕೆ ಖಿಲಾಡಿ’ ಶೋ ನಡೆಸಿಕೊಟ್ಟಿದ್ದಾರೆ. ಅವರು ಪ್ರತಿ ಎಪಿಸೋಡ್​ಗೆ 50 ಲಕ್ಷ ರೂಪಾಯಿ ಪಡೆಯುತ್ತಿದ್ದರು. ಈಗ ಇದನ್ನು 60-70 ಲಕ್ಷ ರೂಪಾಯಿಗೆ ಏರಿಕೆ ಮಾಡಿಕೊಂಡಿದ್ದಾರೆ. ಇದನ್ನು ಲೆಕ್ಕ ಹಾಕಿದರೆ ಅವರು 14ನೇ ಸೀಸನ್​ಗೆ 16 ಕೋಟಿ ರೂಪಾಯಿಗೂ ಅಧಿಕ ಹಣ ಪಡೆಯುತ್ತಿದ್ದಾರೆ.

‘ಖತ್ರೋ ಕೆ ಖಿಲಾಡಿ’ ರಿಯಾಲಿಟಿ ಶೋನಲ್ಲಿ ಭರ್ಜರಿ ಸ್ಟಂಟ್​ಗಳು ಇರುತ್ತವೆ. ನಾನಾ ರೀತಿಯ ಟಾಸ್ಕ್ ನೀಡಲಾಗುತ್ತದೆ. ಈ ರಿಯಾಲಿಟಿ ಶೋನಲ್ಲಿ ಭಾಗವಹಿಸೋ ಸೆಲೆಬ್ರಿಟಿಗಳು ತಮ್ಮ ಫಿಯರ್ ಬಗ್ಗೆ ಹೇಳಿಕೊಳ್ಳುತ್ತಾರೆ. ಕಳೆದ ಸೀಸನ್​ನಲ್ಲಿ ರ‍್ಯಾಪರ್ ಡಿನೋ ಜೇಮ್ಸ್ ಅವರು ಗೆದ್ದಿದ್ದರು. ಆ ಸೀಸನ್ ದಕ್ಷಿಣ ಆಫ್ರಿಕಾದ ಕೇಪ್ ಟೌನ್​ನಲ್ಲಿ ನಡೆದಿತ್ತು.

‘ಬಿಗ್ ಬಾಸ್ ಹಿಂದಿ ಸೀಸನ್ 17’ ವಿನ್ ಆಗೋ ಮೂಲಕ ಮುನ್ನಾವರ ಫಾರುಖಿ ಅವರು ಗಮನ ಸೆಳೆದಿದ್ದಾರೆ. ಈ ಸೀಸನ್​ನಲ್ಲಿ ಮನ್ನಾರಾ ಚೋಪ್ರಾ ಕೂಡ ಕೂಡ ಇದ್ದರು. ಇವರಿಬ್ಬರೂ ‘ಖತ್ರೊ ಕೆ ಖಿಲಾಡಿ’ ಶೋನಲ್ಲಿ ಭಾಗವಹಿಸೋ ಸಾಧ್ಯತೆ ಇದೆ. ಈಗಾಗಲೇ ಅವರಿಗೆ ಆಫರ್ ಹೋಗಿದ್ದು, ಅವರು ಭಾಗವಹಿಸಲು ನಿರ್ಧರಿಸಿದ್ದಾರೆ.  ಈ ಮೊದಲು ಮುನ್ನಾವರ್ ಅವರು ‘ಖತ್ರೋ ಕೆ ಖಿಲಾಡಿ ಸೀಸನ್ 12’ರಲ್ಲಿ ಭಾಗವಹಿಸಬೇಕಿತ್ತು. ಆದರೆ, ವಿಸಾಗೆ ಸಂಬಂಧಿಸಿದ ತೊಂದರೆಯಿಂದ ಅವರಿಗೆ ಹೋಗೋಕೆ ಸಾಧ್ಯವಾಗಿಲ್ಲ.  ‘ಖತ್ರೋ ಕೆ ಖಿಲಾಡಿ’ ಪ್ರತಿ ಬಾರಿಯೂ ಬೇರೆ ಬೇರೆ ರಾಷ್ಟ್ರಗಳಲ್ಲಿ ನಡೆಯುತ್ತದೆ. ಬಹುತೇಕ ಶೋಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದಿವೆ.

ಇದನ್ನೂ ಓದಿ: ಸೆಟ್​ನಲ್ಲಿ ಬಸ್ಸು, ಕಾರು ಉಡೀಸ್ ಮಾಡಿದ ರೋಹಿತ್ ಶೆಟ್ಟಿ; ಇಲ್ಲಿದೆ ಝಲಕ್

ರೋಹಿತ್ ಶೆಟ್ಟಿ ಅವರು ‘ಸಿಂಗಂ 3’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಅಜಯ್ ದೇವಗನ್, ಅಕ್ಷಯ್ ಕುಮಾರ್, ರಣವೀರ್ ಸಿಂಗ್, ಟೈಗರ್ ಶ್ರಾಫ್, ದೀಪಿಕಾ ಪಡುಕೋಣೆ ಸೇರಿ ಸ್ಟಾರ್​ಗಳ ದಂಡೇ ಇದೆ. ಈ ಚಿತ್ರ ಆಗಸ್ಟ್ 15ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು